ಶಾಸಕ ಈಶ್ವರ ಖಂಡ್ರೆ ಅವರು ಹಿಂದಿನ ಸರ್ಕಾರದಲ್ಲಿ ಬಡ ವಸತಿ ರಹಿತರಿಗಾಗಿ ಸಾವಿರಾರು ಮನೆಗಳನ್ನು ಮಂಜೂರು ಮಾಡಿಸಿದ್ದರು. ಗುಡಿಸಲು ಮುಕ್ತ ತಾಲ್ಲೂಕಿನ ಸಂಕಲ್ಪ ಹೊಂದಿದ್ದರು. ಇದು ಸಾಕಾರವಾದರೆ ಖಂಡ್ರೆ ಅವರಿಗೆ ಒಳ್ಳೆಯ ಹೆಸರು ಬರುತ್ತದೆ ಎಂಬ ಹೊಟ್ಟೆಕಿಚ್ಚಿನಿಂದ ವಾಮಮಾರ್ಗದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅನಗತ್ಯವಾಗಿ ಭಾಲ್ಕಿ ವಸತಿ ಯೋಜನೆಯಲ್ಲಿ ಮೂಗು ತೋರಿಸಿ ಸುಳ್ಳು ಆರೋಪ ಮಾಡಿ, ತಾವೇ ಸರ್ಕಾರದಿಂದ ತನಿಖೆಗೆ ಅರ್ಹರಲ್ಲದ ಅಧಿಕಾರಿಗಳನ್ನು ಕಳುಹಿಸಿ, ಅಕ್ರಮ ನಡೆದಿದೆ ಎಂದು ಸುಳ್ಳು ವದಂತಿ ಸೃಷ್ಟಿ ಮಾಡಿ, ಅರ್ಹ ಬಡ ಫಲಾನುಭವಿಗಳಿಗೆ ಎರಡು ವರ್ಷದಿಂದಲೂ ಅನಗತ್ಯವಾಗಿ ಕಿರುಕುಳ ನೀಡುತ್ತಿರುವವರು ಖೂಬಾ ಅಲ್ಲದೆ ಮತ್ತಾರೂ ಅಲ್ಲ ಎಂದು ಹೇಳಿದ್ದಾರೆ.