<p><strong>ಬೀದರ್:</strong>ಚಮಾನವೀಯ ಮೌಲ್ಯಗಳ ಅಮೂಲ್ಯ ಗ್ರಂಥವೇ ಭಗವದ್ಗೀತೆ ಎಂದು ಸಂಸ್ಕೃತ ಪ್ರಾಧ್ಯಾಪಕ ಮಿಲಿಂದ್ ಆಚಾರ್ಯ ನುಡಿದರು.</p>.<p>ಇಲ್ಲಿಯ ಪ್ರತಾಪನಗರದ ಜನಸೇವಾ ಶಿಶು ಮಂದಿರ, ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಭಗವದ್ಗೀತೆ ಅಭಿಯಾನ ಸಮಾರೋಪ ಹಾಗೂ ಗೀತಾ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br />ಭಗವದ್ಗೀತೆ ಗ್ರಂಥವಷ್ಟೇ ಅಲ್ಲ; ಜೀವನದ ಮಾರ್ಗದರ್ಶಕವೂ ಆಗಿದೆ. ಇಡೀ ಮನುಕುಲಕ್ಕೆ ಸಂಬಂಧಿಸಿದ ಗ್ರಂಥ ಇದಾಗಿದೆ ಎಂದು ಹೇಳಿದರು.</p>.<p>ವಿಶ್ವ ಬಂಧುತ್ವ ಸಂದೇಶ ಭಗವದ್ಗೀತೆಯಲ್ಲಿ ಇದೆ. ಅದು ಸತ್ಯ, ನ್ಯಾಯ, ನೀತಿ, ಧರ್ಮವನ್ನು ಸಾರಿದೆ. ಹೀಗಾಗಿ ಭಗವದ್ಗೀತೆ ಅಧ್ಯಯನ ಮಾಡಿದವರು ಶ್ರೇಷ್ಠ ವ್ಯಕ್ತಿಗಳಾಗಿ ಹೊರಹೊಮ್ಮುತ್ತಾರೆ ಎಂದು ತಿಳಿಸಿದರು.</p>.<p>ಸಾಮಾಜಿಕ ಕಾರ್ಯಕರ್ತ ವರದರಾಜ ಬಾವಗೆ ಮಾತನಾಡಿ, ಪ್ರೇರಣಾತ್ಮಕ ಗ್ರಂಥವಾಗಿರುವ ಭಗವದ್ಗೀತೆ ಪಠ್ಯದ ಭಾಗವಾಗಬೇಕು ಎಂದು ಹೇಳಿದರು.</p>.<p>ಬುದ್ಧಿಶಕ್ತಿ, ಆಧ್ಯಾತ್ಮ, ಯೋಗ, ಆಯುರ್ವೇದ ಹೀಗೆ ಎಲ್ಲದರಲ್ಲೂ ಭಾರತ ಶ್ರೇಷ್ಠವಾಗಿದೆ ಎಂದು ತಿಳಿಸಿದರು.<br />ಜನಸೇವಾ ಶಾಲೆಯ ಆಡಳಿತಾಧಿಕಾರಿ ಸೌಭಾಗ್ಯವತಿ ಮಾತನಾಡಿ, ಭಗವದ್ಗೀತೆಯಲ್ಲಿ 18 ಅಧ್ಯಾಯಗಳು ಇವೆ. ನಡೆ, ನುಡಿ ಹೇಗಿರಬೇಕು. ಮಕ್ಕಳಿಗೆ ಯಾವ ರೀತಿ ಸಂಸ್ಕಾರ ಕೊಡಬೇಕು ಎನ್ನುವುದನ್ನು ಅದರಲ್ಲಿ ವಿವರಿಸಲಾಗಿದೆ ಎಂದರು.<br />ಜನಸೇವಾ ಪ್ರತಿಷ್ಠಾನದ ಕಾರ್ಯದರ್ಶಿ ರೇವಣಸಿದ್ದಪ್ಪ ಜಲಾದೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಭಗವದ್ಗೀತೆ ಐದನೇ ಅಧ್ಯಾಯದ ಪಠಣ ಮಾಡಲಾಯಿತು. ಶಿಕ್ಷಕಿ ಜ್ಯೋತಿ ನಿರೂಪಿಸಿದರು. ಮಕ್ಕಳು ಹಾಗೂ ಪಾಲಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong>ಚಮಾನವೀಯ ಮೌಲ್ಯಗಳ ಅಮೂಲ್ಯ ಗ್ರಂಥವೇ ಭಗವದ್ಗೀತೆ ಎಂದು ಸಂಸ್ಕೃತ ಪ್ರಾಧ್ಯಾಪಕ ಮಿಲಿಂದ್ ಆಚಾರ್ಯ ನುಡಿದರು.</p>.<p>ಇಲ್ಲಿಯ ಪ್ರತಾಪನಗರದ ಜನಸೇವಾ ಶಿಶು ಮಂದಿರ, ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಭಗವದ್ಗೀತೆ ಅಭಿಯಾನ ಸಮಾರೋಪ ಹಾಗೂ ಗೀತಾ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br />ಭಗವದ್ಗೀತೆ ಗ್ರಂಥವಷ್ಟೇ ಅಲ್ಲ; ಜೀವನದ ಮಾರ್ಗದರ್ಶಕವೂ ಆಗಿದೆ. ಇಡೀ ಮನುಕುಲಕ್ಕೆ ಸಂಬಂಧಿಸಿದ ಗ್ರಂಥ ಇದಾಗಿದೆ ಎಂದು ಹೇಳಿದರು.</p>.<p>ವಿಶ್ವ ಬಂಧುತ್ವ ಸಂದೇಶ ಭಗವದ್ಗೀತೆಯಲ್ಲಿ ಇದೆ. ಅದು ಸತ್ಯ, ನ್ಯಾಯ, ನೀತಿ, ಧರ್ಮವನ್ನು ಸಾರಿದೆ. ಹೀಗಾಗಿ ಭಗವದ್ಗೀತೆ ಅಧ್ಯಯನ ಮಾಡಿದವರು ಶ್ರೇಷ್ಠ ವ್ಯಕ್ತಿಗಳಾಗಿ ಹೊರಹೊಮ್ಮುತ್ತಾರೆ ಎಂದು ತಿಳಿಸಿದರು.</p>.<p>ಸಾಮಾಜಿಕ ಕಾರ್ಯಕರ್ತ ವರದರಾಜ ಬಾವಗೆ ಮಾತನಾಡಿ, ಪ್ರೇರಣಾತ್ಮಕ ಗ್ರಂಥವಾಗಿರುವ ಭಗವದ್ಗೀತೆ ಪಠ್ಯದ ಭಾಗವಾಗಬೇಕು ಎಂದು ಹೇಳಿದರು.</p>.<p>ಬುದ್ಧಿಶಕ್ತಿ, ಆಧ್ಯಾತ್ಮ, ಯೋಗ, ಆಯುರ್ವೇದ ಹೀಗೆ ಎಲ್ಲದರಲ್ಲೂ ಭಾರತ ಶ್ರೇಷ್ಠವಾಗಿದೆ ಎಂದು ತಿಳಿಸಿದರು.<br />ಜನಸೇವಾ ಶಾಲೆಯ ಆಡಳಿತಾಧಿಕಾರಿ ಸೌಭಾಗ್ಯವತಿ ಮಾತನಾಡಿ, ಭಗವದ್ಗೀತೆಯಲ್ಲಿ 18 ಅಧ್ಯಾಯಗಳು ಇವೆ. ನಡೆ, ನುಡಿ ಹೇಗಿರಬೇಕು. ಮಕ್ಕಳಿಗೆ ಯಾವ ರೀತಿ ಸಂಸ್ಕಾರ ಕೊಡಬೇಕು ಎನ್ನುವುದನ್ನು ಅದರಲ್ಲಿ ವಿವರಿಸಲಾಗಿದೆ ಎಂದರು.<br />ಜನಸೇವಾ ಪ್ರತಿಷ್ಠಾನದ ಕಾರ್ಯದರ್ಶಿ ರೇವಣಸಿದ್ದಪ್ಪ ಜಲಾದೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಭಗವದ್ಗೀತೆ ಐದನೇ ಅಧ್ಯಾಯದ ಪಠಣ ಮಾಡಲಾಯಿತು. ಶಿಕ್ಷಕಿ ಜ್ಯೋತಿ ನಿರೂಪಿಸಿದರು. ಮಕ್ಕಳು ಹಾಗೂ ಪಾಲಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>