ಭಾಲ್ಕಿ ತಾಲ್ಲೂಕಿನ ಪಿಡಿಒಗಳ ಬೇಜವಾಬ್ದಾರಿತನದಿಂದ ಬಡವರು ಕಂಗಾಲಾಗುತ್ತಿದ್ದಾರೆ. ಆರ್ಥಿಕವಾಗಿ ತೊಂದರೆಗೆ ಒಳಗಾಗುತ್ತಿದ್ದಾರೆ. ಕೂಡಲೇ ತಾಲ್ಲೂಕಿನಲ್ಲಿ ಬಾಕಿ ಉಳಿದ ಎಲ್ಲ ಮನೆಗಳ ಜಿಪಿಎಸ್ ಪೂರ್ಣಗೊಳಿಸಿ, ರಾಜೀವ ಗಾಂಧಿ ವಸತಿ ನಿಗಮಕ್ಕೆ ವರದಿ ಸಲ್ಲಿಸಬೇಕು. ವರದಿ ಸಲ್ಲಿಸಿದ ಬಳಿಕ ಸರ್ಕಾರ ಅನುದಾನ ಬಿಡುಗಡೆ ಮಾಡಲಿದೆ ಎಂದು ಹೇಳಿದ್ದಾರೆ.