<p><strong>ಚಿಟಗುಪ್ಪ</strong>: ‘ಬದುಕಿನಲ್ಲಿ ಯಾವುದೂ ಅಸಾಧ್ಯವಲ್ಲ. ಮನಸ್ಸು ಮಾಡಿದರೆ ಎಲ್ಲವನ್ನೂ ಸಾಧಿಸಬಹುದು ಎಂಬ ಸಂದೇಶವನ್ನು ಭಗೀರಥ ಮಹರ್ಷಿಗಳು ಸಮಾಜಕ್ಕೆ ನೀಡಿದ್ದಾರೆ’ ಎಂದು ಪುರಸಭೆ ಅಧ್ಯಕ್ಷೆ ಮಾಲಾಶ್ರೀ ಶಾಮರಾವ್ ತಿಳಿಸಿದರು.</p>.<p>ಇಲ್ಲಿಯ ಪುರಸಭೆ ಕಚೇರಿಯಲ್ಲಿ ನಡೆದ ಭಗೀರಥ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಭಗೀರಥರು ಸಾವಿರ ವರ್ಷ ತಪಸ್ಸು ಮಾಡಿದ್ದರು ಎಂಬ ಪ್ರತೀತಿ ಇದೆ. ಒಂದು ಕಾರ್ಯ ಸಾಧನೆಗಾಗಿ ಎಲ್ಲವನ್ನೂ ತ್ಯಜಿಸಿ ಸಾವಿರ ವರ್ಷ ನಿರಂತರವಾಗಿ ಪ್ರಯತ್ನ ಮಾಡುವುದು ಮಾದರಿ. ಸಮಾಜಮುಖಿಯಾಗಿ ಕೆಲಸ ಮಾಡಲು, ಅಂದುಕೊಂಡಿದ್ದನ್ನು ಸಾಧಿಸಲು ಯುವಕರಿಗೆ ಭಗೀರಥರ ಪ್ರಯತ್ನ ಪ್ರೇರಣೆಯಾಗಬೇಕು’ ಎಂದು ಹೇಳಿದರು.</p>.<p>ಮುಖ್ಯಾಧಿಕಾರಿ ಹುಸಾಮೋದ್ದೀನ್ ಮಾತನಾಡಿ,‘ಸಮಾಜದಲ್ಲಿ ಮೌಲ್ಯಗಳು ಕಡಿಮೆಯಾಗುತ್ತಿರುವ ಈ ಸಂದರ್ಭದಲ್ಲಿ ಇಂಥ ಮಹನೀಯರ ಸಂದೇಶಗಳನ್ನು ಕೇಳಿದಾಗ ಬದುಕಿಗೆ ಹೊಸ ಚೈತನ್ಯ ಬರುತ್ತದೆ. ಇನ್ನಷ್ಟು ಸಾಧನೆಗಳನ್ನು ಮಾಡಲು ಭರವಸೆ ಮತ್ತು ಧೈರ್ಯ ಬರುತ್ತದೆ’ ಎಂದರು.</p>.<p>ಪುರಸಭೆ ಸಿಬ್ಬಂದಿ ರವಿ ಸ್ವಾಮಿ, ವೈಶಾಲಿ, ರಾಜು ತೆಲಂಗ್, ಇಲಾಹಿ, ಧನರಾಜ್ ಹಾಗೂ ಗಣ್ಯರಾದ ಶಾಮರಾವ್ ಭುಲಾಳೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಟಗುಪ್ಪ</strong>: ‘ಬದುಕಿನಲ್ಲಿ ಯಾವುದೂ ಅಸಾಧ್ಯವಲ್ಲ. ಮನಸ್ಸು ಮಾಡಿದರೆ ಎಲ್ಲವನ್ನೂ ಸಾಧಿಸಬಹುದು ಎಂಬ ಸಂದೇಶವನ್ನು ಭಗೀರಥ ಮಹರ್ಷಿಗಳು ಸಮಾಜಕ್ಕೆ ನೀಡಿದ್ದಾರೆ’ ಎಂದು ಪುರಸಭೆ ಅಧ್ಯಕ್ಷೆ ಮಾಲಾಶ್ರೀ ಶಾಮರಾವ್ ತಿಳಿಸಿದರು.</p>.<p>ಇಲ್ಲಿಯ ಪುರಸಭೆ ಕಚೇರಿಯಲ್ಲಿ ನಡೆದ ಭಗೀರಥ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಭಗೀರಥರು ಸಾವಿರ ವರ್ಷ ತಪಸ್ಸು ಮಾಡಿದ್ದರು ಎಂಬ ಪ್ರತೀತಿ ಇದೆ. ಒಂದು ಕಾರ್ಯ ಸಾಧನೆಗಾಗಿ ಎಲ್ಲವನ್ನೂ ತ್ಯಜಿಸಿ ಸಾವಿರ ವರ್ಷ ನಿರಂತರವಾಗಿ ಪ್ರಯತ್ನ ಮಾಡುವುದು ಮಾದರಿ. ಸಮಾಜಮುಖಿಯಾಗಿ ಕೆಲಸ ಮಾಡಲು, ಅಂದುಕೊಂಡಿದ್ದನ್ನು ಸಾಧಿಸಲು ಯುವಕರಿಗೆ ಭಗೀರಥರ ಪ್ರಯತ್ನ ಪ್ರೇರಣೆಯಾಗಬೇಕು’ ಎಂದು ಹೇಳಿದರು.</p>.<p>ಮುಖ್ಯಾಧಿಕಾರಿ ಹುಸಾಮೋದ್ದೀನ್ ಮಾತನಾಡಿ,‘ಸಮಾಜದಲ್ಲಿ ಮೌಲ್ಯಗಳು ಕಡಿಮೆಯಾಗುತ್ತಿರುವ ಈ ಸಂದರ್ಭದಲ್ಲಿ ಇಂಥ ಮಹನೀಯರ ಸಂದೇಶಗಳನ್ನು ಕೇಳಿದಾಗ ಬದುಕಿಗೆ ಹೊಸ ಚೈತನ್ಯ ಬರುತ್ತದೆ. ಇನ್ನಷ್ಟು ಸಾಧನೆಗಳನ್ನು ಮಾಡಲು ಭರವಸೆ ಮತ್ತು ಧೈರ್ಯ ಬರುತ್ತದೆ’ ಎಂದರು.</p>.<p>ಪುರಸಭೆ ಸಿಬ್ಬಂದಿ ರವಿ ಸ್ವಾಮಿ, ವೈಶಾಲಿ, ರಾಜು ತೆಲಂಗ್, ಇಲಾಹಿ, ಧನರಾಜ್ ಹಾಗೂ ಗಣ್ಯರಾದ ಶಾಮರಾವ್ ಭುಲಾಳೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>