<p><strong>ಬಸವಕಲ್ಯಾಣ:</strong> ‘ನಗರದಲ್ಲಿ ತಾಲ್ಲೂಕು ಆಡಳಿತದಿಂದ ಮೇ 10ರಂದು ಆಯೋಜಿಸುವ ಮಹಾಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯಲ್ಲಿ ಬಹುಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು’ ಎಂದು ತಾಲ್ಲೂಕು ರೆಡ್ಡಿ ಸಮಾಜ ಸಂಘದ ಅಧ್ಯಕ್ಷ ವಿಜಯಕುಮಾರ ರೆಡ್ಡಿ ವಿನಂತಿಸಿದರು.</p>.<p>ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಅಂದು ಬೆಳಿಗ್ಗೆ 9 ಗಂಟೆಗೆ ನಗರದ ಐತಿಹಾಸಿಕ ಕೋಟೆಯಿಂದ ಮುಖ್ಯರಸ್ತೆಯ ಮೂಲಕ ಡಾ.ಅಂಬೇಡ್ಕರ್ ವೃತ್ತ ಮತ್ತು ಅಲ್ಲಿಂದ ತೇರು ಮೈದಾನದಲ್ಲಿನ ಸಭಾ ಭವನದವರೆಗೆ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ಸಮಾಜದವರು ಹಾಗೂ ಇತರರು ಉತ್ಸಾಹದಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡರೆ ಜಯಂತಿಯ ಸಂಭ್ರಮ ಅಧಿಕಗೊಳ್ಳುತ್ತದೆ’ ಎಂದರು.</p>.<p>ಸಮಾಜ ಸಂಘದ ಪ್ರಮುಖರಾದ ಹೇಮರೆಡ್ಡಿ ಗೌರೆ, ಪ್ರಕಾಶರೆಡ್ಡಿ ನರಹರೆ, ಸಂಘದ ಉಪಾಧ್ಯಕ್ಷ ರಾಜರೆಡ್ಡಿ ಪಾಟೀಲ, ಸಂಜೀವರೆಡ್ಡಿ ಗೌಂಡಗಾವೆ, ಮಾಣಿಕರೆಡ್ಡಿ ಯಡಮಲ್ಲೆ, ಗೋವಿಂದರೆಡ್ಡಿ ಕೋತಾಪಲ್ಲೆ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-33-211911414</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ:</strong> ‘ನಗರದಲ್ಲಿ ತಾಲ್ಲೂಕು ಆಡಳಿತದಿಂದ ಮೇ 10ರಂದು ಆಯೋಜಿಸುವ ಮಹಾಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯಲ್ಲಿ ಬಹುಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು’ ಎಂದು ತಾಲ್ಲೂಕು ರೆಡ್ಡಿ ಸಮಾಜ ಸಂಘದ ಅಧ್ಯಕ್ಷ ವಿಜಯಕುಮಾರ ರೆಡ್ಡಿ ವಿನಂತಿಸಿದರು.</p>.<p>ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಅಂದು ಬೆಳಿಗ್ಗೆ 9 ಗಂಟೆಗೆ ನಗರದ ಐತಿಹಾಸಿಕ ಕೋಟೆಯಿಂದ ಮುಖ್ಯರಸ್ತೆಯ ಮೂಲಕ ಡಾ.ಅಂಬೇಡ್ಕರ್ ವೃತ್ತ ಮತ್ತು ಅಲ್ಲಿಂದ ತೇರು ಮೈದಾನದಲ್ಲಿನ ಸಭಾ ಭವನದವರೆಗೆ ಭಾವಚಿತ್ರದ ಮೆರವಣಿಗೆ ನಡೆಯಲಿದೆ. ಸಮಾಜದವರು ಹಾಗೂ ಇತರರು ಉತ್ಸಾಹದಿಂದ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡರೆ ಜಯಂತಿಯ ಸಂಭ್ರಮ ಅಧಿಕಗೊಳ್ಳುತ್ತದೆ’ ಎಂದರು.</p>.<p>ಸಮಾಜ ಸಂಘದ ಪ್ರಮುಖರಾದ ಹೇಮರೆಡ್ಡಿ ಗೌರೆ, ಪ್ರಕಾಶರೆಡ್ಡಿ ನರಹರೆ, ಸಂಘದ ಉಪಾಧ್ಯಕ್ಷ ರಾಜರೆಡ್ಡಿ ಪಾಟೀಲ, ಸಂಜೀವರೆಡ್ಡಿ ಗೌಂಡಗಾವೆ, ಮಾಣಿಕರೆಡ್ಡಿ ಯಡಮಲ್ಲೆ, ಗೋವಿಂದರೆಡ್ಡಿ ಕೋತಾಪಲ್ಲೆ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-33-211911414</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>