<p><strong>ಬಸವಕಲ್ಯಾಣ: </strong>ಇಲ್ಲಿನ ಮಿನಿ ವಿಧಾನಸೌಧದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ನಗರದಲ್ಲಿ ಬಸವಜಯಂತಿಯನ್ನು ಸರಳವಾಗಿ ಆಚರಿಸಲು ನಿರ್ಧರಿಸಲಾಯಿತು.</p>.<p>ಈ ನಿಮಿತ್ತವಾಗಿ ಮೇ 14, 15 ಮತ್ತು 16 ರಂದು ನಡೆಯುವ ನಗರದ ಪ್ರಸಿದ್ಧ ಬಸವೇಶ್ವರ ದೇವಸ್ಥಾನದ ಜಾತ್ರೆಯನ್ನು ಕೋವಿಡ್ ಪ್ರಭಾವದ ಕಾರಣ ರದ್ದುಗೊಳಿಸಿ, ಪಲ್ಲಕ್ಕಿ, ನಂದಿಧ್ವಜ ಮೆರವಣಿಗೆ, ರಥೋತ್ಸವ ನಡೆಸದಿರಲು ನಿರ್ಣಯ ಕೈಗೊಳ್ಳಲಾಯಿತು.</p>.<p>ಬಸವಜಯಂತಿಯ ದಿನ ದೇವಸ್ಥಾನದಲ್ಲಿ ಪೂಜೆ, ಸಂಜೆ ಐದು ಮಹಿಳೆಯರ ಉಪಸ್ಥಿತಿಯಲ್ಲಿ ತೊಟ್ಟಿಲು ಕಾರ್ಯಕ್ರಮ ಹಾಗೂ ಮರುದಿನ ರಥದ ಪೂಜೆ ನೆರವೇರಿಸಲು, ಎಲ್ಲಿಯೂ ಜನಜಂಗುಳಿ ನೆರೆಯದಂತೆ ಹಾಗೂ ಕೋವಿಡ್ ನಿಯಮಗಳ ಪಾಲನೆ ಆಗುವಂತೆ ನೋಡಿಕೊಳ್ಳಲು ತೀರ್ಮಾನ ತೆಗೆದುಕೊಳ್ಳಲಾಯಿತು.</p>.<p>ಶಾಸಕ ಶರಣು ಸಲಗರ, ತಹಶೀಲ್ದಾರ್ ಸಾವಿತ್ರಿ ಸಲಗರ, ಸಿಪಿಐ ಜೆ.ಎಸ್.ನ್ಯಾಮಗೌಡ, ಸಬ್ ಇನ್ಸ್ಪೆಕ್ಟರ್ ಗುರು ಪಾಟೀಲ, ಬಸವೇಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷ ಅನಿಲಕುಮಾರ ರಗಟೆ, ಅಶೋಕ ನಾಗರಾಳೆ, ಜಗನ್ನಾಥ ಖೂಬಾ, ಸುಭಾಷ ಹೊಳಕುಂದೆ, ಬಸವರಾಜ ತೊಂಡಾರೆ, ರೇವಣಪ್ಪ ರಾಯವಾಡೆ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ: </strong>ಇಲ್ಲಿನ ಮಿನಿ ವಿಧಾನಸೌಧದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ನಗರದಲ್ಲಿ ಬಸವಜಯಂತಿಯನ್ನು ಸರಳವಾಗಿ ಆಚರಿಸಲು ನಿರ್ಧರಿಸಲಾಯಿತು.</p>.<p>ಈ ನಿಮಿತ್ತವಾಗಿ ಮೇ 14, 15 ಮತ್ತು 16 ರಂದು ನಡೆಯುವ ನಗರದ ಪ್ರಸಿದ್ಧ ಬಸವೇಶ್ವರ ದೇವಸ್ಥಾನದ ಜಾತ್ರೆಯನ್ನು ಕೋವಿಡ್ ಪ್ರಭಾವದ ಕಾರಣ ರದ್ದುಗೊಳಿಸಿ, ಪಲ್ಲಕ್ಕಿ, ನಂದಿಧ್ವಜ ಮೆರವಣಿಗೆ, ರಥೋತ್ಸವ ನಡೆಸದಿರಲು ನಿರ್ಣಯ ಕೈಗೊಳ್ಳಲಾಯಿತು.</p>.<p>ಬಸವಜಯಂತಿಯ ದಿನ ದೇವಸ್ಥಾನದಲ್ಲಿ ಪೂಜೆ, ಸಂಜೆ ಐದು ಮಹಿಳೆಯರ ಉಪಸ್ಥಿತಿಯಲ್ಲಿ ತೊಟ್ಟಿಲು ಕಾರ್ಯಕ್ರಮ ಹಾಗೂ ಮರುದಿನ ರಥದ ಪೂಜೆ ನೆರವೇರಿಸಲು, ಎಲ್ಲಿಯೂ ಜನಜಂಗುಳಿ ನೆರೆಯದಂತೆ ಹಾಗೂ ಕೋವಿಡ್ ನಿಯಮಗಳ ಪಾಲನೆ ಆಗುವಂತೆ ನೋಡಿಕೊಳ್ಳಲು ತೀರ್ಮಾನ ತೆಗೆದುಕೊಳ್ಳಲಾಯಿತು.</p>.<p>ಶಾಸಕ ಶರಣು ಸಲಗರ, ತಹಶೀಲ್ದಾರ್ ಸಾವಿತ್ರಿ ಸಲಗರ, ಸಿಪಿಐ ಜೆ.ಎಸ್.ನ್ಯಾಮಗೌಡ, ಸಬ್ ಇನ್ಸ್ಪೆಕ್ಟರ್ ಗುರು ಪಾಟೀಲ, ಬಸವೇಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷ ಅನಿಲಕುಮಾರ ರಗಟೆ, ಅಶೋಕ ನಾಗರಾಳೆ, ಜಗನ್ನಾಥ ಖೂಬಾ, ಸುಭಾಷ ಹೊಳಕುಂದೆ, ಬಸವರಾಜ ತೊಂಡಾರೆ, ರೇವಣಪ್ಪ ರಾಯವಾಡೆ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>