9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕ (ಪರಿಷ್ಕೃತ-2022) ಭಾಗ-1ರ ಪುಟ 27-28 ರಲ್ಲಿ ಬಸವಣ್ಣನವರ ಜೀವನ ಮತ್ತು ಸಾಧನೆ ಕುರಿತ ಪಾಠವಿದ್ದು, ಹಳೆಯ ಪಠ್ಯದಲ್ಲಿನ ಕೆಲವೂ ಪ್ರಮುಖವಾದ ಸಾಲುಗಳನ್ನು ತೆಗೆದು, ಸತ್ಯವನ್ನು ತಿರುಚಿ ಬರೆದಿರುವುದು ಬಸವತತ್ವದ ಅನುಯಾಯಿಗಳಿಗೆ ತುಂಬಾ ನೋವುಂಟು ಮಾಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.