<p>ಬೀದರ್: ‘ಡಿಸಿಸಿ ಬ್ಯಾಂಕ್ನವರು ಮೈಕ್ರೋ ಫೈನಾನ್ಸ್ ತರಹ ಕೆಲಸ ನಿರ್ವಹಿಸುತ್ತಿದ್ದು, ರೈತರಿಗೆ ಬ್ಯಾಂಕಿಗೆ ಹೋಗಲು ಹೆದರಿಕೆಯಾಗುವ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ಕೇಂದ್ರದ ಮಾಜಿಸಚಿವರೂ ಆದ ಬಿಜೆಪಿ ಮುಖಂಡ ಭಗವಂತ ಖೂಬಾ ಆರೋಪಿಸಿದ್ದಾರೆ.</p><p>ಪ್ರೋತ್ಸಾಹ ಧನಕ್ಕೂ ಕತ್ತರಿ ಹಾಕುವ ಕೆಲಸ ಮಾಡಲಾಗುತ್ತಿದೆ ಎಂದು ರೈತರು ನನ್ನ ಗಮನಕ್ಕೆ ತಂದಿದ್ದಾರೆ. ಆದರೆ, ಪ್ರಧಾನಿಗಳು ರೈತರಿಗೆ ಸಹಾಯವಾಗಲಿ, ಅವರ ಸಣ್ಣ ಪುಟ್ಟ ಅವಶ್ಯಕತೆಗಳು ಈಡೇರಲಿ ಎನ್ನುವ ಉದ್ದೇಶದಿಂದ ಪ್ರೋತ್ಸಾಹ ಧನ ನೀಡುತ್ತಿದ್ದಾರೆ. ಡಿಸಿಸಿ ಬ್ಯಾಂಕಿನವರು ಯಾವುದೇ ಕಾರಣಕ್ಕೂ ಈ ಪ್ರೋತ್ಸಾಹ ಧನವನ್ನು ತಮ್ಮ ಬ್ಯಾಂಕಿನ ರೈತರ ಸಾಲಗಳಲ್ಲಿ ಕಟ್ ಮಾಡಿಕೊಳ್ಳದೆ, ರೈತರಿಗೆ ಈ ಹಣ ನೀಡಬೇಕೆಂದು ಭಾನುವಾರ ಹೊರಡಿಸಿರುವ ಪತ್ರಿಕಾ ಪ್ರಕಟಣೆ ಮೂಲಕ ಆಗ್ರಹಿಸಿದ್ದಾರೆ.</p><p>ಕಾಂಗ್ರೆಸ್ನವರು ಹೆಚ್ಚೂ ಕಡಿಮೆ 60 ವರ್ಷಗಳ ಕಾಲ ಈ ದೇಶದಲ್ಲಿ ಅಧಿಕಾರ ನಡೆಸಿದ್ದಾರೆ. ರೈತರಾಗಲಿ, ಮಹಿಳೆಯರಾಗಲಿ, ಬಡವರ ಬಗ್ಗೆ ಕಾಳಜಿ ತೋರಿಲ್ಲ. ಆದರೆ, ಮೋದಿಯವರು ಬಂದ ನಂತರ ಎಲ್ಲಾ ವರ್ಗದ ಜನರಿಗೆ ಅನುಕೂಲವಾಗುವಂತೆ ಸಹಾಯ ಹಸ್ತ ಚಾಚುತ್ತಿದ್ದಾರೆ. ಎಲ್ಲರ ಅಭಿವೃದ್ಧಿಗೆ ಯೋಜನೆಗಳು ರೂಪಿಸುತ್ತಿದ್ದಾರೆ ಎಂದಿದ್ದಾರೆ.</p><p>ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ 20ನೇ ಕಂತಿನ ಪ್ರೋತ್ಸಾಹ ಧನವನ್ನು ದೇಶದ ರೈತರ ಖಾತೆಗೆ ಜಮೆ ಮಾಡಿದ್ದಾರೆ. ಇದರಲ್ಲಿ ಬೀದರ್ ಲೋಕಸಭಾ ಕ್ಷೇತ್ರದ 3 ಲಕ್ಷ ರೈತರ ಖಾತೆಗೆ ಒಟ್ಟು ₹60 ಕೋಟಿ ಪ್ರೋತ್ಸಾಹ ಧನ ಜಮೆಯಾಗಿರುತ್ತದೆ. 3 ಲಕ್ಷ ರೈತರ ಪೈಕಿ ಬೀದರ್ ಡಿಸಿಸಿ ಬ್ಯಾಂಕ್ ಮೂಲಕ ಒಟ್ಟು 57,916 ರೈತರ ಖಾತೆಗೆ ₹11.58 ಕೋಟಿ ಜಮೆ ಯಾಗಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ‘ಡಿಸಿಸಿ ಬ್ಯಾಂಕ್ನವರು ಮೈಕ್ರೋ ಫೈನಾನ್ಸ್ ತರಹ ಕೆಲಸ ನಿರ್ವಹಿಸುತ್ತಿದ್ದು, ರೈತರಿಗೆ ಬ್ಯಾಂಕಿಗೆ ಹೋಗಲು ಹೆದರಿಕೆಯಾಗುವ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ಕೇಂದ್ರದ ಮಾಜಿಸಚಿವರೂ ಆದ ಬಿಜೆಪಿ ಮುಖಂಡ ಭಗವಂತ ಖೂಬಾ ಆರೋಪಿಸಿದ್ದಾರೆ.</p><p>ಪ್ರೋತ್ಸಾಹ ಧನಕ್ಕೂ ಕತ್ತರಿ ಹಾಕುವ ಕೆಲಸ ಮಾಡಲಾಗುತ್ತಿದೆ ಎಂದು ರೈತರು ನನ್ನ ಗಮನಕ್ಕೆ ತಂದಿದ್ದಾರೆ. ಆದರೆ, ಪ್ರಧಾನಿಗಳು ರೈತರಿಗೆ ಸಹಾಯವಾಗಲಿ, ಅವರ ಸಣ್ಣ ಪುಟ್ಟ ಅವಶ್ಯಕತೆಗಳು ಈಡೇರಲಿ ಎನ್ನುವ ಉದ್ದೇಶದಿಂದ ಪ್ರೋತ್ಸಾಹ ಧನ ನೀಡುತ್ತಿದ್ದಾರೆ. ಡಿಸಿಸಿ ಬ್ಯಾಂಕಿನವರು ಯಾವುದೇ ಕಾರಣಕ್ಕೂ ಈ ಪ್ರೋತ್ಸಾಹ ಧನವನ್ನು ತಮ್ಮ ಬ್ಯಾಂಕಿನ ರೈತರ ಸಾಲಗಳಲ್ಲಿ ಕಟ್ ಮಾಡಿಕೊಳ್ಳದೆ, ರೈತರಿಗೆ ಈ ಹಣ ನೀಡಬೇಕೆಂದು ಭಾನುವಾರ ಹೊರಡಿಸಿರುವ ಪತ್ರಿಕಾ ಪ್ರಕಟಣೆ ಮೂಲಕ ಆಗ್ರಹಿಸಿದ್ದಾರೆ.</p><p>ಕಾಂಗ್ರೆಸ್ನವರು ಹೆಚ್ಚೂ ಕಡಿಮೆ 60 ವರ್ಷಗಳ ಕಾಲ ಈ ದೇಶದಲ್ಲಿ ಅಧಿಕಾರ ನಡೆಸಿದ್ದಾರೆ. ರೈತರಾಗಲಿ, ಮಹಿಳೆಯರಾಗಲಿ, ಬಡವರ ಬಗ್ಗೆ ಕಾಳಜಿ ತೋರಿಲ್ಲ. ಆದರೆ, ಮೋದಿಯವರು ಬಂದ ನಂತರ ಎಲ್ಲಾ ವರ್ಗದ ಜನರಿಗೆ ಅನುಕೂಲವಾಗುವಂತೆ ಸಹಾಯ ಹಸ್ತ ಚಾಚುತ್ತಿದ್ದಾರೆ. ಎಲ್ಲರ ಅಭಿವೃದ್ಧಿಗೆ ಯೋಜನೆಗಳು ರೂಪಿಸುತ್ತಿದ್ದಾರೆ ಎಂದಿದ್ದಾರೆ.</p><p>ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ 20ನೇ ಕಂತಿನ ಪ್ರೋತ್ಸಾಹ ಧನವನ್ನು ದೇಶದ ರೈತರ ಖಾತೆಗೆ ಜಮೆ ಮಾಡಿದ್ದಾರೆ. ಇದರಲ್ಲಿ ಬೀದರ್ ಲೋಕಸಭಾ ಕ್ಷೇತ್ರದ 3 ಲಕ್ಷ ರೈತರ ಖಾತೆಗೆ ಒಟ್ಟು ₹60 ಕೋಟಿ ಪ್ರೋತ್ಸಾಹ ಧನ ಜಮೆಯಾಗಿರುತ್ತದೆ. 3 ಲಕ್ಷ ರೈತರ ಪೈಕಿ ಬೀದರ್ ಡಿಸಿಸಿ ಬ್ಯಾಂಕ್ ಮೂಲಕ ಒಟ್ಟು 57,916 ರೈತರ ಖಾತೆಗೆ ₹11.58 ಕೋಟಿ ಜಮೆ ಯಾಗಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>