<p><strong>ಔರಾದ್</strong>: ‘ಅಪ್ಪಟ್ಟ ದೇಶಪ್ರೇಮಿಯಾಗಿದ್ದ ಭಗತಸಿಂಗ್ ಅವರ ಆದರ್ಶ ಇಂದಿನ ಯುವಕರಿಗೆ ಮಾದರಿಯಾಗಬೇಕು’ ಎಂದು ವಿಶ್ವ ಹಿಂದೂ ಪರಿಷತ್ ತಾಲ್ಲೂಕು ಅಧ್ಯಕ್ಷ ರಾಜಕುಮಾರ ನಾಯ್ಕ ಹೇಳಿದರು.</p>.<p>ಪಟ್ಟಣದ ಸಾಯಿ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ಭಗತಸಿಂಗ್ ಜಯಂತಿ ಕಾರ್ಯಕ್ರದಲ್ಲಿ ಅವರು ಮಾತನಾಡಿ, ‘ಬಾಲ್ಯದಿಂದಲೇ ದೇಶಭಕ್ತಿ ಮೈಗೂಡಿಸಿಕೊಂಡಿರುವ ಭಗತಸಿಂಗ್ ದೇಶಕ್ಕಾಗಿ ಪ್ರಾಣ ಕೊಟ್ಟಿದ್ದಾರೆ. ಇಂತಹ ಹುತಾತ್ಮರಿಂದಲೇ ಈ ದೇಶ ಭವ್ಯ ಭಾರತ ಎನಿಸಿಕೊಂಡಿದೆ’ ಎಂದು ಹೇಳಿದರು.</p>.<p>ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಜಿಲ್ಲಾ ಸಂಚಾಲಕ ಸತೀಶ ಪಾಂಚಾಳ ಮಾತನಾಡಿ, ‘ಭಗತಸಿಂಗ್ ಅವರು ದೇಶಕ್ಕಾಗಿ ಸಂತೋಷದಿಂದಲೇ ಪ್ರಾಣ ಕೊಟ್ಟವರು. ಪ್ರತಿಯೊಬ್ಬ ಭಾರತೀಯ ತಮ್ಮ ವೈಯಕ್ತಿಕ ಹಿತಾಶಕ್ತಿ ಮರೆತು ದೇಶಕ್ಕಾಗಿ ಒಂದಾಗಬೇಕಾಗಿದೆ’ ಎಂದು ಹೇಳಿದರು.</p>.<p>ಎಬಿವಿಪಿ ಮುಖಂಡ ಅಶೋಕ ಶೆಂಬೆಳ್ಳಿ, ಬಸವರಾಜ ಚೌಕಂಪಳ್ಳೆ, ಅಂಬಾದಾಸ ನೇಳಗೆ, ಪಪ್ಪು ಹಕ್ಕೆ, ಆಕಾಸ, ಅನೀಲ, ರಾಹುಲ್, ಚಂದು, ಕೇಶವ ಹಕ್ಕೆ ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಔರಾದ್</strong>: ‘ಅಪ್ಪಟ್ಟ ದೇಶಪ್ರೇಮಿಯಾಗಿದ್ದ ಭಗತಸಿಂಗ್ ಅವರ ಆದರ್ಶ ಇಂದಿನ ಯುವಕರಿಗೆ ಮಾದರಿಯಾಗಬೇಕು’ ಎಂದು ವಿಶ್ವ ಹಿಂದೂ ಪರಿಷತ್ ತಾಲ್ಲೂಕು ಅಧ್ಯಕ್ಷ ರಾಜಕುಮಾರ ನಾಯ್ಕ ಹೇಳಿದರು.</p>.<p>ಪಟ್ಟಣದ ಸಾಯಿ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ಭಗತಸಿಂಗ್ ಜಯಂತಿ ಕಾರ್ಯಕ್ರದಲ್ಲಿ ಅವರು ಮಾತನಾಡಿ, ‘ಬಾಲ್ಯದಿಂದಲೇ ದೇಶಭಕ್ತಿ ಮೈಗೂಡಿಸಿಕೊಂಡಿರುವ ಭಗತಸಿಂಗ್ ದೇಶಕ್ಕಾಗಿ ಪ್ರಾಣ ಕೊಟ್ಟಿದ್ದಾರೆ. ಇಂತಹ ಹುತಾತ್ಮರಿಂದಲೇ ಈ ದೇಶ ಭವ್ಯ ಭಾರತ ಎನಿಸಿಕೊಂಡಿದೆ’ ಎಂದು ಹೇಳಿದರು.</p>.<p>ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಜಿಲ್ಲಾ ಸಂಚಾಲಕ ಸತೀಶ ಪಾಂಚಾಳ ಮಾತನಾಡಿ, ‘ಭಗತಸಿಂಗ್ ಅವರು ದೇಶಕ್ಕಾಗಿ ಸಂತೋಷದಿಂದಲೇ ಪ್ರಾಣ ಕೊಟ್ಟವರು. ಪ್ರತಿಯೊಬ್ಬ ಭಾರತೀಯ ತಮ್ಮ ವೈಯಕ್ತಿಕ ಹಿತಾಶಕ್ತಿ ಮರೆತು ದೇಶಕ್ಕಾಗಿ ಒಂದಾಗಬೇಕಾಗಿದೆ’ ಎಂದು ಹೇಳಿದರು.</p>.<p>ಎಬಿವಿಪಿ ಮುಖಂಡ ಅಶೋಕ ಶೆಂಬೆಳ್ಳಿ, ಬಸವರಾಜ ಚೌಕಂಪಳ್ಳೆ, ಅಂಬಾದಾಸ ನೇಳಗೆ, ಪಪ್ಪು ಹಕ್ಕೆ, ಆಕಾಸ, ಅನೀಲ, ರಾಹುಲ್, ಚಂದು, ಕೇಶವ ಹಕ್ಕೆ ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>