<p><strong>ಕಮಲನಗರ: ‘</strong>ತಾಲ್ಲೂಕಿನ ಎಲ್ಲ ಬ್ರಿಡ್ಜ್ ಕಂ ಬ್ಯಾರೇಜ್ಗಳಿಗೆ ಅಳವಡಿಸಿದ ಗೇಟ್ಗಳು ಸರಿಯಾಗಿ ಕಾರ್ಯನಿರ್ವಹಿಸದ ಕಾರಣ ಕೆರೆ ಮತ್ತು ನದಿಗಳಲ್ಲಿ ನೀರು ಸಂಗ್ರಹವಾಗುತ್ತಿಲ್ಲ. ಬದಲಿ ಗೇಟ್ಗಳನ್ನು ಅಳವಡಿಸಬೇಕು’ ಎಂದು ರೈತ ಸಂಘದ ಪದಾಧಿಕಾರಿಗಳು ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿದರು.</p>.<p>ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಪ್ರವೀಣ ಕುಲಕರ್ಣಿ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.</p>.<p>ಬ್ಯಾರೇಜ್ ಮತ್ತು ಕೆರೆಗಳಿಗೆ ಅಳವಡಿಸಿದ ಗೇಟ್ಗಳ ಖರೀದಿಯಲ್ಲಿ ಅವ್ಯವಹಾರ ನಡೆದಿದೆ. ಇದರಿಂದ ಕಳಪೆ ಗುಣಮಟ್ಟದ ಗೇಟ್ಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಕೆರೆ ಮತ್ತು ಬ್ಯಾರೇಜ್ಗಳಲ್ಲಿ ನೀರು ಸಂಗ್ರಹವಾಗದೆ ಸೋರಿ ಹೋಗುತ್ತಿದೆ. ಇದರಿಂದ ಹೊಲಗಳಿಗೆ ನೀರು ಹರಿಸಲು ಸಾಧ್ಯವಾಗುತ್ತಿಲ್ಲ. ತಕ್ಷಣ ಕ್ರಮ ಕೈಗೊಂಡು ಸೂಕ್ತ ಗೇಟ್ಗಳನ್ನು ಅಳವಡಿಸಬೇಕು ಎಂದು ತಿಳಿಸಿದ್ದಾರೆ.</p>.<p>ಗ್ರಾಮ ಘಟಕದ ಅಧ್ಯಕ್ಷ ಮಡಿವಾಳಪ್ಪ ಮುರ್ಕೆ, ಉಪಾಧ್ಯಕ್ಷ ಚನ್ನಬಸಪ್ಪ ಬಿರಾದಾರ, ಚಂದ್ರಕಾಂತ ಬಿರಾದಾರ, ಮಡಿವಾಳಪ್ಪ, ಸಂಗಮೇಶ ಬಿರಾದಾರ ಹಾಗೂ ಉಮಾಕಾಂತ ಬನವಾಸೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಮಲನಗರ: ‘</strong>ತಾಲ್ಲೂಕಿನ ಎಲ್ಲ ಬ್ರಿಡ್ಜ್ ಕಂ ಬ್ಯಾರೇಜ್ಗಳಿಗೆ ಅಳವಡಿಸಿದ ಗೇಟ್ಗಳು ಸರಿಯಾಗಿ ಕಾರ್ಯನಿರ್ವಹಿಸದ ಕಾರಣ ಕೆರೆ ಮತ್ತು ನದಿಗಳಲ್ಲಿ ನೀರು ಸಂಗ್ರಹವಾಗುತ್ತಿಲ್ಲ. ಬದಲಿ ಗೇಟ್ಗಳನ್ನು ಅಳವಡಿಸಬೇಕು’ ಎಂದು ರೈತ ಸಂಘದ ಪದಾಧಿಕಾರಿಗಳು ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿದರು.</p>.<p>ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಪ್ರವೀಣ ಕುಲಕರ್ಣಿ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.</p>.<p>ಬ್ಯಾರೇಜ್ ಮತ್ತು ಕೆರೆಗಳಿಗೆ ಅಳವಡಿಸಿದ ಗೇಟ್ಗಳ ಖರೀದಿಯಲ್ಲಿ ಅವ್ಯವಹಾರ ನಡೆದಿದೆ. ಇದರಿಂದ ಕಳಪೆ ಗುಣಮಟ್ಟದ ಗೇಟ್ಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಕೆರೆ ಮತ್ತು ಬ್ಯಾರೇಜ್ಗಳಲ್ಲಿ ನೀರು ಸಂಗ್ರಹವಾಗದೆ ಸೋರಿ ಹೋಗುತ್ತಿದೆ. ಇದರಿಂದ ಹೊಲಗಳಿಗೆ ನೀರು ಹರಿಸಲು ಸಾಧ್ಯವಾಗುತ್ತಿಲ್ಲ. ತಕ್ಷಣ ಕ್ರಮ ಕೈಗೊಂಡು ಸೂಕ್ತ ಗೇಟ್ಗಳನ್ನು ಅಳವಡಿಸಬೇಕು ಎಂದು ತಿಳಿಸಿದ್ದಾರೆ.</p>.<p>ಗ್ರಾಮ ಘಟಕದ ಅಧ್ಯಕ್ಷ ಮಡಿವಾಳಪ್ಪ ಮುರ್ಕೆ, ಉಪಾಧ್ಯಕ್ಷ ಚನ್ನಬಸಪ್ಪ ಬಿರಾದಾರ, ಚಂದ್ರಕಾಂತ ಬಿರಾದಾರ, ಮಡಿವಾಳಪ್ಪ, ಸಂಗಮೇಶ ಬಿರಾದಾರ ಹಾಗೂ ಉಮಾಕಾಂತ ಬನವಾಸೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>