ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಮಾನತೆಗಾಗಿ ರಕ್ತ ಹರಿಸಿದ ಶರಣರು’

Published 10 ಮೇ 2024, 15:52 IST
Last Updated 10 ಮೇ 2024, 15:52 IST
ಅಕ್ಷರ ಗಾತ್ರ

ಭಾಲ್ಕಿ: ‘12ನೇ ಶತಮಾನದಲ್ಲಿ ಬಸವಾದಿ ಶರಣರು ಸಮಾನತೆ, ಅಂಧಶ್ರದ್ಧೆ, ಮೂಢನಂಬಿಕೆ ನಿರ್ಮೂಲನೆಗಾಗಿ ರಕ್ತ ಹರಿಸಿದರು’ ಎಂದು ಬಸವಕಲ್ಯಾಣ ಅನುಭವ ಮಂಟಪದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಹೇಳಿದರು.

ಪಟ್ಟಣದ ಬಸವೇಶ್ವರ ವೃತ್ತದಲ್ಲಿ ವಿಶ್ವಗುರು ಬಸವಣ್ಣವರ ಜಯಂತ್ಯುತ್ಸವ ಅಂಗವಾಗಿ ಶುಕ್ರವಾರ ಆಯೋಜಿಸಿದ್ದ ಷಟಸ್ಥಲ ಧ್ವಜರೋಹಣ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ‘ಜಾತಿ ವ್ಯವಸ್ಥೆ ತೊಲಗಿಸಲು ಬಸವಣ್ಣವರ ನೇತೃತ್ವದಲ್ಲಿ ಕ್ರಾಂತಿ ನಡೆಯಿತು. ಎಷ್ಟೇ ವಿರೋಧ ವ್ಯಕ್ತವಾದರೂ ಕೂಡ ಶರಣರು ತಮ್ಮ ತತ್ವ ಬಿಟ್ಟುಕೊಡಲಿಲ್ಲ. ಈ ಕಾರಣಕ್ಕಾಗಿಯೇ ಕಲ್ಯಾಣದಲ್ಲಿ ಕ್ರಾಂತಿ ನಡೆಯಿತು ಶರಣರು ತತ್ವಕ್ಕಾಗಿ ರಕ್ತದ ಕಣ ಹರಿಸಿದರು. ಇಂತಹ ಶರಣರು ನಡೆದಾಡಿದ ಪವಿತ್ರ ಭೂಮಿ ಮತ್ತೊಮ್ಮೆ ಜಗದಗಲ ಬೆಳಗಬೇಕಿದೆ. ಶರಣರ ವಿಚಾರಧಾರೆ ಜನಮಾನಸಕ್ಕೆ ತಲುಪಿಸುವ ಕೆಲಸ ಆಗಬೇಕಿದೆ. ಈ ನಿಟ್ಟಿನಲ್ಲಿ ಎಲ್ಲರ ಪ್ರಯತ್ನ ಮುಖ್ಯವಾಗಿದೆ’ ಎಂದರು.

ಶಾಂತಿವರ್ಧಕ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಾಗರ್‌ ಖಂಡ್ರೆ, ಪ್ರಮುಖರಾದ ಶಿವು ಲೋಖಂಡೆ, ಚಂದ್ರಕಾಂತ ಪಾಟೀಲ, ಜೈರಾಜ ಪಾತ್ರೆ, ಕಿರಣ ಖಂಡ್ರೆ, ಜಗದೀಶ ಖಂಡ್ರೆ, ಹಣಮಂತರಾವ್‌ ಚವ್ಹಾಣ, ಓಂಪ್ರಕಾಶ ರೊಟ್ಟೆ, ಡಾ.ಅಮಿತ ಅಷ್ಟೂರೆ, ಅಮರ ಜಲ್ದೆ, ಸುಭಾಷ ಕಾರಾಮುಂಗೆ, ಬಸವರಾಜ ವಂಕೆ ಹಲವರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT