<p><strong>ಬಸವಕಲ್ಯಾಣ (ಬೀದರ್ ಜಿಲ್ಲೆ): </strong>ಬಸವಕಲ್ಯಾಣ ತಾಲ್ಲೂಕಿನ ತ್ರಿಪುರಾಂತ ಗ್ರಾಮದಲ್ಲಿ ಶುಕ್ರವಾರ ವ್ಯಕ್ತಿಯೊಬ್ಬ ಮತದಾರರಿಗೆ ಹಣ ಹಂಚಲು ಬಂದಾಗ ಗ್ರಾಮಸ್ಥರು ಅವನನ್ನು ಹಿಡಿದು ಚಪ್ಪಲಿಯಿಂದ ಹೊಡೆದಿದ್ದಾರೆ.</p>.<p>ರಾಜಕೀಯ ಪಕ್ಷಗಳೇ ಮತದಾರರನ್ನು ಭ್ರಷ್ಟರನ್ನಾಗಿ ಮಾಡುತ್ತಿವೆ. ನಮ್ಮಲ್ಲಿ ಹಣ ಇಲ್ಲವೆ? ನಿಮ್ಮ ಹಣ ನಮಗೆ ಏಕೆ ಕೊಡುತ್ತಿದ್ದೀರಿ ಎನ್ನುತ ವ್ಯಕ್ತಿಯ ಕೈಯಲ್ಲಿದ್ದ ನೋಟುಗಳನ್ನು ಕಿತ್ತುಕೊಂಡು ಗಾಳಿಯಲ್ಲಿ ತೂರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p><strong>ಓದಿ:</strong><a href="https://www.prajavani.net/district/raichur/congress-demand-for-psi-suspend-over-money-distribution-in-maski-822497.html" target="_blank">ಮಸ್ಕಿಯಲ್ಲಿ ಹಣ ಹಂಚಿಕೆ ಪ್ರಕರಣ: ಪಿಎಸ್ಐ ಅಮಾನತಿಗೆ ಡಿ.ಕೆ ಶಿವಕುಮಾರ್ ಆಗ್ರಹ</a></p>.<p>ಚುನಾವಣಾ ವೀಕ್ಷಕರಿಗೆ ಮೊಬೈಲ್ ಕರೆ ಮಾಡಿ ಮಾಹಿತಿ ನೀಡಿದ ನಂತರ ಫ್ಲಯಿಂಗ್ ಸ್ಕ್ವಾಡ್ ಹಾಗೂ ಪೊಲೀಸರು ಸ್ಥಳಕ್ಕೆ ಬಂದು ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡರು.</p>.<p>ಗ್ರಾಮಸ್ಥರು ಹಣ ಹಂಚಿಕೆ ಹಾಗೂ ವ್ಯಕ್ತಿಯ ಮೇಲೆ ಹಲ್ಲೆ ಮಾಡಿದ ದೃಶ್ಯವನ್ನು ಮೊಬೈಲ್ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾರೆ. ವಿಡಿಯೊ ವೈರಲ್ ಆಗಿದೆ.</p>.<p>ವಾಟ್ಸ್ಆ್ಯಪ್ಗಳಲ್ಲಿ ಹಣ ಹಂಚಿಕೆ ವಿಡಿಯೊ ವೈರಲ್ ಆಗುತ್ತಿದ್ದಂತೆಯೇ ಪ್ರಮುಖ ರಾಜಕೀಯ ಪಕ್ಷಗಳು ಪರಸ್ಪರರ ಮೇಲೆ ಆರೋಪ ಮಾಡಿವೆ.</p>.<p>‘ಫ್ಲಾಯಿಂಗ್ ಸ್ಕ್ವಾಡ್ ಗ್ರಾಮಕ್ಕೆ ತೆರಳಿ ಮಾಹಿತಿ ಪಡೆದಿದೆ. ಯಾವ ಪಕ್ಷದವರು ಹಣ ಹಂಚುತ್ತಿದ್ದರು ಎನ್ನುವ ಬಗ್ಗೆ ಸ್ಪಷ್ಟ ಮಾಹಿತಿ ದೊರಕಿಲ್ಲ. ವಿಚಾರಣೆ ನಡೆಸಲಾಗುತ್ತಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ (ಬೀದರ್ ಜಿಲ್ಲೆ): </strong>ಬಸವಕಲ್ಯಾಣ ತಾಲ್ಲೂಕಿನ ತ್ರಿಪುರಾಂತ ಗ್ರಾಮದಲ್ಲಿ ಶುಕ್ರವಾರ ವ್ಯಕ್ತಿಯೊಬ್ಬ ಮತದಾರರಿಗೆ ಹಣ ಹಂಚಲು ಬಂದಾಗ ಗ್ರಾಮಸ್ಥರು ಅವನನ್ನು ಹಿಡಿದು ಚಪ್ಪಲಿಯಿಂದ ಹೊಡೆದಿದ್ದಾರೆ.</p>.<p>ರಾಜಕೀಯ ಪಕ್ಷಗಳೇ ಮತದಾರರನ್ನು ಭ್ರಷ್ಟರನ್ನಾಗಿ ಮಾಡುತ್ತಿವೆ. ನಮ್ಮಲ್ಲಿ ಹಣ ಇಲ್ಲವೆ? ನಿಮ್ಮ ಹಣ ನಮಗೆ ಏಕೆ ಕೊಡುತ್ತಿದ್ದೀರಿ ಎನ್ನುತ ವ್ಯಕ್ತಿಯ ಕೈಯಲ್ಲಿದ್ದ ನೋಟುಗಳನ್ನು ಕಿತ್ತುಕೊಂಡು ಗಾಳಿಯಲ್ಲಿ ತೂರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p><strong>ಓದಿ:</strong><a href="https://www.prajavani.net/district/raichur/congress-demand-for-psi-suspend-over-money-distribution-in-maski-822497.html" target="_blank">ಮಸ್ಕಿಯಲ್ಲಿ ಹಣ ಹಂಚಿಕೆ ಪ್ರಕರಣ: ಪಿಎಸ್ಐ ಅಮಾನತಿಗೆ ಡಿ.ಕೆ ಶಿವಕುಮಾರ್ ಆಗ್ರಹ</a></p>.<p>ಚುನಾವಣಾ ವೀಕ್ಷಕರಿಗೆ ಮೊಬೈಲ್ ಕರೆ ಮಾಡಿ ಮಾಹಿತಿ ನೀಡಿದ ನಂತರ ಫ್ಲಯಿಂಗ್ ಸ್ಕ್ವಾಡ್ ಹಾಗೂ ಪೊಲೀಸರು ಸ್ಥಳಕ್ಕೆ ಬಂದು ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡರು.</p>.<p>ಗ್ರಾಮಸ್ಥರು ಹಣ ಹಂಚಿಕೆ ಹಾಗೂ ವ್ಯಕ್ತಿಯ ಮೇಲೆ ಹಲ್ಲೆ ಮಾಡಿದ ದೃಶ್ಯವನ್ನು ಮೊಬೈಲ್ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾರೆ. ವಿಡಿಯೊ ವೈರಲ್ ಆಗಿದೆ.</p>.<p>ವಾಟ್ಸ್ಆ್ಯಪ್ಗಳಲ್ಲಿ ಹಣ ಹಂಚಿಕೆ ವಿಡಿಯೊ ವೈರಲ್ ಆಗುತ್ತಿದ್ದಂತೆಯೇ ಪ್ರಮುಖ ರಾಜಕೀಯ ಪಕ್ಷಗಳು ಪರಸ್ಪರರ ಮೇಲೆ ಆರೋಪ ಮಾಡಿವೆ.</p>.<p>‘ಫ್ಲಾಯಿಂಗ್ ಸ್ಕ್ವಾಡ್ ಗ್ರಾಮಕ್ಕೆ ತೆರಳಿ ಮಾಹಿತಿ ಪಡೆದಿದೆ. ಯಾವ ಪಕ್ಷದವರು ಹಣ ಹಂಚುತ್ತಿದ್ದರು ಎನ್ನುವ ಬಗ್ಗೆ ಸ್ಪಷ್ಟ ಮಾಹಿತಿ ದೊರಕಿಲ್ಲ. ವಿಚಾರಣೆ ನಡೆಸಲಾಗುತ್ತಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>