ಕೆಲ ತಿಂಗಳ ಹಿಂದೆ ಹೋರಾಟ ಸಮಿತಿ ನೇತೃತ್ವದಲ್ಲಿ ಒಂದು ಸಲ ಧರಣಿ ನಡೆಸಿ ಮನವಿಪತ್ರ ಸಲ್ಲಿಸಲಾಗಿತ್ತು. ಈಗ ಮತ್ತೆ ಬೃಹತ್ ಪಾದಯಾತ್ರೆ ನಡೆಸುವುದಕ್ಕೆ ಕೆಲ ದಿನಗಳಿಂದ ಸಿದ್ಧತೆ ನಡೆದಿದೆ. ಡಿಸೆಂಬರ್ 15ರಂದು ನಡೆಯುವ ಪ್ರತಿಭಟನೆಯಲ್ಲಿ ಜಿಲ್ಲೆಯ ಎಲ್ಲ ಮಠಾಧೀಶರು, ರಾಜಕೀಯ ಮುಖಂಡರು, ಗಣ್ಯರು ಭಾಗವಹಿಸಲಿದ್ದಾರೆ.