ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸವಣ್ಣನವರ ವಿಚಾರಧಾರೆ ಸರ್ವಶ್ರೇಷ್ಠ: ಡಿವೈಎಸ್ಪಿ ಪೃಥ್ವಿಕ್‌ ಶಂಕರ್

Last Updated 7 ಮೇ 2022, 2:48 IST
ಅಕ್ಷರ ಗಾತ್ರ

ಭಾಲ್ಕಿ: ಇಲ್ಲಿನ ಮಹಾತ್ಮ ಗಾಂಧಿ ವೃತ್ತ ಸಮೀಪದ ಬಸವೇಶ್ವರ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಡಿವೈಎಸ್ಪಿ ಪೃಥ್ವಿಕ್‌ ಶಂಕರ್ ಅವರು ಬಸವಣ್ಣನವರ ಭಾವಚಿತ್ರ ಮಾಡಿದರು.

ಸಂಘದ ಹೆಸರಿನಲ್ಲಿ ಹೊರ ತಂದಿರುವ ಬಸವಣ್ಣನವರ ಭಾವಚಿತ್ರ ಲೋಕಾರ್ಪಣೆಗೊಳಿಸಿದ ಡಿವೈಎಸ್ಪಿ ಪೃಥ್ವಿಕ್ ಶಂಕರ್,‘ ಬಸವಣ್ಣನವರ ವಿಚಾರಧಾರೆ ಶ್ರೇಷ್ಠವಾಗಿದೆ. ಅವರು ಬೋಧಿಸಿದ ಕಾಯಕ ದಾಸೋಹ ತತ್ವ ಪ್ರತಿಯೊಬ್ಬರಿಗೂ ಮಾದರಿ’ ಎಂದು ಹೇಳಿದರು.

ಬಸವೇಶ್ವರ ಹೆಸರಿನಲ್ಲಿ ಸಂಘ ಆರಂಭಿಸಿರುವುದು ಸಂತಸದ ಸಂಗತಿ. ಸಂಘ ಆರಂಭಗೊಂಡ ಎರಡು–ಮೂರು ತಿಂಗಳಲ್ಲೇ ಜನರ ವಿಶ್ವಾಸ ಗಳಿಸಿ ಬಡ ಜನರಿಗೆ ನೆರವಾಗುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ತಿಳಿಸಿದರು.

ಸಂಘದ ಅಧ್ಯಕ್ಷ ಶಶಿಧರ ಕೋಸಂಬೆ ಮಾತನಾಡಿ,‘ಬಡ ಜನರ ಆರ್ಥಿಕ ಪರಿಸ್ಥಿತಿ ಸುಧಾರಿಸುವ ನಿಟ್ಟಿನಲ್ಲಿ ಸಂಘ ಆರಂಭಿಸಿದ್ದು, ಯಾವುದೇ ಷರತ್ತು ಇಲ್ಲದೇ ಸರಳ ಮತ್ತು ಸುಲಭವಾಗಿ ಸಾಲ ನೀಡಲಾಗುತ್ತಿದೆ’ ಎಂದು ತಿಳಿಸಿದರು.

ಸಂಘದ ಉಪಾಧ್ಯಕ್ಷ ಸಂಗಮೇಶ ಹುಣಜೆ ಮದಕಟ್ಟಿ, ನಿರ್ದೇಶಕರಾದ ಪ್ರಭು ಡಿಗ್ಗೆ, ರವೀಂದ್ರ ಚಿಡಗುಪ್ಪೆ, ರಾಜಕುಮಾರ ಬಿರಾದಾರ, ಶೈಲೇಶ ಚಳಕಾಪೂರೆ, ಸಂಗಮೇಶ ಗುಮ್ಮೆ, ಸಹಾದೇವ ಮಡಿವಾಳ, ಡಿಗಂಬರ ಹಡಪದ ಹಾಗೂ ವ್ಯವಸ್ಥಾಪಕ ಶಿವಾನಂದ ದಾಬಶೆಟ್ಟೆ ಅವರು
ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT