ಬಸವ ಧರ್ಮ ಪೀಠದಿಂದ ಜಂಗಮ ದೀಕ್ಷೆ ಪಡೆದಿದ್ದ ಬಸವಪ್ರಭು ಸ್ವಾಮೀಜಿ ಅವರಿಗೆ ಬಸವಕಲ್ಯಾಣದ ಬಸವ ಮಹಾಮನೆಯಲ್ಲಿ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ, ಬಸವ ತತ್ವ ಪ್ರಸಾರಕ್ಕೆ ಅನುಕೂಲ ಮಾಡಿಕೊಡಲಾಗಿತ್ತು. ಉನ್ನತ ವ್ಯಾಸಂಗ ಹಾಗೂ ಡಾಕ್ಟರೇಟ್ ಪಡೆಯುವ ಹಂಬಲ ವ್ಯಕ್ತಪಡಿಸಿದಾಗ, ಅದಕ್ಕೂ ಅನುವು ಮಾಡಿಕೊಡಲಾಗಿತ್ತು ಎಂದು ಹೇಳಿದ್ದಾರೆ.