<p>ಭಾಲ್ಕಿ: ‘ಸಾಹಿತ್ಯದ ನಿರಂತರ ಓದು ಚಿಂತನಾ ಶಕ್ತಿಯನ್ನು ಹೆಚ್ಚಿಸಿ ಸುಜ್ಞಾನಿಗಳನ್ನಾಗಿಸುತ್ತದೆ’ ಎಂದು ಅನುಭವ ಮಂಟಪದ ಸಂಚಾಲಕ ಶಿವಾನಂದ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ಕರಡ್ಯಾಳದ ಶ್ರೀಚನ್ನಬಸವೇಶ್ವರ ಗುರುಕುಲ ವಿಜ್ಞಾನ ಕಾಲೇಜಿನಲ್ಲಿ ನಿವೃತ್ತ ಐಪಿಎಸ್ ಡಿ.ವಿ.ಗುರುಪ್ರಸಾದ ವಿರಚಿತ ‘ಕೈಗೆ ಬಂದ ತುತ್ತು’ ಆತ್ಮಕಥನದ ಮೂರನೇ ಆವೃತ್ತಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.</p>.<p>ನಿವೃತ್ತ ಐಪಿಎಸ್ ಅಧಿಕಾರಿ, ಆತ್ಮಕಥನದ ಲೇಖಕ ಡಿ.ವಿ.ಗುರುಪ್ರಸಾದ ಮಾತನಾಡಿ, ‘ವಿದ್ಯಾರ್ಥಿಗಳು ಜೀವನದಲ್ಲಿ ಎದುರಾಗುವ ಕಷ್ಟಗಳ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳದೆ ಧೈರ್ಯಶಾಲಿಗಳಾಗಿ ಮುನ್ನುಗ್ಗಬೇಕು. ಅಂದಾಗ ಮಾತ್ರ ಮಹೋನ್ನತ ಸಾಧನೆ, ಯಶಸ್ವಿ ಜೀವನ ನಡೆಸಲು ಸಾಧ್ಯ’ ಎಂದು ಮಾರ್ಮಿಕ ಉದಾಹರಣೆ ಸಹಿತ ತಿಳಿಸಿದರು.</p>.<p>ಆಡಳಿತಾಧಿಕಾರಿ ಮೋಹನರೆಡ್ಡಿ, ಪ್ರಾಚಾರ್ಯ ಬಸವರಾಜ ಮೊಳಕೀರೆ, ಉಪ ಪ್ರಾಚಾರ್ಯ ಸಿದ್ರಾಮ ಗೊಗ್ಗಾ, ಮಧುಕರ ಗಾಂವ್ಕರ್ ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಭಾಲ್ಕಿ: ‘ಸಾಹಿತ್ಯದ ನಿರಂತರ ಓದು ಚಿಂತನಾ ಶಕ್ತಿಯನ್ನು ಹೆಚ್ಚಿಸಿ ಸುಜ್ಞಾನಿಗಳನ್ನಾಗಿಸುತ್ತದೆ’ ಎಂದು ಅನುಭವ ಮಂಟಪದ ಸಂಚಾಲಕ ಶಿವಾನಂದ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ಕರಡ್ಯಾಳದ ಶ್ರೀಚನ್ನಬಸವೇಶ್ವರ ಗುರುಕುಲ ವಿಜ್ಞಾನ ಕಾಲೇಜಿನಲ್ಲಿ ನಿವೃತ್ತ ಐಪಿಎಸ್ ಡಿ.ವಿ.ಗುರುಪ್ರಸಾದ ವಿರಚಿತ ‘ಕೈಗೆ ಬಂದ ತುತ್ತು’ ಆತ್ಮಕಥನದ ಮೂರನೇ ಆವೃತ್ತಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.</p>.<p>ನಿವೃತ್ತ ಐಪಿಎಸ್ ಅಧಿಕಾರಿ, ಆತ್ಮಕಥನದ ಲೇಖಕ ಡಿ.ವಿ.ಗುರುಪ್ರಸಾದ ಮಾತನಾಡಿ, ‘ವಿದ್ಯಾರ್ಥಿಗಳು ಜೀವನದಲ್ಲಿ ಎದುರಾಗುವ ಕಷ್ಟಗಳ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳದೆ ಧೈರ್ಯಶಾಲಿಗಳಾಗಿ ಮುನ್ನುಗ್ಗಬೇಕು. ಅಂದಾಗ ಮಾತ್ರ ಮಹೋನ್ನತ ಸಾಧನೆ, ಯಶಸ್ವಿ ಜೀವನ ನಡೆಸಲು ಸಾಧ್ಯ’ ಎಂದು ಮಾರ್ಮಿಕ ಉದಾಹರಣೆ ಸಹಿತ ತಿಳಿಸಿದರು.</p>.<p>ಆಡಳಿತಾಧಿಕಾರಿ ಮೋಹನರೆಡ್ಡಿ, ಪ್ರಾಚಾರ್ಯ ಬಸವರಾಜ ಮೊಳಕೀರೆ, ಉಪ ಪ್ರಾಚಾರ್ಯ ಸಿದ್ರಾಮ ಗೊಗ್ಗಾ, ಮಧುಕರ ಗಾಂವ್ಕರ್ ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>