‘ಕೆರೆ ದಂಡೆಯಲ್ಲಿ ಸಸಿಗಳನ್ನು ನೆಟ್ಟು ಗಿಡಗಳನ್ನು ಬೆಳೆಸಬೇಕು. ಗ್ರಾಮದಲ್ಲಿನ ಇನ್ನೂ ಹೆಚ್ಚಿನ ಜನರು ಖಾತರಿ ಕೆಲಸಕ್ಕೆ ಹಾಜರಾಗಬೇಕು. ಮುಖಕ್ಕೆ ಮಾಸ್ಕ್ ಹಾಕಿಕೊಂಡು ಕೆಲಸ ನಿರ್ವಹಿಸಬೇಕು. ಅಂತರ ಕಾಪಾಡಬೇಕು. ಸರ್ಕಾರದ ಯೋಜನೆಗಳ ಸದುಪಯೋಗ ಮಾಡಿಕೊಳ್ಳಬೇಕು' ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಗ್ಯಾನೇಂದ್ರಕುಮಾರ ಗಂಗವಾರ್, ಇಒ ಮಡೋಳಪ್ಪ, ಮುಖಂಡರಾದ ನೀಲಕಂಠ ರಾಠೋಡ, ಶರಣು ಪೆದ್ದೆ, ಪಂಕಜ್ ಸೂರ್ಯವಂಶಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಯಶೋದಾ ರಾಠೋಡ, ಸಹಾಯಕ ನಿರ್ದೇಶಕ ಜಯಪ್ರಕಾಶ ಚವಾಣ್, ಪಿಡಿಒ ಮುತ್ತುರಾಜ್ ಪಾಲ್ಗೊಂಡಿದ್ದರು.