<p><strong>ಭಾಲ್ಕಿ:</strong> ‘ಮಕ್ಕಳ ಸರ್ವತೋಮುಖ ಬೆಳವಣಿಗೆ ಹಾಗೂ ಕಲಿಕೆಯ ಮೇಲಿನ ಆಸಕ್ತಿ ಹೆಚ್ಚಿಸಲು ಎಫ್ಎಲ್ಎನ್ ಕಲಿಕಾ ಹಬ್ಬಗಳು ಪ್ರಮುಖ ಪಾತ್ರ ವಹಿಸುತ್ತಿವೆ’ ಎಂದು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ದತ್ತಾತ್ರಿ ಕಾಟ್ಕರ್ ಹೇಳಿದರು.</p>.<p>ತಾಲ್ಲೂಕಿನ ಕೋಟಗ್ಯಾಳವಾಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಡೋಣಗಾಪುರ ಕ್ಲಸ್ಟರ್ ಮಟ್ಟದ ಎಫ್ಎಲ್ಎನ್ ಕಲಿಕಾ ಹಬ್ಬ–2026 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಕಲಿಕಾ ಹಬ್ಬಗಳು ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತಂದು, ಕಲಿಕೆಯನ್ನು ಸಂತಸದಾಯಕವಾಗಿಸುತ್ತವೆ. 1 ರಿಂದ 5ನೇ ತರಗತಿಯ ಮಕ್ಕಳಿಗೆ ಆಯೋಜಿಸುವ ಈ ಚಟುವಟಿಕೆಗಳು ಸಮುದಾಯದಲ್ಲಿ ಶಾಲೆಗಳ ಮೇಲಿನ ನಂಬಿಕೆಯನ್ನು ಹೆಚ್ಚಿಸುತ್ತವೆ ಎಂದರು.</p>.<p>ಬಿ.ಆರ್.ಪಿ ಸಂಜುಕುಮಾರ ಸಾವರೇ ಮಾತನಾಡಿ, ‘ಮಕ್ಕಳಲ್ಲಿ ಪ್ರಶ್ನಿಸುವ ಮನೋಭಾವ, ಆತ್ಮವಿಶ್ವಾಸ ಮತ್ತು ಸಕ್ರೀಯ ಕಲಿಕೆ ಬೆಳೆಸುವುದೇ ಕಲಿಕಾ ಹಬ್ಬದ ಮುಖ್ಯ ಉದ್ದೇಶ ಎಂದು ಹೇಳಿದರು.</p>.<p>ಬಿಆರ್ಪಿ ಸಂತೋಷ ಮುಧೋಳೆ, ಚೇತನಾ, ಸಿಆರ್ಪಿ ಅಶೋಕ ಕಲ್ಯಾಣೆ, ಮಹೇಶ ಕೊರಾಳೆ, ಸತ್ಯವಾನ ಕಾಂಬಳೆ, ಸಂದೀಪ ವಾಡೇಕರ್, ಸಂತೋಷ ಧಬಾಲೆ, ಮುಖ್ಯಶಿಕ್ಷಕರಾದ ಶ್ರೀದೇವಿ ಬಿರಾದರ, ಪ್ರಭಾಕರ ಪಾಟೀಲ, ಸಿಆರ್ಪಿ ಚಂದ್ರಕಾಂತ ತಳವಾಡೆ, ಗಂಗಾಧರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಾಲ್ಕಿ:</strong> ‘ಮಕ್ಕಳ ಸರ್ವತೋಮುಖ ಬೆಳವಣಿಗೆ ಹಾಗೂ ಕಲಿಕೆಯ ಮೇಲಿನ ಆಸಕ್ತಿ ಹೆಚ್ಚಿಸಲು ಎಫ್ಎಲ್ಎನ್ ಕಲಿಕಾ ಹಬ್ಬಗಳು ಪ್ರಮುಖ ಪಾತ್ರ ವಹಿಸುತ್ತಿವೆ’ ಎಂದು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ದತ್ತಾತ್ರಿ ಕಾಟ್ಕರ್ ಹೇಳಿದರು.</p>.<p>ತಾಲ್ಲೂಕಿನ ಕೋಟಗ್ಯಾಳವಾಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಡೋಣಗಾಪುರ ಕ್ಲಸ್ಟರ್ ಮಟ್ಟದ ಎಫ್ಎಲ್ಎನ್ ಕಲಿಕಾ ಹಬ್ಬ–2026 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಕಲಿಕಾ ಹಬ್ಬಗಳು ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತಂದು, ಕಲಿಕೆಯನ್ನು ಸಂತಸದಾಯಕವಾಗಿಸುತ್ತವೆ. 1 ರಿಂದ 5ನೇ ತರಗತಿಯ ಮಕ್ಕಳಿಗೆ ಆಯೋಜಿಸುವ ಈ ಚಟುವಟಿಕೆಗಳು ಸಮುದಾಯದಲ್ಲಿ ಶಾಲೆಗಳ ಮೇಲಿನ ನಂಬಿಕೆಯನ್ನು ಹೆಚ್ಚಿಸುತ್ತವೆ ಎಂದರು.</p>.<p>ಬಿ.ಆರ್.ಪಿ ಸಂಜುಕುಮಾರ ಸಾವರೇ ಮಾತನಾಡಿ, ‘ಮಕ್ಕಳಲ್ಲಿ ಪ್ರಶ್ನಿಸುವ ಮನೋಭಾವ, ಆತ್ಮವಿಶ್ವಾಸ ಮತ್ತು ಸಕ್ರೀಯ ಕಲಿಕೆ ಬೆಳೆಸುವುದೇ ಕಲಿಕಾ ಹಬ್ಬದ ಮುಖ್ಯ ಉದ್ದೇಶ ಎಂದು ಹೇಳಿದರು.</p>.<p>ಬಿಆರ್ಪಿ ಸಂತೋಷ ಮುಧೋಳೆ, ಚೇತನಾ, ಸಿಆರ್ಪಿ ಅಶೋಕ ಕಲ್ಯಾಣೆ, ಮಹೇಶ ಕೊರಾಳೆ, ಸತ್ಯವಾನ ಕಾಂಬಳೆ, ಸಂದೀಪ ವಾಡೇಕರ್, ಸಂತೋಷ ಧಬಾಲೆ, ಮುಖ್ಯಶಿಕ್ಷಕರಾದ ಶ್ರೀದೇವಿ ಬಿರಾದರ, ಪ್ರಭಾಕರ ಪಾಟೀಲ, ಸಿಆರ್ಪಿ ಚಂದ್ರಕಾಂತ ತಳವಾಡೆ, ಗಂಗಾಧರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>