<p><strong>ಔರಾದ್:</strong> ಪಟ್ಟಣದಲ್ಲಿ ಈಚೆಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಆರೋಗ್ಯ ಹಸ್ತ ಕಾರ್ಯಕ್ರಮ ಜರುಗಿತು.</p>.<p>ಮುಖಂಡ ವಿಜಯಕುಮಾರ ಕೌಡಾಳೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,‘ಭಾರತವನ್ನು ಹಸಿವು ಹಾಗೂ ಅನಾರೋಗ್ಯ ಮುಕ್ತ ದೇಶವನ್ನಾಗಿಸಬೇಕು ಎನ್ನುವುದು ಕಾಂಗ್ರೆಸ್ ಉದ್ದೇಶ. ಈ ನಿಟ್ಟಿನಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಗರೀಬಿ ಹಟಾವೋ ದಂಥ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದರು. ಅದನ್ನು ಜನ ಇಂದಿಗೂ ಮರೆತಿಲ್ಲ’ ಎಂದು ಹೇಳಿದರು.</p>.<p>‘ರಾಜ್ಯ ಕೋವಿಡ್ ಸೋಂಕಿನಿಂದ ಮುಕ್ತವಾಗಬೇಕು ಎಂಬ ಕಾರಣದಿಂದ ರಾಜ್ಯದಾದ್ಯಂತ ಕಾಂಗ್ರೆಸ್ ಪಕ್ಷ ಆರೋಗ್ಯ ಹಸ್ತ ಕಾರ್ಯಕ್ರಮ ಜಾರಿಗೆ ತಂದಿದೆ. ಕೋವಿಡ್ ವಾರಿಯರ್ಸ್ ಹಾಗೂ ಪಕ್ಷದ ಕಾರ್ಯಕರ್ತರಿಗೆ ಸೋಂಕಿನ ಕುರಿತು ತಿಳವಳಿಕೆ ಮೂಡಿಸಲಾಗುತ್ತಿದೆ’ ಎಂದು ತಿಳಿಸಿದರು.</p>.<p>ಡಾ.ಶಂಕರರಾವ ಮಾತನಾಡಿ,‘ಕೋವಿಡ್ ಸೋಂಕಿನ ಕುರಿತು ಯಾರೂ ಭಯ ಪಡಬಾರದು. ಇದು ಒಂದು ಸಾಮಾನ್ಯ ರೋಗ ಎಂದು ಪರಿಗಣಿಸಿದವರು ಬೇಗ ಗುಣಮುಖರಾಗುತ್ತಾರೆ. ರೋಗದ ಬಗ್ಗೆ ಹೆಚ್ಚಿನ ಭಯ ಹುಟ್ಟಿಸಿರುವುದು ಜನ ಸಾಯಲು ಕಾರಣವಾಗುತ್ತಿದೆ’ ಎಂದು ಕಳವಳ ವ್ಯಕ್ತಪಡಿಸಿದರು.</p>.<p>‘ಸಾರ್ವಜನಿಕರು ಕೋವಿಡ್ ಸೋಂಕಿತರನ್ನು ಕೀಳಾಗಿ ಕಾಣಬಾರದು. ಬದಲಾಗಿ ಅವರಲ್ಲಿ ಧೈರ್ಯ ತುಂಬಿ ರೋಗ ನಿಯಂತ್ರಿಸಲು ಸಹಕರಿಸಬೇಕು’ ಎಂದು ಸಲಹೆ ನೀಡಿದರು.</p>.<p>ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ಆನಂದ ಚವಾಣ್, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ನೆಹರೂ ಪಾಟೀಲ, ಪ್ರಕಾಶ ಪಾಟೀಲ, ರಾಮಣ್ಣ ವಡೆಯರ್, ಅಂಜಾರೆಡ್ಡಿ, ಅನೀಲ ವಡೆಯರ್ ಹಾಗೂ ಅನೀಲ ನಿರ್ಮಳೆ ಇದ್ದರು.</p>.<p>ಕೋವಿಡ್ ವಾರಿಯರ್ಸ್ಗಳಿಗೆ ಆರೋಗ್ಯ ಹಸ್ತ ಕಿಟ್ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಔರಾದ್:</strong> ಪಟ್ಟಣದಲ್ಲಿ ಈಚೆಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಆರೋಗ್ಯ ಹಸ್ತ ಕಾರ್ಯಕ್ರಮ ಜರುಗಿತು.</p>.<p>ಮುಖಂಡ ವಿಜಯಕುಮಾರ ಕೌಡಾಳೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,‘ಭಾರತವನ್ನು ಹಸಿವು ಹಾಗೂ ಅನಾರೋಗ್ಯ ಮುಕ್ತ ದೇಶವನ್ನಾಗಿಸಬೇಕು ಎನ್ನುವುದು ಕಾಂಗ್ರೆಸ್ ಉದ್ದೇಶ. ಈ ನಿಟ್ಟಿನಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಗರೀಬಿ ಹಟಾವೋ ದಂಥ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದರು. ಅದನ್ನು ಜನ ಇಂದಿಗೂ ಮರೆತಿಲ್ಲ’ ಎಂದು ಹೇಳಿದರು.</p>.<p>‘ರಾಜ್ಯ ಕೋವಿಡ್ ಸೋಂಕಿನಿಂದ ಮುಕ್ತವಾಗಬೇಕು ಎಂಬ ಕಾರಣದಿಂದ ರಾಜ್ಯದಾದ್ಯಂತ ಕಾಂಗ್ರೆಸ್ ಪಕ್ಷ ಆರೋಗ್ಯ ಹಸ್ತ ಕಾರ್ಯಕ್ರಮ ಜಾರಿಗೆ ತಂದಿದೆ. ಕೋವಿಡ್ ವಾರಿಯರ್ಸ್ ಹಾಗೂ ಪಕ್ಷದ ಕಾರ್ಯಕರ್ತರಿಗೆ ಸೋಂಕಿನ ಕುರಿತು ತಿಳವಳಿಕೆ ಮೂಡಿಸಲಾಗುತ್ತಿದೆ’ ಎಂದು ತಿಳಿಸಿದರು.</p>.<p>ಡಾ.ಶಂಕರರಾವ ಮಾತನಾಡಿ,‘ಕೋವಿಡ್ ಸೋಂಕಿನ ಕುರಿತು ಯಾರೂ ಭಯ ಪಡಬಾರದು. ಇದು ಒಂದು ಸಾಮಾನ್ಯ ರೋಗ ಎಂದು ಪರಿಗಣಿಸಿದವರು ಬೇಗ ಗುಣಮುಖರಾಗುತ್ತಾರೆ. ರೋಗದ ಬಗ್ಗೆ ಹೆಚ್ಚಿನ ಭಯ ಹುಟ್ಟಿಸಿರುವುದು ಜನ ಸಾಯಲು ಕಾರಣವಾಗುತ್ತಿದೆ’ ಎಂದು ಕಳವಳ ವ್ಯಕ್ತಪಡಿಸಿದರು.</p>.<p>‘ಸಾರ್ವಜನಿಕರು ಕೋವಿಡ್ ಸೋಂಕಿತರನ್ನು ಕೀಳಾಗಿ ಕಾಣಬಾರದು. ಬದಲಾಗಿ ಅವರಲ್ಲಿ ಧೈರ್ಯ ತುಂಬಿ ರೋಗ ನಿಯಂತ್ರಿಸಲು ಸಹಕರಿಸಬೇಕು’ ಎಂದು ಸಲಹೆ ನೀಡಿದರು.</p>.<p>ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ಆನಂದ ಚವಾಣ್, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ನೆಹರೂ ಪಾಟೀಲ, ಪ್ರಕಾಶ ಪಾಟೀಲ, ರಾಮಣ್ಣ ವಡೆಯರ್, ಅಂಜಾರೆಡ್ಡಿ, ಅನೀಲ ವಡೆಯರ್ ಹಾಗೂ ಅನೀಲ ನಿರ್ಮಳೆ ಇದ್ದರು.</p>.<p>ಕೋವಿಡ್ ವಾರಿಯರ್ಸ್ಗಳಿಗೆ ಆರೋಗ್ಯ ಹಸ್ತ ಕಿಟ್ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>