<p><strong>ಭಾಲ್ಕಿ</strong>: ಮುಂಗಾರು ಮತ್ತು ಹಿಂಗಾರು ಮಳೆ ಅಭಾವದ ಕಾರಣ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುವುದರಿಂದ ಕುಡಿಯುವ ನೀರು ಅನಾವಶ್ಯಕವಾಗಿ ವ್ಯಯ ಮಾಡದೆ ಹಿತಮಿತವಾಗಿ ಬಳಸಬೇಕು ಎಂದು ಶಾಸಕ ಈಶ್ವರ ಖಂಡ್ರೆ ಸಲಹೆ ನೀಡಿದರು.</p>.<p>ಇಲ್ಲಿನ ಉಪನ್ಯಾಸಕರ ಬಡಾವಣೆಯಲ್ಲಿರುವ ಮೌನೇಶ್ವರ ಮಂದಿರ ಹತ್ತಿರ ಕುಡಿಯುವ ನೀರಿಗಾಗಿ ಕೊರೆಸಿದ ಕೊಳವೆ ಬಾವಿಗೆ ಚಾಲನೆ ನೀಡಿ ಮಾತನಾಡಿದರು.</p>.<p>ಮಹಾಮಾರಿ ಕೊರೊನಾ ಹಾವಳಿಯ ಮಧ್ಯೆಯೂ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಎದುರಾಗುತ್ತಿದೆ. ಇಲ್ಲಿನ ಸಾರ್ವಜನಿಕರ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ಬಗೆಹರಿಸಲು ಕಾರಂಜಾ ಜಲಾಶಯದಿಂದ ನೇರ ಪೈಪ್ಲೈನ್ ಅಳವಡಿಸಲಾಗುತ್ತಿದೆ. ನೀರು ತೆಗೆದುಕೊಳ್ಳುವಾಗ ಮಾಸ್ಕ್ ಧರಿಸಿಕೊಂಡು, ಅಂತರ ಕಾಪಾಡಬೇಕು ಎಂದು ಹೇಳಿದರು.</p>.<p>ಪುರಸಭೆ ಸದಸ್ಯ ರಾಹುಲ್ ಪೂಜಾರಿ, ಅರ್ಬನ್ ಬ್ಯಾಂಕ್ ನಿರ್ದೇಶಕ ಚಂದ್ರಶೇಖರ ವಂಕೆ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಾಲ್ಕಿ</strong>: ಮುಂಗಾರು ಮತ್ತು ಹಿಂಗಾರು ಮಳೆ ಅಭಾವದ ಕಾರಣ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುವುದರಿಂದ ಕುಡಿಯುವ ನೀರು ಅನಾವಶ್ಯಕವಾಗಿ ವ್ಯಯ ಮಾಡದೆ ಹಿತಮಿತವಾಗಿ ಬಳಸಬೇಕು ಎಂದು ಶಾಸಕ ಈಶ್ವರ ಖಂಡ್ರೆ ಸಲಹೆ ನೀಡಿದರು.</p>.<p>ಇಲ್ಲಿನ ಉಪನ್ಯಾಸಕರ ಬಡಾವಣೆಯಲ್ಲಿರುವ ಮೌನೇಶ್ವರ ಮಂದಿರ ಹತ್ತಿರ ಕುಡಿಯುವ ನೀರಿಗಾಗಿ ಕೊರೆಸಿದ ಕೊಳವೆ ಬಾವಿಗೆ ಚಾಲನೆ ನೀಡಿ ಮಾತನಾಡಿದರು.</p>.<p>ಮಹಾಮಾರಿ ಕೊರೊನಾ ಹಾವಳಿಯ ಮಧ್ಯೆಯೂ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಎದುರಾಗುತ್ತಿದೆ. ಇಲ್ಲಿನ ಸಾರ್ವಜನಿಕರ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ಬಗೆಹರಿಸಲು ಕಾರಂಜಾ ಜಲಾಶಯದಿಂದ ನೇರ ಪೈಪ್ಲೈನ್ ಅಳವಡಿಸಲಾಗುತ್ತಿದೆ. ನೀರು ತೆಗೆದುಕೊಳ್ಳುವಾಗ ಮಾಸ್ಕ್ ಧರಿಸಿಕೊಂಡು, ಅಂತರ ಕಾಪಾಡಬೇಕು ಎಂದು ಹೇಳಿದರು.</p>.<p>ಪುರಸಭೆ ಸದಸ್ಯ ರಾಹುಲ್ ಪೂಜಾರಿ, ಅರ್ಬನ್ ಬ್ಯಾಂಕ್ ನಿರ್ದೇಶಕ ಚಂದ್ರಶೇಖರ ವಂಕೆ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>