<p><strong>ಬಸವಕಲ್ಯಾಣ</strong>: ತಾಲ್ಲೂಕಿನ ದಾಸರವಾಡಿಯ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ 10 ನೇ ತರಗತಿ ವಿದ್ಯಾರ್ಥಿ ಪವನ ನಾಗಪ್ಪ ಹಣಮಂತವಾಡಿ (16) ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.</p>.<p>‘ಸಂಜೆ 5 ಗಂಟೆಗೆ ವಿದ್ಯಾರ್ಥಿಗಳು ಕೊಠಡಿಗಳ ಹೊರಗೆ ಬಂದು ಅಧ್ಯಯನದಲ್ಲಿ ನಿರತರಾಗಿದ್ದಾಗ ಪವನ ಅಲ್ಲಿಂದ ಬಾರದೆ ಕಿಟಕಿಯ ಸರಳುಗಳಿಗೆ ಬಟ್ಟೆಯನ್ನು ಕಟ್ಟಿ ನೇಣು ಹಾಕಿಕೊಂಡಿದ್ದಾನೆ’ ಎನ್ನಲಾಗಿದೆ.</p>.<p>ನಂತರ ಈ ಬಗ್ಗೆ ತಿಳಿದ ವಸತಿ ಶಾಲೆಯ ಸಿಬ್ಬಂದಿ ತಾಲ್ಲೂಕಿನ ಹಣಮಂತವಾಡಿಯಲ್ಲಿರುವ ಪಾಲಕರಿಗೆ ಈ ವಿಷಯ ತಿಳಿಸಿದ್ದಾರೆ. ಆಗ ತಾಯಿ ಮಹಾದೇವಿ ಹಾಗೂ ಅಣ್ಣ ಗುಂಡಪ್ಪ ಹಾಗೂ ಗ್ರಾಮದ ಹತ್ತಾರು ಜನರು ಸ್ಥಳಕ್ಕೆ ಬಂದು ನೋಡಿದ್ದಾರೆ.</p>.<p>‘ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಳ್ಳುವಂಥ ಪರಿಸ್ಥಿತಿ ಇರಲಿಲ್ಲ. ಅಲ್ಲದೆ ಕೊರಳಿಗೆ ಬಟ್ಟೆ ಸುತ್ತಿಕೊಂಡು ನೆಲಕ್ಕೆ ಕುಳಿತಂತಿದ್ದಾನೆ. ಇದು ಆತ್ಮಹತ್ಯೆ ಅಲ್ಲ, ಕೊಲೆ ಆಗಿದ್ದು ಈ ಬಗ್ಗೆ ತನಿಖೆ ಆಗಬೇಕು’ ಎಂದು ಪಾಲಕರು ರಾತ್ರಿ 9.30 ಗಂಟೆಯವರೆಗೂ ಪಟ್ಟು ಹಿಡಿದು ಕುಳಿತಿದ್ದರು. ಮುಡಬಿ ಪೊಲೀಸ್ ಠಾಣೆಯ ಪಿಎಸ್ಐ ವಿಜಯಕುಮಾರ ಹಾಗೂ ಇತರೆ ಸಿಬ್ಬಂದಿ ಕೂಡ ಸ್ಥಳಕ್ಕೆ ಬಂದಿದ್ದರು. ಆದರೆ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಬಂದಿರಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ</strong>: ತಾಲ್ಲೂಕಿನ ದಾಸರವಾಡಿಯ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ 10 ನೇ ತರಗತಿ ವಿದ್ಯಾರ್ಥಿ ಪವನ ನಾಗಪ್ಪ ಹಣಮಂತವಾಡಿ (16) ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.</p>.<p>‘ಸಂಜೆ 5 ಗಂಟೆಗೆ ವಿದ್ಯಾರ್ಥಿಗಳು ಕೊಠಡಿಗಳ ಹೊರಗೆ ಬಂದು ಅಧ್ಯಯನದಲ್ಲಿ ನಿರತರಾಗಿದ್ದಾಗ ಪವನ ಅಲ್ಲಿಂದ ಬಾರದೆ ಕಿಟಕಿಯ ಸರಳುಗಳಿಗೆ ಬಟ್ಟೆಯನ್ನು ಕಟ್ಟಿ ನೇಣು ಹಾಕಿಕೊಂಡಿದ್ದಾನೆ’ ಎನ್ನಲಾಗಿದೆ.</p>.<p>ನಂತರ ಈ ಬಗ್ಗೆ ತಿಳಿದ ವಸತಿ ಶಾಲೆಯ ಸಿಬ್ಬಂದಿ ತಾಲ್ಲೂಕಿನ ಹಣಮಂತವಾಡಿಯಲ್ಲಿರುವ ಪಾಲಕರಿಗೆ ಈ ವಿಷಯ ತಿಳಿಸಿದ್ದಾರೆ. ಆಗ ತಾಯಿ ಮಹಾದೇವಿ ಹಾಗೂ ಅಣ್ಣ ಗುಂಡಪ್ಪ ಹಾಗೂ ಗ್ರಾಮದ ಹತ್ತಾರು ಜನರು ಸ್ಥಳಕ್ಕೆ ಬಂದು ನೋಡಿದ್ದಾರೆ.</p>.<p>‘ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಳ್ಳುವಂಥ ಪರಿಸ್ಥಿತಿ ಇರಲಿಲ್ಲ. ಅಲ್ಲದೆ ಕೊರಳಿಗೆ ಬಟ್ಟೆ ಸುತ್ತಿಕೊಂಡು ನೆಲಕ್ಕೆ ಕುಳಿತಂತಿದ್ದಾನೆ. ಇದು ಆತ್ಮಹತ್ಯೆ ಅಲ್ಲ, ಕೊಲೆ ಆಗಿದ್ದು ಈ ಬಗ್ಗೆ ತನಿಖೆ ಆಗಬೇಕು’ ಎಂದು ಪಾಲಕರು ರಾತ್ರಿ 9.30 ಗಂಟೆಯವರೆಗೂ ಪಟ್ಟು ಹಿಡಿದು ಕುಳಿತಿದ್ದರು. ಮುಡಬಿ ಪೊಲೀಸ್ ಠಾಣೆಯ ಪಿಎಸ್ಐ ವಿಜಯಕುಮಾರ ಹಾಗೂ ಇತರೆ ಸಿಬ್ಬಂದಿ ಕೂಡ ಸ್ಥಳಕ್ಕೆ ಬಂದಿದ್ದರು. ಆದರೆ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಬಂದಿರಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>