<p><strong>ಬಸವಕಲ್ಯಾಣ</strong>: ‘ಕಲ್ಯಾಣ ನಾಡು ಗ್ರಾಮೀಣ ಜನಪದ ಕಲಾವೃಂದ ಸಂಘದಿಂದ ಫೆಬ್ರುವರಿ 14 ರಂದು 20ನೇ ವರ್ಷದ ಸಂಭ್ರಮದ ಅಂಗವಾಗಿ ಉತ್ಸವ ಹಾಗೂ ಸಂಗೀತ ಸೌರಭ ಕಾರ್ಯಕ್ರಮವನ್ನು ನಗರದ ತ್ರಿಪುರಾಂತ ಗವಿಮಠದಲ್ಲಿ ಹಮ್ಮಿಕೊಳ್ಳಲಾಗಿದೆ’ ಎಂದು ಸಂಘದ ಕಾರ್ಯದರ್ಶಿ ವೀರಶೆಟ್ಟಿ ಮಲಶೆಟ್ಟಿ ತಿಳಿಸಿದ್ದಾರೆ.</p>.<p>ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಉದ್ಘಾಟಿಸುವರು. ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಶಿವಪ್ರಸಾದ ಗೊಲ್ಲಹಳ್ಳಿ ಅಧ್ಯಕ್ಷತೆ ವಹಿಸುವರು. ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯರು ನೇತೃತ್ವ, ಶಾಸಕ ಶರಣು ಸಲಗರ ಉಪಸ್ಥಿತರಿರಲಿದ್ದಾರೆ’ ಎಂದು ತಿಳಿಸಿದರು.</p>.<p>‘ಸುಗಮ ಸಂಗೀತ, ಹಿಂದೂಸ್ತಾನಿ ಸಂಗೀತ, ಕಥಾ ಕೀರ್ತನೆ, ಜಾನಪದ ಹಾಡುಗಾರಿಕೆ, ತತ್ವಪದ ಗಾಯನ, ವಚನ ಸಂಗೀತ, ಗೀಗೀ ಪದ ಹಾಡಲಾಗುತ್ತದೆ. ಸಂಗೀತ ಸಾಧಕರ, ಗಣ್ಯರ, ಜನಪದ ಕಲಾವಿದರ ಸನ್ಮಾನ ನಡೆಯಲಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ</strong>: ‘ಕಲ್ಯಾಣ ನಾಡು ಗ್ರಾಮೀಣ ಜನಪದ ಕಲಾವೃಂದ ಸಂಘದಿಂದ ಫೆಬ್ರುವರಿ 14 ರಂದು 20ನೇ ವರ್ಷದ ಸಂಭ್ರಮದ ಅಂಗವಾಗಿ ಉತ್ಸವ ಹಾಗೂ ಸಂಗೀತ ಸೌರಭ ಕಾರ್ಯಕ್ರಮವನ್ನು ನಗರದ ತ್ರಿಪುರಾಂತ ಗವಿಮಠದಲ್ಲಿ ಹಮ್ಮಿಕೊಳ್ಳಲಾಗಿದೆ’ ಎಂದು ಸಂಘದ ಕಾರ್ಯದರ್ಶಿ ವೀರಶೆಟ್ಟಿ ಮಲಶೆಟ್ಟಿ ತಿಳಿಸಿದ್ದಾರೆ.</p>.<p>ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಉದ್ಘಾಟಿಸುವರು. ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಶಿವಪ್ರಸಾದ ಗೊಲ್ಲಹಳ್ಳಿ ಅಧ್ಯಕ್ಷತೆ ವಹಿಸುವರು. ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯರು ನೇತೃತ್ವ, ಶಾಸಕ ಶರಣು ಸಲಗರ ಉಪಸ್ಥಿತರಿರಲಿದ್ದಾರೆ’ ಎಂದು ತಿಳಿಸಿದರು.</p>.<p>‘ಸುಗಮ ಸಂಗೀತ, ಹಿಂದೂಸ್ತಾನಿ ಸಂಗೀತ, ಕಥಾ ಕೀರ್ತನೆ, ಜಾನಪದ ಹಾಡುಗಾರಿಕೆ, ತತ್ವಪದ ಗಾಯನ, ವಚನ ಸಂಗೀತ, ಗೀಗೀ ಪದ ಹಾಡಲಾಗುತ್ತದೆ. ಸಂಗೀತ ಸಾಧಕರ, ಗಣ್ಯರ, ಜನಪದ ಕಲಾವಿದರ ಸನ್ಮಾನ ನಡೆಯಲಿದೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>