<p><strong>ಬೀದರ್</strong>: ಲೇಖಕಿ ಹಾಗೂ ಸಾಮಾಜಿಕ ಕಾರ್ಯಕರ್ತೆ ಬಾನು ಮುಸ್ತಾಕ್ ಅವರು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಚಪ್ಪಲಿ ಧರಿಸಿ ನಮನ ಸಲ್ಲಿಸಿರುವ ಘಟನೆಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಬೀದರ್ ಜಿಲ್ಲಾ ಘಟಕ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.</p>.<p>‘ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ದೇಶದ 140 ಕೋಟಿಗೂ ಹೆಚ್ಚು ಜನರ ಬದುಕಿಗೆ ದಾರಿ ತೋರಿದ ಮಹಾನ್ ಚಿಂತಕ, ಸಂವಿಧಾನ ಶಿಲ್ಪಿ ಹಾಗೂ ಸಮಾಜ ಸುಧಾರಕರಾಗಿದ್ದಾರೆ. ಅಂತಹ ಮಹನೀಯರ ಭಾವಚಿತ್ರಕ್ಕೆ ನಮನ ಸಲ್ಲಿಸುವ ಸಂದರ್ಭದಲ್ಲಿ ಚಪ್ಪಲಿ ಧರಿಸಿ ನಮನ ಸಲ್ಲಿಸಿರುವುದು ಅಸಮಂಜಸ ಹಾಗೂ ಅವಮಾನಕಾರಿಯಾಗಿದೆ’ ಎಂದು ಸಮಿತಿಯ ಜಿಲ್ಲಾ ಸಂಚಾಲಕ ಸುನಿಲ್ ಸಂಗಮ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>‘ಈ ಘಟನೆ ಕುರಿತು ಹಲವು ಸಂಘಟನೆಗಳು, ಹಿರಿಯ ಮೇಧಾವಿಗಳು ಮತ್ತು ಸಮಾಜದ ಹಿತಚಿಂತಕರು ಆಕ್ಷೇಪ ವ್ಯಕ್ತಪಡಿಸಿದಾಗ, ‘ಚಪ್ಪಲಿ ನನ್ನ ಮನೆ ದೇವರು’ ಎಂದು ಹೇಳಿರುವುದಾಗಿ ವರದಿಯಾಗಿದೆ. ಆದರೆ ಸಮಾಜದಲ್ಲಿ ಮಾನವೀಯತೆ ಹಾಗೂ ಪರಸ್ಪರ ಗೌರವದ ಮೌಲ್ಯಗಳನ್ನು ಕಾಪಾಡುವ ವ್ಯಕ್ತಿಯಾಗಿ ಇಂತಹ ನಡೆ ತಕ್ಕದ್ದು ಅಲ್ಲ, ಹೀಗಾಗಿ ಬಾನು ಮುಸ್ತಾಕ್ ಅವರು ತಮ್ಮ ನಡೆಗೆ ಸಾರ್ವಜನಿಕವಾಗಿ ಸ್ಪಷ್ಟನೆ ನೀಡಬೇಕು ಅಥವಾ ಕ್ಷಮೆಯಾಚನೆ ಸಲ್ಲಿಸಬೇಕು’ ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ಲೇಖಕಿ ಹಾಗೂ ಸಾಮಾಜಿಕ ಕಾರ್ಯಕರ್ತೆ ಬಾನು ಮುಸ್ತಾಕ್ ಅವರು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಚಪ್ಪಲಿ ಧರಿಸಿ ನಮನ ಸಲ್ಲಿಸಿರುವ ಘಟನೆಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಬೀದರ್ ಜಿಲ್ಲಾ ಘಟಕ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.</p>.<p>‘ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ದೇಶದ 140 ಕೋಟಿಗೂ ಹೆಚ್ಚು ಜನರ ಬದುಕಿಗೆ ದಾರಿ ತೋರಿದ ಮಹಾನ್ ಚಿಂತಕ, ಸಂವಿಧಾನ ಶಿಲ್ಪಿ ಹಾಗೂ ಸಮಾಜ ಸುಧಾರಕರಾಗಿದ್ದಾರೆ. ಅಂತಹ ಮಹನೀಯರ ಭಾವಚಿತ್ರಕ್ಕೆ ನಮನ ಸಲ್ಲಿಸುವ ಸಂದರ್ಭದಲ್ಲಿ ಚಪ್ಪಲಿ ಧರಿಸಿ ನಮನ ಸಲ್ಲಿಸಿರುವುದು ಅಸಮಂಜಸ ಹಾಗೂ ಅವಮಾನಕಾರಿಯಾಗಿದೆ’ ಎಂದು ಸಮಿತಿಯ ಜಿಲ್ಲಾ ಸಂಚಾಲಕ ಸುನಿಲ್ ಸಂಗಮ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>‘ಈ ಘಟನೆ ಕುರಿತು ಹಲವು ಸಂಘಟನೆಗಳು, ಹಿರಿಯ ಮೇಧಾವಿಗಳು ಮತ್ತು ಸಮಾಜದ ಹಿತಚಿಂತಕರು ಆಕ್ಷೇಪ ವ್ಯಕ್ತಪಡಿಸಿದಾಗ, ‘ಚಪ್ಪಲಿ ನನ್ನ ಮನೆ ದೇವರು’ ಎಂದು ಹೇಳಿರುವುದಾಗಿ ವರದಿಯಾಗಿದೆ. ಆದರೆ ಸಮಾಜದಲ್ಲಿ ಮಾನವೀಯತೆ ಹಾಗೂ ಪರಸ್ಪರ ಗೌರವದ ಮೌಲ್ಯಗಳನ್ನು ಕಾಪಾಡುವ ವ್ಯಕ್ತಿಯಾಗಿ ಇಂತಹ ನಡೆ ತಕ್ಕದ್ದು ಅಲ್ಲ, ಹೀಗಾಗಿ ಬಾನು ಮುಸ್ತಾಕ್ ಅವರು ತಮ್ಮ ನಡೆಗೆ ಸಾರ್ವಜನಿಕವಾಗಿ ಸ್ಪಷ್ಟನೆ ನೀಡಬೇಕು ಅಥವಾ ಕ್ಷಮೆಯಾಚನೆ ಸಲ್ಲಿಸಬೇಕು’ ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>