ಬೀದರ್: ಶಾಸಕ ಬಿ.ನಾರಾಯಣರಾವ್ ಪಾರ್ಥಿವ ಶರೀರ ಬಸವಕಲ್ಯಾಣಕ್ಕೆ ಬಂದಿದೆ. ಮುಡಬಿ ಕ್ರಾಸ್ನಲ್ಲಿರುವ ನಿಜಶರಣ ಅಂಬಿಗರ ಚೌಡಯ್ಯ ಜಾಗೃತಿ ಆಶ್ರಮ ಸಮೀಪದ ಅಟೋನಗರದಲ್ಲಿ ಶಾಸಕ ಬಿ.ನಾರಾಯಣರಾವ್ ಅಂತ್ಯಕ್ರಿಯೆಗೆ ಸಿದ್ಧತೆ ನಡೆದಿದೆ.
ನಾರಾಯಣರಾವ್ ಪತ್ನಿ ಮಲ್ಲಮ್ಮ, ಪುತ್ರರಾದ ಗೌತಮ, ರಾಹುಲ್, ಜಿಲ್ಲಾಧಿಕಾರಿ ರಾಮಚಂದ್ರನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ, ಬಸವಕಲ್ಯಾಣ ತಹಶೀಲ್ದಾರ್ ಸಾವಿತ್ರಿ ಸಲಗರ ಸ್ಥಳದಲ್ಲಿದ್ದಾರೆ. ಅಂತ್ಯಸಂಸ್ಕಾರ ನಡೆಯುವ ಸ್ಥಳದ ಸಮೀಪ ಬ್ಯಾರಿಕೇಡ್ಗಳನ್ನು ಅಳವಡಿಸಿದ್ದು, ಪೊಲೀಸ್ ಬಿಗಿ ಬಂದೋಬಸ್ತ ಮಾಡಲಾಗಿದೆ.