<p><strong>ಬೀದರ್:</strong> ‘12ನೇ ಶತಮಾನದ ಬಸವಣ್ಣನವರು ಜಗತ್ತಿನ ಸರ್ವ ಶ್ರೇಷ್ಠ ಆರ್ಥಿಕ ತಜ್ಞರಾಗಿದ್ದರು’ ಎಂದು ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸಂಜೀವಕುಮಾರ ಅತಿವಾಳೆ ತಿಳಿಸಿದರು.</p>.<p>ನಗರದಲ್ಲಿ ಸೋಮವಾರ ಆಯೋಜಿಸಿದ್ದ ವಿಶ್ವಗುರು ಬಸವಣ್ಣನವರ ಜಯಂತಿ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ 110ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಕನ್ನಡ ಸಾಹಿತ್ಯಕ್ಕೆ ವಚನ ಸಾಹಿತ್ಯದ ಕೊಡುಗೆ ಶ್ರೇಷ್ಠವಾದುದು. ಅಂತಹ ಸಾಹಿತ್ಯ, ಭಾಷೆ, ಸಂಸ್ಕೃತಿ ಉಳಿಸುವ ನಿಟ್ಟಿನಲ್ಲಿ ಶತಮಾನೋತ್ಸವ ಸಂಭ್ರಮದ ಕನ್ನಡ ಸಾಹಿತ್ಯ ಪರಿಷತ್ತಿನ ಪಾತ್ರ ಗಣನೀಯವಾದದ್ದು. ಜಗತ್ತಿನಲ್ಲಿಯೇ ಅತಿ ಹೆಚ್ಚು ಸದಸ್ಯತ್ವ ಹೊಂದಿರುವ ಸಂಸ್ಥೆ ಸಾಹಿತ್ಯ ಪರಿಷತ್ತು ಎಂದು ಹೇಳಿದರು.</p>.<p>ಗಡಿ ಭಾಗದಲ್ಲಿ ಕನ್ನಡದ ಬೆಳವಣಿಗೆಗೆ ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ ಕೂಡ ಕನ್ನಡ ಅಭಿವೃದ್ಧಿಗಾಗಿ ಪರಿಷತ್ತಿನೊಂದಿಗೆ ಕೆಲಸ ಮಾಡಲು ಇಚ್ಛಿಸುತ್ತದೆ ಎಂದರು.</p>.<p>ಸ್ಪರ್ಧಾ ಸಂಕಲ್ಪ ಅಕಾಡೆಮಿ ಅಧ್ಯಕ್ಷ ನಾಗೇಶ ಸ್ವಾಮಿ ಮಾತನಾಡಿ, ಅನೇಕ ಸಾಹಿತಿಗಳು, ಕಲಾವಿದರು, ಹೋರಾಟಗಾರರ ಶ್ರಮದಿಂದ ಇವತ್ತು ಗಡಿ ಭಾಗದಲ್ಲಿ ಕನ್ನಡ ಉಳಿದುಕೊಂಡಿದೆ ಎಂದು ತಿಳಿಸಿದರು.</p>.<p>ತಾಲ್ಲೂಕು ಕಸಾಪ ಮಹಿಳಾ ಘಟಕದ ಅಧ್ಯಕ್ಷೆ ರೂಪಾ ಪಾಟೀಲ ಮಾತನಾಡಿ, ಚಿಕ್ಕಂದಿನಿಂದಲೇ ಬಸವಣ್ಣನವರ ವಚನಗಳನ್ನು ನಮ್ಮ ಹಿರಿಯರು ಹೇಳಿಕೊಡುತ್ತಿದ್ದರು. ನೂರಕ್ಕೂ ಹೆಚ್ಚು ವಚನಗಳು ನಮ್ಮ ಅಜ್ಜಿ ಬಾಯಿ ಪಾಠವಾಗಿ ಹೇಳುತ್ತಾರೆ. ವಚನ ಸಾಹಿತ್ಯ ಜನರ ಬದುಕಿಗೆ ಮಾರ್ಗದಶಿಯಾಗಿದೆ ಎಂದರು.</p>.<p>ಪರಿಷತ್ತಿನ ಜಿಲ್ಲಾ ಗೌರವ ಕಾರ್ಯದರ್ಶಿ ಟಿ. ಎಂ. ಮಚ್ಚೆ, ತಾಲ್ಲೂಕು ಕಸಾಪ ಅಧ್ಯಕ್ಷ ಎಂ. ಎಸ್. ಮನೋಹರ, ಗೌರವ ಕಾರ್ಯದರ್ಶಿ ಪ್ರೊ. ಜಗನ್ನಾಥ ಕಮಲಾಪೂರೆ, ಸಿದ್ಧಾರೂಢ ಭಾಲ್ಕೆ, ಅಶೋಕ ದಿಡಗೆ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ‘12ನೇ ಶತಮಾನದ ಬಸವಣ್ಣನವರು ಜಗತ್ತಿನ ಸರ್ವ ಶ್ರೇಷ್ಠ ಆರ್ಥಿಕ ತಜ್ಞರಾಗಿದ್ದರು’ ಎಂದು ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸಂಜೀವಕುಮಾರ ಅತಿವಾಳೆ ತಿಳಿಸಿದರು.</p>.<p>ನಗರದಲ್ಲಿ ಸೋಮವಾರ ಆಯೋಜಿಸಿದ್ದ ವಿಶ್ವಗುರು ಬಸವಣ್ಣನವರ ಜಯಂತಿ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ 110ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಕನ್ನಡ ಸಾಹಿತ್ಯಕ್ಕೆ ವಚನ ಸಾಹಿತ್ಯದ ಕೊಡುಗೆ ಶ್ರೇಷ್ಠವಾದುದು. ಅಂತಹ ಸಾಹಿತ್ಯ, ಭಾಷೆ, ಸಂಸ್ಕೃತಿ ಉಳಿಸುವ ನಿಟ್ಟಿನಲ್ಲಿ ಶತಮಾನೋತ್ಸವ ಸಂಭ್ರಮದ ಕನ್ನಡ ಸಾಹಿತ್ಯ ಪರಿಷತ್ತಿನ ಪಾತ್ರ ಗಣನೀಯವಾದದ್ದು. ಜಗತ್ತಿನಲ್ಲಿಯೇ ಅತಿ ಹೆಚ್ಚು ಸದಸ್ಯತ್ವ ಹೊಂದಿರುವ ಸಂಸ್ಥೆ ಸಾಹಿತ್ಯ ಪರಿಷತ್ತು ಎಂದು ಹೇಳಿದರು.</p>.<p>ಗಡಿ ಭಾಗದಲ್ಲಿ ಕನ್ನಡದ ಬೆಳವಣಿಗೆಗೆ ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ ಕೂಡ ಕನ್ನಡ ಅಭಿವೃದ್ಧಿಗಾಗಿ ಪರಿಷತ್ತಿನೊಂದಿಗೆ ಕೆಲಸ ಮಾಡಲು ಇಚ್ಛಿಸುತ್ತದೆ ಎಂದರು.</p>.<p>ಸ್ಪರ್ಧಾ ಸಂಕಲ್ಪ ಅಕಾಡೆಮಿ ಅಧ್ಯಕ್ಷ ನಾಗೇಶ ಸ್ವಾಮಿ ಮಾತನಾಡಿ, ಅನೇಕ ಸಾಹಿತಿಗಳು, ಕಲಾವಿದರು, ಹೋರಾಟಗಾರರ ಶ್ರಮದಿಂದ ಇವತ್ತು ಗಡಿ ಭಾಗದಲ್ಲಿ ಕನ್ನಡ ಉಳಿದುಕೊಂಡಿದೆ ಎಂದು ತಿಳಿಸಿದರು.</p>.<p>ತಾಲ್ಲೂಕು ಕಸಾಪ ಮಹಿಳಾ ಘಟಕದ ಅಧ್ಯಕ್ಷೆ ರೂಪಾ ಪಾಟೀಲ ಮಾತನಾಡಿ, ಚಿಕ್ಕಂದಿನಿಂದಲೇ ಬಸವಣ್ಣನವರ ವಚನಗಳನ್ನು ನಮ್ಮ ಹಿರಿಯರು ಹೇಳಿಕೊಡುತ್ತಿದ್ದರು. ನೂರಕ್ಕೂ ಹೆಚ್ಚು ವಚನಗಳು ನಮ್ಮ ಅಜ್ಜಿ ಬಾಯಿ ಪಾಠವಾಗಿ ಹೇಳುತ್ತಾರೆ. ವಚನ ಸಾಹಿತ್ಯ ಜನರ ಬದುಕಿಗೆ ಮಾರ್ಗದಶಿಯಾಗಿದೆ ಎಂದರು.</p>.<p>ಪರಿಷತ್ತಿನ ಜಿಲ್ಲಾ ಗೌರವ ಕಾರ್ಯದರ್ಶಿ ಟಿ. ಎಂ. ಮಚ್ಚೆ, ತಾಲ್ಲೂಕು ಕಸಾಪ ಅಧ್ಯಕ್ಷ ಎಂ. ಎಸ್. ಮನೋಹರ, ಗೌರವ ಕಾರ್ಯದರ್ಶಿ ಪ್ರೊ. ಜಗನ್ನಾಥ ಕಮಲಾಪೂರೆ, ಸಿದ್ಧಾರೂಢ ಭಾಲ್ಕೆ, ಅಶೋಕ ದಿಡಗೆ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>