<p><strong>ಬಸವಕಲ್ಯಾಣ:</strong> ‘ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿ ಕೊಡುವ ಹೋರಾಟದಲ್ಲಿ ಅನೇಕ ಮಹಿಳೆಯರು ಭಾಗವಹಿಸಿದ್ದರು. ಅವರ ತ್ಯಾಗ, ಬಲಿದಾನ ದೊಡ್ಡದು’ ಎಂದು ಉಪನ್ಯಾಸಕ ವಿಜಯೇಂದ್ರ ಪಾಂಡೆ ಹೇಳಿದರು.</p>.<p>ನಗರದ ಎಸ್.ಎಸ್.ಕೆ.ಬಸವೇಶ್ವರ ಕಾಲೇಜಿನಲ್ಲಿ ಭಾನುವಾರ ನಡೆದ ವೀರ ವನಿತೆಯರ ವಿಚಾರ ಸಂಕಿರಣದಲ್ಲಿ ಮಾತನಾಡಿದರು.</p>.<p>‘ವೀರ ವನಿತೆಯರಾದ ರಾಣಿ ಅಬ್ಬಕ್ಕದೇವಿ, ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಅಹಿಲ್ಯಾಬಾಯಿ ಹೊಳ್ಕರ ಅವರು ಅತ್ಯಂತ ಕಠಿಣ ಪರಿಸ್ಥಿತಿಯಲ್ಲಿ ದೇಶಸೇವೆ ಮಾಡಿದ್ದಾರೆ. ಬ್ರಿಟಿಷರ ವಿರುದ್ಧ ಇವರೆಲ್ಲ ಧೈರ್ಯದಿಂದ ಹೋರಾಡಿದರು’ ಎಂದರು.</p>.<p>ಪ್ರೊ.ಬಸವರಾಜ ಬಾಗ ಮಾತನಾಡಿ,‘ಅನೇಕ ಮಹಿಳೆಯರು ಸ್ವಾತಂತ್ರ್ಯ ಹೋರಾಟ ಕೈಗೊಳ್ಳುವ ಜೊತೆಗೆ ಧರ್ಮ, ಸಂಸ್ಕೃತಿಯ ರಕ್ಷಣೆಗೂ ಕಟಿಬದ್ಧರಾಗಿದ್ದರು. ಅನೇಕ ದೇವಸ್ಥಾನಗಳನ್ನು ಸಂರಕ್ಷಿಸಿದರು’ ಎಂದು ಹೇಳಿದರು.</p>.<p>ಪ್ರಾಚಾರ್ಯ ಶಿವಕುಮಾರ ಪಾಟೀಲ ಮಾತನಾಡಿ,‘ಭಾರತದಲ್ಲಿ ಮಹಿಳೆಯರಿಗೆ ಹೆಚ್ಚಿನ ಗೌರವಾದರ ನೀಡಲಾಗುತ್ತದೆ. ವೀರ ರಾಣಿಯರ ಕಾರ್ಯದಿಂದ ಪ್ರೇರಣೆ ಪಡೆಯಬೇಕು. ದೇಶಭಕ್ತಿ ಬೆಳೆಸಿಕೊಳ್ಳಬೇಕು’ ಎಂದರು.</p>.<p>ಕಲ್ಯಾಣಪ್ಪ ನಾವದಗಿ, ರಮೇಶ ಕೆ.ಬಿ., ಎಂ.ಜಿ.ಪಾಟೀಲ, ವಿಠೋಬಾ ದೊಣ್ಣೆಗೌಡರ್, ನಾಗರತ್ನ, ಭಾರತಿ ಮಠ, ಶಿಲ್ಪಾ ಬಿರಾದಾರ, ರಾಜೇಶ್ರೀ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ:</strong> ‘ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿ ಕೊಡುವ ಹೋರಾಟದಲ್ಲಿ ಅನೇಕ ಮಹಿಳೆಯರು ಭಾಗವಹಿಸಿದ್ದರು. ಅವರ ತ್ಯಾಗ, ಬಲಿದಾನ ದೊಡ್ಡದು’ ಎಂದು ಉಪನ್ಯಾಸಕ ವಿಜಯೇಂದ್ರ ಪಾಂಡೆ ಹೇಳಿದರು.</p>.<p>ನಗರದ ಎಸ್.ಎಸ್.ಕೆ.ಬಸವೇಶ್ವರ ಕಾಲೇಜಿನಲ್ಲಿ ಭಾನುವಾರ ನಡೆದ ವೀರ ವನಿತೆಯರ ವಿಚಾರ ಸಂಕಿರಣದಲ್ಲಿ ಮಾತನಾಡಿದರು.</p>.<p>‘ವೀರ ವನಿತೆಯರಾದ ರಾಣಿ ಅಬ್ಬಕ್ಕದೇವಿ, ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಅಹಿಲ್ಯಾಬಾಯಿ ಹೊಳ್ಕರ ಅವರು ಅತ್ಯಂತ ಕಠಿಣ ಪರಿಸ್ಥಿತಿಯಲ್ಲಿ ದೇಶಸೇವೆ ಮಾಡಿದ್ದಾರೆ. ಬ್ರಿಟಿಷರ ವಿರುದ್ಧ ಇವರೆಲ್ಲ ಧೈರ್ಯದಿಂದ ಹೋರಾಡಿದರು’ ಎಂದರು.</p>.<p>ಪ್ರೊ.ಬಸವರಾಜ ಬಾಗ ಮಾತನಾಡಿ,‘ಅನೇಕ ಮಹಿಳೆಯರು ಸ್ವಾತಂತ್ರ್ಯ ಹೋರಾಟ ಕೈಗೊಳ್ಳುವ ಜೊತೆಗೆ ಧರ್ಮ, ಸಂಸ್ಕೃತಿಯ ರಕ್ಷಣೆಗೂ ಕಟಿಬದ್ಧರಾಗಿದ್ದರು. ಅನೇಕ ದೇವಸ್ಥಾನಗಳನ್ನು ಸಂರಕ್ಷಿಸಿದರು’ ಎಂದು ಹೇಳಿದರು.</p>.<p>ಪ್ರಾಚಾರ್ಯ ಶಿವಕುಮಾರ ಪಾಟೀಲ ಮಾತನಾಡಿ,‘ಭಾರತದಲ್ಲಿ ಮಹಿಳೆಯರಿಗೆ ಹೆಚ್ಚಿನ ಗೌರವಾದರ ನೀಡಲಾಗುತ್ತದೆ. ವೀರ ರಾಣಿಯರ ಕಾರ್ಯದಿಂದ ಪ್ರೇರಣೆ ಪಡೆಯಬೇಕು. ದೇಶಭಕ್ತಿ ಬೆಳೆಸಿಕೊಳ್ಳಬೇಕು’ ಎಂದರು.</p>.<p>ಕಲ್ಯಾಣಪ್ಪ ನಾವದಗಿ, ರಮೇಶ ಕೆ.ಬಿ., ಎಂ.ಜಿ.ಪಾಟೀಲ, ವಿಠೋಬಾ ದೊಣ್ಣೆಗೌಡರ್, ನಾಗರತ್ನ, ಭಾರತಿ ಮಠ, ಶಿಲ್ಪಾ ಬಿರಾದಾರ, ರಾಜೇಶ್ರೀ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>