<p>ಬಸವಕಲ್ಯಾಣ: ನಗರದ ತಾಲ್ಲೂಕು ಪಂಚಾಯಿತಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಪಂಚಾಯತ್ ರಾಜ್ ದಿವಸ್ ಕಾರ್ಯಕ್ರಮದಲ್ಲಿ ಶೇ 100 ರಷ್ಟು ತೆರಿಗೆ ಸಂಗ್ರಹಿಸಿ ಉತ್ತಮ ಸಾಧನೆ ತೋರಿದ ತಾಲ್ಲೂಕಿನ ಆಲಗೂಡ ಗ್ರಾಮ ಪಂಚಾಯಿತಿಯ ಸಿಬ್ಬಂದಿಯವರನ್ನು ಸನ್ಮಾನಿಸಲಾಯಿತು.</p>.<p>ಪಿಡಿಒ ಸುಲೋಚನಾ ಬಂಡೆ, ಸಿಬ್ಬಂದಿ ಮಹಾದೇವ ಬೆಳಮಗೆ, ದಯಾನಂದ ಪಾಟೀಲ, ಕುಮಾರ ಗುರವ ಅವರನ್ನು ಸನ್ಮಾನಿಸಲಾಯಿತು.</p>.<p>ಇಒ ರಮೇಶ ಸುಲ್ಫಿ ಮಾತನಾಡಿ, ‘ಗ್ರಾಮ ಪಂಚಾಯಿತಿಗಳ ಅಭಿವೃದ್ಧಿಗೆ ತೆರಿಗೆ ವಸೂಲಾತಿ ಅತ್ಯಂತ ಮುಖ್ಯವಾಗಿದೆ. ಪಂಚಾಯಿತಿ ಸಿಬ್ಬಂದಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದರೆ, ಕರ್ತವ್ಯ ನಿಷ್ಠರಾದರೆ ಗ್ರಾಮೀಣ ಪ್ರದೇಶದ ವಿಕಾಸ ಸಾಧ್ಯವಾಗುತ್ತದೆ. ಜನರ ಸಹಕಾರ ಮತ್ತು ಸಹಭಾಗಿತ್ವದಿಂದ ಯಾವುದೇ ಕೆಲಸದಲ್ಲಿ ಯಶಸ್ಸು ದೊರಕುತ್ತದೆ’ ಎಂದರು.</p>.<p>ತಾಲ್ಲೂಕು ಪಂಚಾಯಿತಿ ಯೋಜನಾ ಸಹಾಯಕ ನಿರ್ದೇಶಕ ಸಲೀಂ, ಅರುಣಕುಮಾರ ಪಾಟೀಲ ಮಾತನಾಡಿದರು. ವಿವಿಧ ಗ್ರಾಮ ಪಂಚಾಯಿತಿಗಳ ಪಿಡಿಒ ಮತ್ತು ಸಿಬ್ಬಂದಿಯವರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260425-33-1355435499</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಸವಕಲ್ಯಾಣ: ನಗರದ ತಾಲ್ಲೂಕು ಪಂಚಾಯಿತಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಪಂಚಾಯತ್ ರಾಜ್ ದಿವಸ್ ಕಾರ್ಯಕ್ರಮದಲ್ಲಿ ಶೇ 100 ರಷ್ಟು ತೆರಿಗೆ ಸಂಗ್ರಹಿಸಿ ಉತ್ತಮ ಸಾಧನೆ ತೋರಿದ ತಾಲ್ಲೂಕಿನ ಆಲಗೂಡ ಗ್ರಾಮ ಪಂಚಾಯಿತಿಯ ಸಿಬ್ಬಂದಿಯವರನ್ನು ಸನ್ಮಾನಿಸಲಾಯಿತು.</p>.<p>ಪಿಡಿಒ ಸುಲೋಚನಾ ಬಂಡೆ, ಸಿಬ್ಬಂದಿ ಮಹಾದೇವ ಬೆಳಮಗೆ, ದಯಾನಂದ ಪಾಟೀಲ, ಕುಮಾರ ಗುರವ ಅವರನ್ನು ಸನ್ಮಾನಿಸಲಾಯಿತು.</p>.<p>ಇಒ ರಮೇಶ ಸುಲ್ಫಿ ಮಾತನಾಡಿ, ‘ಗ್ರಾಮ ಪಂಚಾಯಿತಿಗಳ ಅಭಿವೃದ್ಧಿಗೆ ತೆರಿಗೆ ವಸೂಲಾತಿ ಅತ್ಯಂತ ಮುಖ್ಯವಾಗಿದೆ. ಪಂಚಾಯಿತಿ ಸಿಬ್ಬಂದಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದರೆ, ಕರ್ತವ್ಯ ನಿಷ್ಠರಾದರೆ ಗ್ರಾಮೀಣ ಪ್ರದೇಶದ ವಿಕಾಸ ಸಾಧ್ಯವಾಗುತ್ತದೆ. ಜನರ ಸಹಕಾರ ಮತ್ತು ಸಹಭಾಗಿತ್ವದಿಂದ ಯಾವುದೇ ಕೆಲಸದಲ್ಲಿ ಯಶಸ್ಸು ದೊರಕುತ್ತದೆ’ ಎಂದರು.</p>.<p>ತಾಲ್ಲೂಕು ಪಂಚಾಯಿತಿ ಯೋಜನಾ ಸಹಾಯಕ ನಿರ್ದೇಶಕ ಸಲೀಂ, ಅರುಣಕುಮಾರ ಪಾಟೀಲ ಮಾತನಾಡಿದರು. ವಿವಿಧ ಗ್ರಾಮ ಪಂಚಾಯಿತಿಗಳ ಪಿಡಿಒ ಮತ್ತು ಸಿಬ್ಬಂದಿಯವರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260425-33-1355435499</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>