<p><strong>ಬಸವಕಲ್ಯಾಣ (ಬೀದರ್ ಜಿಲ್ಲೆ)</strong>: ನಗರದ ಬಸವೇಶ್ವರ ದೇವಸ್ಥಾನದ ಜಾತ್ರೆಯ ಕೊನೆಯ ದಿನ ಗುರುವಾರ ಬೆಳಿಗ್ಗೆ 6 ಗಂಟೆಗೆ ತೇರು ಎಳೆಯುವಾಗ ಗಾಲಿಗೆ ಸಿಲುಕಿ ಇಬ್ಬರಿಗೆ ಗಾಯಗಳಾಗಿದ್ದು ಒಬ್ಬರ ಸ್ಥಿತಿ ಗಂಭೀರವಾಗಿದೆ.</p><p>ಧನರಾಜ ಚಾಕೂರೆ ಮತ್ತು ರಿಷಬ್ ಎನ್ನುವವರ ಕಾಲುಗಳು ಕಲ್ಲಿನ ಗಾಲಿಯಲ್ಲಿ ಸಿಲುಕಿಕೊಂಡಿದ್ದರಿಂದ ಗಾಯಗಳಾಗಿವೆ. ತೇರು ಮುಂದಕ್ಕೆ ಸಾಗುವಾಗ ಇವರು ಆಯತಪ್ಪಿ ಬಿದ್ದಿದ್ದರಿಂದ ಗಾಲಿಗಳು ಕಾಲುಗಳ ಮೇಲಿನಿಂದ ಹೋಗಿವೆ.</p><p>ಧನರಾಜ ಎಂಬುವರ ಎರಡೂ ಕಾಲುಗಳ ಮೊಳಕಾಲಿನಿಂದ ಕೆಳಗಿನ ಭಾಗ ನುಜ್ಜುಗುಜ್ಜಾಗಿದೆ. ಹೀಗಾಗಿ ಸ್ಥಳದಲ್ಲಿ ರಕ್ತ ಚೆಲ್ಲಿದೆ. ಇವರನ್ನು ಬಸವಕಲ್ಯಾಣದ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ. ಇನ್ನೊಬ್ಬರನ್ನು ಇಲ್ಲಿಯೇ ಉಪಚರಿಸಲಾಗುತ್ತಿದೆ. </p><p>ತೇರು ಮುಂದಕ್ಕೆ ಎಳೆಯುವಾಗ ಈ ಘಟನೆ ಸಂಭವಿಸಿದ್ದರಿಂದ ಕೆಲಕಾಲ ತೇರನ್ನು ನಿಲ್ಲಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದಾಗ ಮತ್ತೆ ಹಿಂದಕ್ಕೆ ತಂದು ಮೊದಲಿನ ಸ್ಥಳದಲ್ಲಿ ನಿಲ್ಲಿಸಲಾಯಿತು. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದಾಗ ಪೊಲೀಸರ ಅಧಿಕಾರಿಗಳು ಭೇಟಿ ನೀಡಿದರು. ಜನಜಂಗುಳಿ ನೆರೆದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ (ಬೀದರ್ ಜಿಲ್ಲೆ)</strong>: ನಗರದ ಬಸವೇಶ್ವರ ದೇವಸ್ಥಾನದ ಜಾತ್ರೆಯ ಕೊನೆಯ ದಿನ ಗುರುವಾರ ಬೆಳಿಗ್ಗೆ 6 ಗಂಟೆಗೆ ತೇರು ಎಳೆಯುವಾಗ ಗಾಲಿಗೆ ಸಿಲುಕಿ ಇಬ್ಬರಿಗೆ ಗಾಯಗಳಾಗಿದ್ದು ಒಬ್ಬರ ಸ್ಥಿತಿ ಗಂಭೀರವಾಗಿದೆ.</p><p>ಧನರಾಜ ಚಾಕೂರೆ ಮತ್ತು ರಿಷಬ್ ಎನ್ನುವವರ ಕಾಲುಗಳು ಕಲ್ಲಿನ ಗಾಲಿಯಲ್ಲಿ ಸಿಲುಕಿಕೊಂಡಿದ್ದರಿಂದ ಗಾಯಗಳಾಗಿವೆ. ತೇರು ಮುಂದಕ್ಕೆ ಸಾಗುವಾಗ ಇವರು ಆಯತಪ್ಪಿ ಬಿದ್ದಿದ್ದರಿಂದ ಗಾಲಿಗಳು ಕಾಲುಗಳ ಮೇಲಿನಿಂದ ಹೋಗಿವೆ.</p><p>ಧನರಾಜ ಎಂಬುವರ ಎರಡೂ ಕಾಲುಗಳ ಮೊಳಕಾಲಿನಿಂದ ಕೆಳಗಿನ ಭಾಗ ನುಜ್ಜುಗುಜ್ಜಾಗಿದೆ. ಹೀಗಾಗಿ ಸ್ಥಳದಲ್ಲಿ ರಕ್ತ ಚೆಲ್ಲಿದೆ. ಇವರನ್ನು ಬಸವಕಲ್ಯಾಣದ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ. ಇನ್ನೊಬ್ಬರನ್ನು ಇಲ್ಲಿಯೇ ಉಪಚರಿಸಲಾಗುತ್ತಿದೆ. </p><p>ತೇರು ಮುಂದಕ್ಕೆ ಎಳೆಯುವಾಗ ಈ ಘಟನೆ ಸಂಭವಿಸಿದ್ದರಿಂದ ಕೆಲಕಾಲ ತೇರನ್ನು ನಿಲ್ಲಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದಾಗ ಮತ್ತೆ ಹಿಂದಕ್ಕೆ ತಂದು ಮೊದಲಿನ ಸ್ಥಳದಲ್ಲಿ ನಿಲ್ಲಿಸಲಾಯಿತು. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದಾಗ ಪೊಲೀಸರ ಅಧಿಕಾರಿಗಳು ಭೇಟಿ ನೀಡಿದರು. ಜನಜಂಗುಳಿ ನೆರೆದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>