<p><strong>ಬಸವಕಲ್ಯಾಣ:</strong> ನಗರದ ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿನ ವಿದ್ಯಾರ್ಥಿಗಳು ಮಂಗಳವಾರ ಅಲ್ಲಿ ನೀಡಿದ ಕಳಪೆ ಆಹಾರವನ್ನು ಹಾಗೂ ಕೊಳೆತ ತರಕಾರಿಯನ್ನು ತಟ್ಟೆಯಲ್ಲಿ ತಂದು ಶಾಸಕ ಶರಣು ಸಲಗರ ಅವರಿಗೆ ತೋರಿಸಿದರು.</p>.<p>ತ್ರಿಪುರಾಂತ ಕೆರೆ ದಂಡೆಯಲ್ಲಿನ ಖಾನಾಪುರ ವ್ಯಾಪ್ತಿಯಲ್ಲಿನ ವಿದ್ಯಾರ್ಥಿನಿಲಯದಿಂದ ಕೆಲ ವಿದ್ಯಾರ್ಥಿಗಳು ರಾತ್ರಿ 10 ಗಂಟೆಗೆ ಕತ್ತಲಲ್ಲಿಯೇ ಶಾಸಕರ ಕಚೇರಿಯವರೆಗೆ 2 ಕಿ.ಮೀ ದೂರದವರೆಗೆ ನಡೆದುಕೊಂಡು ಬಂದು ಕಳಪೆ ಆಹಾರ ಅವರಿಗೆ ತೋರಿಸಿದ್ದಾರೆ. ನಿತ್ಯವೂ ಇಂಥದ್ದೇ ಆಹಾರ ನೀಡಲಾಗುತ್ತದೆ ಎಂದು ದೂರಿದ್ದಾರೆ.</p>.<p>ಈ ಸಂದರ್ಭದಲ್ಲಿ ಶಾಸಕರು ವಿದ್ಯಾರ್ಥಿನಿಲಯದ ವಾರ್ಡನ್ ಮತ್ತು ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಸಹ ಫೋನ್ ಮೂಲಕ ಸಂಪರ್ಕಿಸಿ ತಪ್ಪಿತಸ್ಥರ ವಿರುದ್ಧ ಶೀಘ್ರದಲ್ಲಿ ಕ್ರಮ ತೆಗೆದುಕೊಳ್ಳಬೇಕು. ಇನ್ನು ಮುಂದೆ ಉತ್ತಮ ಆಹಾರ ನೀಡಬೇಕು ಎಂದು ಸೂಚಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-33-1068169973</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ:</strong> ನಗರದ ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿನ ವಿದ್ಯಾರ್ಥಿಗಳು ಮಂಗಳವಾರ ಅಲ್ಲಿ ನೀಡಿದ ಕಳಪೆ ಆಹಾರವನ್ನು ಹಾಗೂ ಕೊಳೆತ ತರಕಾರಿಯನ್ನು ತಟ್ಟೆಯಲ್ಲಿ ತಂದು ಶಾಸಕ ಶರಣು ಸಲಗರ ಅವರಿಗೆ ತೋರಿಸಿದರು.</p>.<p>ತ್ರಿಪುರಾಂತ ಕೆರೆ ದಂಡೆಯಲ್ಲಿನ ಖಾನಾಪುರ ವ್ಯಾಪ್ತಿಯಲ್ಲಿನ ವಿದ್ಯಾರ್ಥಿನಿಲಯದಿಂದ ಕೆಲ ವಿದ್ಯಾರ್ಥಿಗಳು ರಾತ್ರಿ 10 ಗಂಟೆಗೆ ಕತ್ತಲಲ್ಲಿಯೇ ಶಾಸಕರ ಕಚೇರಿಯವರೆಗೆ 2 ಕಿ.ಮೀ ದೂರದವರೆಗೆ ನಡೆದುಕೊಂಡು ಬಂದು ಕಳಪೆ ಆಹಾರ ಅವರಿಗೆ ತೋರಿಸಿದ್ದಾರೆ. ನಿತ್ಯವೂ ಇಂಥದ್ದೇ ಆಹಾರ ನೀಡಲಾಗುತ್ತದೆ ಎಂದು ದೂರಿದ್ದಾರೆ.</p>.<p>ಈ ಸಂದರ್ಭದಲ್ಲಿ ಶಾಸಕರು ವಿದ್ಯಾರ್ಥಿನಿಲಯದ ವಾರ್ಡನ್ ಮತ್ತು ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಸಹ ಫೋನ್ ಮೂಲಕ ಸಂಪರ್ಕಿಸಿ ತಪ್ಪಿತಸ್ಥರ ವಿರುದ್ಧ ಶೀಘ್ರದಲ್ಲಿ ಕ್ರಮ ತೆಗೆದುಕೊಳ್ಳಬೇಕು. ಇನ್ನು ಮುಂದೆ ಉತ್ತಮ ಆಹಾರ ನೀಡಬೇಕು ಎಂದು ಸೂಚಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-33-1068169973</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>