ಭಾಲ್ಕಿ: ಇಲ್ಲಿಯ ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ಬೇಡ ಜಂಗಮ ಸಮಾಜದಿಂದ ನಡೆಯುತ್ತಿರುವ ಸತ್ಯ ಪ್ರತಿಪಾದನಾ ಸತ್ಯಾಗ್ರಹ 36ನೇ ದಿನಕ್ಕೆ ಕಾಲಿಟ್ಟಿದ್ದು, ಪಟ್ಟಣದ ನಿವಾಸಿ ಧೂಳಯ್ಯ ಚನ್ನಯ್ಯ ಸ್ವಾಮಿ ಬುಧವಾರ ಬೆಳಿಗ್ಗೆ ಅಸ್ವಸ್ಥಗೊಂಡರು.
ಅವರನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಮುಂಚೆ ಚಳಕಾಪುರದ ರಾಚಯ್ಯಾ ಸ್ವಾಮಿ ಅಸ್ವಸ್ಥರಾಗಿದ್ದರು. ಇಷ್ಟು ದಿನದಿಂದ ಸತ್ಯಾಗ್ರಹ ನಡೆಸುತ್ತಿದ್ದರೂ ಯಾವೊಬ್ಬ ರಾಜಕಾರಣಿಯೂ ಭೇಟಿ ಮಾಡಿ ಚರ್ಚಿಸಿಲ್ಲ ಎಂದು ಹೋರಾಟಗಾರರು ಆರೋಪಿಸಿದರು.
ಬೇಡಿಕೆ ಈಡೇರುವವರೆಗೂ ಹೋರಾಟ ನಿಲ್ಲದು ಎಂದು ಪ್ರಮುಖರಾದ ಮಲ್ಲಿಕಾರ್ಜುನ ಸ್ವಾಮಿ, ಮನ್ಮಥ ಸ್ವಾಮಿ ಸೇರಿದಂತೆ ಇತರರು ಸ್ಪಷ್ಟಪಡಿಸಿದರು.