<p><strong>ಬೀದರ್:</strong> ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ವರಿಷ್ಠರು ಗೆಲ್ಲುವ ಸಮರ್ಥ ಅಭ್ಯರ್ಥಿಗೆ ಟಿಕೆಟ್ ಕೊಡಲಿದ್ದಾರೆ ಎಂದು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಿಜೆಪಿ ಉಸ್ತುವಾರಿಯಾದ ಸಂಸದ ಭಗವಂತ ಖೂಬಾ ತಿಳಿಸಿದ್ದಾರೆ.</p>.<p>ಬಿಜೆಪಿ ಟಿಕೆಟ್ಗೆ ಹಲವರು ಆಕಾಂಕ್ಷಿಗಳು ಇದ್ದಾರೆ. ವರಿಷ್ಠರು ಅಳೆದು ತೂಗಿ ಒಬ್ಬರನ್ನು ಆಯ್ಕೆ ಮಾಡಲಿದ್ದಾರೆ. ಉಳಿದವರು ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಲಿದ್ದಾರೆ ಎಂದು ಹೇಳಿದ್ದಾರೆ.</p>.<p>ಉಪ ಚುನಾವಣೆ ತಯಾರಿಗೆ ಸಂಬಂಧಿಸಿದಂತೆ ಅನೇಕ ಬಾರಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಸಲಾಗಿದೆ. ಎಲ್ಲ ಹಂತದಲ್ಲೂ ಪಕ್ಷದ ಸಂಘಟನೆ ಬಲವಾಗಿದೆ ಎಂದು ತಿಳಿಸಿದ್ದಾರೆ.</p>.<p>ಮುಖಂಡರು ಹಾಗೂ ಕಾರ್ಯಕರ್ತರು ಸೇರಿ ಪಕ್ಷದ ಸಾಧನೆಗಳ ಪ್ರಚಾರ ಮಾಡಿ, ಹಗಲಿರುಳು ಶ್ರಮಿಸಿ, ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲಿದ್ದೇವೆಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಿಗೆ ಭರವಸೆ ನೀಡಿದ್ದೇವೆ ಎಂದು ಹೇಳಿದ್ದಾರೆ.</p>.<p>ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸಿವೆ. ಸಿದ್ದರಾಮಯ್ಯ ಅವರ ಐದು ವರ್ಷಗಳ ದುರಾಡಳಿತವನ್ನು ಜನ ಮರೆತಿಲ್ಲ. ಉತ್ತಮ ಆಡಳಿತ ಹಾಗೂ ಬಸವಕಲ್ಯಾಣ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಪಕ್ಷದ ಅಭ್ಯರ್ಥಿ ಗೆಲುವಿಗೆ ದಾರಿ ಮಾಡಿಕೊಡಲಿದೆ ಎಂದು ತಿಳಿಸಿದ್ದಾರೆ.</p>.<p><strong>ಕಟಿಲ್ ಭೇಟಿ: </strong>ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿ ನೇಮಕ ಮಾಡಿದ್ದಕ್ಕೆ ಖೂಬಾ ಅವರು ನವದೆಹಲಿಯಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನಕುಮಾರ ಕಟಿಲ್ ಅವರನ್ನು ಭೇಟಿ ಮಾಡಿ ಸನ್ಮಾನಿಸಿದರು.</p>.<p>ವಿಧಾನಸಭಾ ಉಪ ಚುನಾವಣೆ ಕುರಿತು ಚರ್ಚೆ ನಡೆಸಿದರು. ಬಾಗಲಕೋಟೆ ಸಂಸದ ಪಿ.ಸಿ. ಗದ್ದಗೌಡರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ವರಿಷ್ಠರು ಗೆಲ್ಲುವ ಸಮರ್ಥ ಅಭ್ಯರ್ಥಿಗೆ ಟಿಕೆಟ್ ಕೊಡಲಿದ್ದಾರೆ ಎಂದು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಿಜೆಪಿ ಉಸ್ತುವಾರಿಯಾದ ಸಂಸದ ಭಗವಂತ ಖೂಬಾ ತಿಳಿಸಿದ್ದಾರೆ.</p>.<p>ಬಿಜೆಪಿ ಟಿಕೆಟ್ಗೆ ಹಲವರು ಆಕಾಂಕ್ಷಿಗಳು ಇದ್ದಾರೆ. ವರಿಷ್ಠರು ಅಳೆದು ತೂಗಿ ಒಬ್ಬರನ್ನು ಆಯ್ಕೆ ಮಾಡಲಿದ್ದಾರೆ. ಉಳಿದವರು ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಲಿದ್ದಾರೆ ಎಂದು ಹೇಳಿದ್ದಾರೆ.</p>.<p>ಉಪ ಚುನಾವಣೆ ತಯಾರಿಗೆ ಸಂಬಂಧಿಸಿದಂತೆ ಅನೇಕ ಬಾರಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಸಲಾಗಿದೆ. ಎಲ್ಲ ಹಂತದಲ್ಲೂ ಪಕ್ಷದ ಸಂಘಟನೆ ಬಲವಾಗಿದೆ ಎಂದು ತಿಳಿಸಿದ್ದಾರೆ.</p>.<p>ಮುಖಂಡರು ಹಾಗೂ ಕಾರ್ಯಕರ್ತರು ಸೇರಿ ಪಕ್ಷದ ಸಾಧನೆಗಳ ಪ್ರಚಾರ ಮಾಡಿ, ಹಗಲಿರುಳು ಶ್ರಮಿಸಿ, ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲಿದ್ದೇವೆಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಿಗೆ ಭರವಸೆ ನೀಡಿದ್ದೇವೆ ಎಂದು ಹೇಳಿದ್ದಾರೆ.</p>.<p>ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸಿವೆ. ಸಿದ್ದರಾಮಯ್ಯ ಅವರ ಐದು ವರ್ಷಗಳ ದುರಾಡಳಿತವನ್ನು ಜನ ಮರೆತಿಲ್ಲ. ಉತ್ತಮ ಆಡಳಿತ ಹಾಗೂ ಬಸವಕಲ್ಯಾಣ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಪಕ್ಷದ ಅಭ್ಯರ್ಥಿ ಗೆಲುವಿಗೆ ದಾರಿ ಮಾಡಿಕೊಡಲಿದೆ ಎಂದು ತಿಳಿಸಿದ್ದಾರೆ.</p>.<p><strong>ಕಟಿಲ್ ಭೇಟಿ: </strong>ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿ ನೇಮಕ ಮಾಡಿದ್ದಕ್ಕೆ ಖೂಬಾ ಅವರು ನವದೆಹಲಿಯಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನಕುಮಾರ ಕಟಿಲ್ ಅವರನ್ನು ಭೇಟಿ ಮಾಡಿ ಸನ್ಮಾನಿಸಿದರು.</p>.<p>ವಿಧಾನಸಭಾ ಉಪ ಚುನಾವಣೆ ಕುರಿತು ಚರ್ಚೆ ನಡೆಸಿದರು. ಬಾಗಲಕೋಟೆ ಸಂಸದ ಪಿ.ಸಿ. ಗದ್ದಗೌಡರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>