<p><strong>ಬಸವಕಲ್ಯಾಣ</strong>: ನಗರದ ರಸ್ತೆಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗಿರುವ ಕಾರಣ ವರ್ತುಲ ರಸ್ತೆ ಮಂಜೂರು ಮಾಡಲು ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಧಾನ ಪರಿಷತ್ ಮಾಜಿ ಸದಸ್ಯ ವಿಜಯಸಿಂಗ್ ಸೋಮವಾರ ಮನವಿಪತ್ರ ಸಲ್ಲಿಸಿದರು.</p>.<p>ರಾಷ್ಟ್ರೀಯ ಹೆದ್ದಾರಿಯಿಂದ ಕೋಟೆವರೆಗೆ 7 ಕಿ.ಮೀ ಉದ್ದದ ಒಂದೇ ಮುಖ್ಯ ರಸ್ತೆ ಇದೆ. ಅಲ್ಲದೆ ನಗರದಲ್ಲಿ ಲಾರಿ ಮತ್ತಿತರ ವಾಹನಗಳ ಸಂಖ್ಯೆಯೂ ಅಧಿಕವಾಗಿದೆ. ಹೀಗಾಗಿ ಈ ರಸ್ತೆಯಲ್ಲಿ ವಾಹನ ದಟ್ಟಣೆ ಆಗುತ್ತಿದೆ. ಪಾದಚಾರಿಗಳಿಗೆ ಸಂಚಾರಕ್ಕೆ ಕಷ್ಟವಾಗುತ್ತಿದೆ. ಅಪಘಾತಗಳು ಸಹ ಸಂಭವಿಸುತ್ತಿವೆ. ಅನುಭವ ಮಂಟಪದ ಕಾಮಗಾರಿಯೂ ಪೂರ್ಣಗೊಳ್ಳುತ್ತಿರುವ ಕಾರಣ ಮುಂದಿನ ದಿನಗಳಲ್ಲಿ ಪ್ರವಾಸಿಗರ ಸಂಖ್ಯೆಯೂ ಹೆಚ್ಚಲಿದೆ. ಆದ್ದರಿಂದ ವರ್ತುಲ್ ರಸ್ತೆ ಅಗತ್ಯವಾಗಿದೆ ಎಂದಿದ್ದಾರೆ.</p>.<p>ನಗರದಲ್ಲಿ ಹಳೆಯ ಎಪಿಎಂಸಿ ಕಚೇರಿ ಮತ್ತು ಮಾರುಕಟ್ಟೆ ಇದೆ. ಹೊಸ ಹೈ ಟೆಕ್ ಮಾರುಕಟ್ಟೆ ನಿರ್ಮಾಣಕ್ಕೆ ಮಂಜೂರಾತಿ ನೀಡಬೇಕು. ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಯೋಜನೆ ಸಹ ಕೈಗೊಳ್ಳಬೇಕು ಎಂದೂ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ</strong>: ನಗರದ ರಸ್ತೆಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗಿರುವ ಕಾರಣ ವರ್ತುಲ ರಸ್ತೆ ಮಂಜೂರು ಮಾಡಲು ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಧಾನ ಪರಿಷತ್ ಮಾಜಿ ಸದಸ್ಯ ವಿಜಯಸಿಂಗ್ ಸೋಮವಾರ ಮನವಿಪತ್ರ ಸಲ್ಲಿಸಿದರು.</p>.<p>ರಾಷ್ಟ್ರೀಯ ಹೆದ್ದಾರಿಯಿಂದ ಕೋಟೆವರೆಗೆ 7 ಕಿ.ಮೀ ಉದ್ದದ ಒಂದೇ ಮುಖ್ಯ ರಸ್ತೆ ಇದೆ. ಅಲ್ಲದೆ ನಗರದಲ್ಲಿ ಲಾರಿ ಮತ್ತಿತರ ವಾಹನಗಳ ಸಂಖ್ಯೆಯೂ ಅಧಿಕವಾಗಿದೆ. ಹೀಗಾಗಿ ಈ ರಸ್ತೆಯಲ್ಲಿ ವಾಹನ ದಟ್ಟಣೆ ಆಗುತ್ತಿದೆ. ಪಾದಚಾರಿಗಳಿಗೆ ಸಂಚಾರಕ್ಕೆ ಕಷ್ಟವಾಗುತ್ತಿದೆ. ಅಪಘಾತಗಳು ಸಹ ಸಂಭವಿಸುತ್ತಿವೆ. ಅನುಭವ ಮಂಟಪದ ಕಾಮಗಾರಿಯೂ ಪೂರ್ಣಗೊಳ್ಳುತ್ತಿರುವ ಕಾರಣ ಮುಂದಿನ ದಿನಗಳಲ್ಲಿ ಪ್ರವಾಸಿಗರ ಸಂಖ್ಯೆಯೂ ಹೆಚ್ಚಲಿದೆ. ಆದ್ದರಿಂದ ವರ್ತುಲ್ ರಸ್ತೆ ಅಗತ್ಯವಾಗಿದೆ ಎಂದಿದ್ದಾರೆ.</p>.<p>ನಗರದಲ್ಲಿ ಹಳೆಯ ಎಪಿಎಂಸಿ ಕಚೇರಿ ಮತ್ತು ಮಾರುಕಟ್ಟೆ ಇದೆ. ಹೊಸ ಹೈ ಟೆಕ್ ಮಾರುಕಟ್ಟೆ ನಿರ್ಮಾಣಕ್ಕೆ ಮಂಜೂರಾತಿ ನೀಡಬೇಕು. ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಯೋಜನೆ ಸಹ ಕೈಗೊಳ್ಳಬೇಕು ಎಂದೂ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>