<p><strong>ಬಸವಕಲ್ಯಾಣ</strong>: ತಾಲ್ಲೂಕಿನ ಚಂಡಕಾಪುರ ಗ್ರಾಮವು ‘ಗಾಂಧಿಗ್ರಾಮ ಪುರಸ್ಕಾರ’ (2019–20) ಪಡೆದಿದ್ದರೂ ಕೆಲವು ಸೌಲಭ್ಯಗಳಿಂದ ವಂಚಿತವಾಗಿದೆ.</p>.<p>ಗ್ರಾಮದ ಕೆಲವು ಓಣಿಗಳಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೆ ಗೃಹ ಬಳಕೆಯ ನೀರು ರಸ್ತೆಯ ಮೇಲೆ ಹರಿದಾಡುತ್ತಿದೆ. ಸಿಸಿ ರಸ್ತೆ ಇಲ್ಲದೆ ರಸ್ತೆಗಳು ಕೆಸರು ಗದ್ದೆಯಂತೆ ಬದಲಾಗಿವೆ.</p>.<p>ಗ್ರಾಮ ಪಂಚಾಯಿತಿಯು ₹ 24 ಲಕ್ಷ ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಾಣ ಮಾಡುತ್ತಿದೆ. ಆದರೆ, ಗ್ರಾಮದ ಅನೇಕ ಕಡೆ ಸಿಸಿ ರಸ್ತೆ ಹಾಗೂ ಚರಂಡಿ ವ್ಯವಸ್ಥೆಯೇ ಇಲ್ಲ. ಹೀಗಾಗಿ, ಪ್ರತಿ ಮನೆಗೂ ಶೌಚಾಲಯದ ವ್ಯವಸ್ಥೆ ಇದ್ದರೂ ಕೊಳಚೆ ನೀರಿನಿಂದ ರಸ್ತೆಗಳಲ್ಲಿ ಸ್ವಚ್ಛತೆ ಮರೀಚಿಕೆಯಾಗಿದೆ.</p>.<p>ಇಂದಿರಾನಗರ ಓಣಿಯಿಂದ ಪ್ರಸಿದ್ಧ ಅಮೃತಕುಂಡ ದೇವಸ್ಥಾನದ ಕಚ್ಚಾ ರಸ್ತೆಯು ಸ್ವಲ್ಪವೇ ಮಳೆ ಬಿದ್ದರೂ ಕೆಸರುಮಯವಾಗಿ ಬದಲಾಗುತ್ತದೆ. ಸಿಸಿ ರಸ್ತೆ ನಿರ್ಮಾಣ ಮಾಡುವಂತೆ ನಿವಾಸಿಗಳು ಬಹುದಿನಗಳಿಂದ ಬೇಡಿಕೆ ಇರಿಸಿದ್ದಾರೆ. ಇದುವರೆಗೂ ಅವರ ಬೇಡಿಕೆಗೆ ಯಾರೂ ಸ್ಪಂದಿಸಿಲ್ಲ ಎನ್ನುತ್ತಾರೆ ಸ್ಥಳೀಯರು,</p>.<p>ಮನೆಗಳಲ್ಲಿ ಶೌಚಾಲಯ ಇದ್ದರೂ ಕೆಲವರು ಬಯಲು ಬಹಿರ್ದೆಸೆಗೆ ತೆರಳುತ್ತಾರೆ. ಗ್ರಾಮದ ಸುತ್ತಲಿನ ಪರಿಸರ ದುರ್ನಾತ ಬೀರುತ್ತದೆ. ನೊಣ, ಸೊಳ್ಳೆಗಳ ಕಾಟ ಹೆಚ್ಚುತ್ತಿದೆ. ಸಾಮೂಹಿಕ ಶೌಚಾಲಯ ನಿರ್ಮಾಣ ಮಾಡಿ ಇದಕ್ಕೆಲ್ಲ ಅಂತ್ಯವಾಡಬೇಕು ಎನ್ನುತ್ತಾರೆ ಗ್ರಾಮಸ್ಥ ಮಾರುತಿರಾವ.</p>.<p>ಅಂಗನವಾಡಿ ಕೇಂದ್ರ, ಗ್ರಾಮ ಪಂಚಾಯಿತಿ ಸಂಪರ್ಕಿಸಲು ಸಮರ್ಕಪಕವಾದ ರಸ್ತೆ ಇಲ್ಲ. ಸುಗಮ ಓಡಾಟಕ್ಕೆ ಈ ಮಾರ್ಗಗಳಲ್ಲಿ ಸಿಸಿ ರಸ್ತೆ ನಿರ್ಮಿಸಬೇಕು. ಭೀಮನಗರ ಹಾಗೂ ಪರಿಶಿಷ್ಟ ಪಂಗಡದವರ ಓಣಿಯಲ್ಲಿಯೂ ಕೆಲವೆಡೆ ಸಿಸಿ ರಸ್ತೆ ಹಾಗೂ ಚರಂಡಿ ವ್ಯವಸ್ಥೆ ಮಾಡಬೇಕು ಎಂದು ಬೀರೇಶ ಒತ್ತಾಯಿಸಿದರು.</p>.<p>ಗ್ರಾಮದ ಎಲ್ಲ ಕಡೆಗಳಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಶೇ 100ರಷ್ಟು ಶೌಚಾಲಯ ಕಟ್ಟಿಸುವ ಗುರಿ ಸಾಧಿಸಲಾಗಿದೆ. ಆದರೂ, ಸಾಮೂಹಿಕ ಶೌಚಾಲಯ ನಿರ್ಮಾಣಕ್ಕೂ ಪ್ರಯತ್ನಿಸಲಾಗುವುದು ಎಂದು ಪಿಡಿಒ ಚಂದ್ರಾಮ ಧೂಳಖೇಡ ಹೇಳಿದರು.</p>.<p class="Briefhead"><strong>ಡಿಜಿಟಲ್ ಗ್ರಂಥಾಲಯ</strong></p>.<p>ಗ್ರಾಮ ಪಂಚಾಯಿತಿಯಿಂದ 14ನೇ ಹಣಕಾಸು ಯೋಜನೆ ಯಲ್ಲಿ ಈಚೆಗೆ ಡಿಜಿಟಲ್ ಗ್ರಂಥಾಲಯ ತೆರೆಯಲಾಗಿದೆ. ಸಾವಿರಕ್ಕೂ ಅಧಿಕ ಗ್ರಂಥಗಳಿವೆ. ನಾಲ್ಕು ಕಂಪ್ಯೂಟರ್ ಇದ್ದು, ಅಂತರ್ಜಾಲದ ಮೂಲಕ 2 ಲಕ್ಷ ಡಿಜಿಟಲ್ ಪುಸ್ತಕಗಳನ್ನು ಓದುವ ವ್ಯವಸ್ಥೆ ಇದೆ.</p>.<p>ಈಚೆಗೆ ಶಾಸಕ ಶರಣು ಸಲಗರ ಅವರು ಹೈಟೆಕ್ ಅಂಗನವಾಡಿ ಕೂಡ ಉದ್ಘಾಟಿಸಿದ್ದಾರೆ. ಈ ಕಟ್ಟಡದಲ್ಲಿ ಉತ್ತಮ ಅಡುಗೆ ಕೊಠಡಿ, ಆಟಿಕೆ ಸಾಮಾನು, ಆಸನ, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಶೌಚಾಲವೂ ಇದೆ. ಮಕ್ಕಳ ಶಿಕ್ಷಣಕ್ಕೆ ಅನುಕೂಲ ಮಾಡಿಕೊಡಲು ಟಿವಿ ಹಾಕಲಾಗಿದೆ. ಇಂತಹುದ್ದೇ ಮತ್ತೊಂದು ಅಂಗನವಾಡಿ ನಿರ್ಮಿಸಲಾಗುವುದು ಎನ್ನುತ್ತಾರೆ ಪಂಚಾಯಿತಿ ಅಧಿಕಾರಿಗಳು.</p>.<p>*ಹೊಸ ಗ್ರಾಮ ಪಂಚಾಯಿತಿ ಕಟ್ಟಡದಲ್ಲಿ ಸಭಾಂಗಣ ನಿರ್ಮಾಣಕ್ಕೆ ಅನುದಾನ ಒದಗಿಸುವುದಾಗಿ ಶಾಸಕ ಶರಣು ಸಲಗರ ಭರವಸೆ ನೀಡಿದ್ದಾರೆ, ಚಂದ್ರಾಮ ಧೂಳಖೇಡ, ಪಿಡಿಒ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ</strong>: ತಾಲ್ಲೂಕಿನ ಚಂಡಕಾಪುರ ಗ್ರಾಮವು ‘ಗಾಂಧಿಗ್ರಾಮ ಪುರಸ್ಕಾರ’ (2019–20) ಪಡೆದಿದ್ದರೂ ಕೆಲವು ಸೌಲಭ್ಯಗಳಿಂದ ವಂಚಿತವಾಗಿದೆ.</p>.<p>ಗ್ರಾಮದ ಕೆಲವು ಓಣಿಗಳಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೆ ಗೃಹ ಬಳಕೆಯ ನೀರು ರಸ್ತೆಯ ಮೇಲೆ ಹರಿದಾಡುತ್ತಿದೆ. ಸಿಸಿ ರಸ್ತೆ ಇಲ್ಲದೆ ರಸ್ತೆಗಳು ಕೆಸರು ಗದ್ದೆಯಂತೆ ಬದಲಾಗಿವೆ.</p>.<p>ಗ್ರಾಮ ಪಂಚಾಯಿತಿಯು ₹ 24 ಲಕ್ಷ ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಾಣ ಮಾಡುತ್ತಿದೆ. ಆದರೆ, ಗ್ರಾಮದ ಅನೇಕ ಕಡೆ ಸಿಸಿ ರಸ್ತೆ ಹಾಗೂ ಚರಂಡಿ ವ್ಯವಸ್ಥೆಯೇ ಇಲ್ಲ. ಹೀಗಾಗಿ, ಪ್ರತಿ ಮನೆಗೂ ಶೌಚಾಲಯದ ವ್ಯವಸ್ಥೆ ಇದ್ದರೂ ಕೊಳಚೆ ನೀರಿನಿಂದ ರಸ್ತೆಗಳಲ್ಲಿ ಸ್ವಚ್ಛತೆ ಮರೀಚಿಕೆಯಾಗಿದೆ.</p>.<p>ಇಂದಿರಾನಗರ ಓಣಿಯಿಂದ ಪ್ರಸಿದ್ಧ ಅಮೃತಕುಂಡ ದೇವಸ್ಥಾನದ ಕಚ್ಚಾ ರಸ್ತೆಯು ಸ್ವಲ್ಪವೇ ಮಳೆ ಬಿದ್ದರೂ ಕೆಸರುಮಯವಾಗಿ ಬದಲಾಗುತ್ತದೆ. ಸಿಸಿ ರಸ್ತೆ ನಿರ್ಮಾಣ ಮಾಡುವಂತೆ ನಿವಾಸಿಗಳು ಬಹುದಿನಗಳಿಂದ ಬೇಡಿಕೆ ಇರಿಸಿದ್ದಾರೆ. ಇದುವರೆಗೂ ಅವರ ಬೇಡಿಕೆಗೆ ಯಾರೂ ಸ್ಪಂದಿಸಿಲ್ಲ ಎನ್ನುತ್ತಾರೆ ಸ್ಥಳೀಯರು,</p>.<p>ಮನೆಗಳಲ್ಲಿ ಶೌಚಾಲಯ ಇದ್ದರೂ ಕೆಲವರು ಬಯಲು ಬಹಿರ್ದೆಸೆಗೆ ತೆರಳುತ್ತಾರೆ. ಗ್ರಾಮದ ಸುತ್ತಲಿನ ಪರಿಸರ ದುರ್ನಾತ ಬೀರುತ್ತದೆ. ನೊಣ, ಸೊಳ್ಳೆಗಳ ಕಾಟ ಹೆಚ್ಚುತ್ತಿದೆ. ಸಾಮೂಹಿಕ ಶೌಚಾಲಯ ನಿರ್ಮಾಣ ಮಾಡಿ ಇದಕ್ಕೆಲ್ಲ ಅಂತ್ಯವಾಡಬೇಕು ಎನ್ನುತ್ತಾರೆ ಗ್ರಾಮಸ್ಥ ಮಾರುತಿರಾವ.</p>.<p>ಅಂಗನವಾಡಿ ಕೇಂದ್ರ, ಗ್ರಾಮ ಪಂಚಾಯಿತಿ ಸಂಪರ್ಕಿಸಲು ಸಮರ್ಕಪಕವಾದ ರಸ್ತೆ ಇಲ್ಲ. ಸುಗಮ ಓಡಾಟಕ್ಕೆ ಈ ಮಾರ್ಗಗಳಲ್ಲಿ ಸಿಸಿ ರಸ್ತೆ ನಿರ್ಮಿಸಬೇಕು. ಭೀಮನಗರ ಹಾಗೂ ಪರಿಶಿಷ್ಟ ಪಂಗಡದವರ ಓಣಿಯಲ್ಲಿಯೂ ಕೆಲವೆಡೆ ಸಿಸಿ ರಸ್ತೆ ಹಾಗೂ ಚರಂಡಿ ವ್ಯವಸ್ಥೆ ಮಾಡಬೇಕು ಎಂದು ಬೀರೇಶ ಒತ್ತಾಯಿಸಿದರು.</p>.<p>ಗ್ರಾಮದ ಎಲ್ಲ ಕಡೆಗಳಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಶೇ 100ರಷ್ಟು ಶೌಚಾಲಯ ಕಟ್ಟಿಸುವ ಗುರಿ ಸಾಧಿಸಲಾಗಿದೆ. ಆದರೂ, ಸಾಮೂಹಿಕ ಶೌಚಾಲಯ ನಿರ್ಮಾಣಕ್ಕೂ ಪ್ರಯತ್ನಿಸಲಾಗುವುದು ಎಂದು ಪಿಡಿಒ ಚಂದ್ರಾಮ ಧೂಳಖೇಡ ಹೇಳಿದರು.</p>.<p class="Briefhead"><strong>ಡಿಜಿಟಲ್ ಗ್ರಂಥಾಲಯ</strong></p>.<p>ಗ್ರಾಮ ಪಂಚಾಯಿತಿಯಿಂದ 14ನೇ ಹಣಕಾಸು ಯೋಜನೆ ಯಲ್ಲಿ ಈಚೆಗೆ ಡಿಜಿಟಲ್ ಗ್ರಂಥಾಲಯ ತೆರೆಯಲಾಗಿದೆ. ಸಾವಿರಕ್ಕೂ ಅಧಿಕ ಗ್ರಂಥಗಳಿವೆ. ನಾಲ್ಕು ಕಂಪ್ಯೂಟರ್ ಇದ್ದು, ಅಂತರ್ಜಾಲದ ಮೂಲಕ 2 ಲಕ್ಷ ಡಿಜಿಟಲ್ ಪುಸ್ತಕಗಳನ್ನು ಓದುವ ವ್ಯವಸ್ಥೆ ಇದೆ.</p>.<p>ಈಚೆಗೆ ಶಾಸಕ ಶರಣು ಸಲಗರ ಅವರು ಹೈಟೆಕ್ ಅಂಗನವಾಡಿ ಕೂಡ ಉದ್ಘಾಟಿಸಿದ್ದಾರೆ. ಈ ಕಟ್ಟಡದಲ್ಲಿ ಉತ್ತಮ ಅಡುಗೆ ಕೊಠಡಿ, ಆಟಿಕೆ ಸಾಮಾನು, ಆಸನ, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಶೌಚಾಲವೂ ಇದೆ. ಮಕ್ಕಳ ಶಿಕ್ಷಣಕ್ಕೆ ಅನುಕೂಲ ಮಾಡಿಕೊಡಲು ಟಿವಿ ಹಾಕಲಾಗಿದೆ. ಇಂತಹುದ್ದೇ ಮತ್ತೊಂದು ಅಂಗನವಾಡಿ ನಿರ್ಮಿಸಲಾಗುವುದು ಎನ್ನುತ್ತಾರೆ ಪಂಚಾಯಿತಿ ಅಧಿಕಾರಿಗಳು.</p>.<p>*ಹೊಸ ಗ್ರಾಮ ಪಂಚಾಯಿತಿ ಕಟ್ಟಡದಲ್ಲಿ ಸಭಾಂಗಣ ನಿರ್ಮಾಣಕ್ಕೆ ಅನುದಾನ ಒದಗಿಸುವುದಾಗಿ ಶಾಸಕ ಶರಣು ಸಲಗರ ಭರವಸೆ ನೀಡಿದ್ದಾರೆ, ಚಂದ್ರಾಮ ಧೂಳಖೇಡ, ಪಿಡಿಒ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>