<p><strong>ಭಾಲ್ಕಿ</strong>: ಪಟ್ಟಣದ ಭಾರತ್ ಗ್ಯಾಸ್ ಏಜೆನ್ಸಿ ಮುಂಭಾಗದಲ್ಲಿ ಭಾನುವಾರ ಗ್ಯಾಸ್ ಸಿಲಿಂಡರ್ ಪಡೆಯಲು ಜನರು ಸರದಿ ಸಾಲಿನಲ್ಲಿ ಬಿರು ಬಿಸಿಲಿನಲ್ಲಿ ಪರದಾಡುತ್ತಿದ್ದ ದೃಶ್ಯ ಕಂಡು ಬಂತು.</p>.<p>ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧ ಹಳ್ಳಿಗಳ ಜನರು ಗ್ಯಾಸ್ ಏಜೆನ್ಸಿ ಬಳಿ ನಸುಕಿನ ಜಾವದಿಂದಲೇ ಖಾಲಿ ಸಿಲಿಂಡರ್ ನೊಂದಿಗೆ ಸರತಿ ಸಾಲಿನಲ್ಲಿ ನಿಂತಿದ್ದರು.</p>.<p>ಆನ್ಲೈನ್ ಮೂಲಕ ಗ್ಯಾಸ್ ಸಿಲಿಂಡರ್ ಬುಕ್ ಮಾಡಿದರೂ ಸಕಾಲಕ್ಕೆ ಸಿಲಿಂಡರ್ ಸಿಗುತ್ತಿಲ್ಲ. ಎಂದು ಗ್ರಾಹಕರು ದೂರಿದರು.</p>.<p>ಗ್ಯಾಸ್ ಏಜೆನ್ಸಿಯಲ್ಲಿ ಗ್ರಾಹಕರ ಸಂಖ್ಯೆ ಹೆಚ್ಚಿದೆ. ಹಾಗಾಗಿ, ಇನ್ನೊಂದು ಕೇಂದ್ರ ಆರಂಭಿಸಬೇಕು ಎಂದು ಒತ್ತಾಯಿಸಿದರು.</p>.<p>ಕಾಳಸಂತೆಯಲ್ಲಿ ಸಿಲಿಂಡರ್ ಮಾರಾಟ ಆಗುವುದನ್ನು ತಾಲ್ಲೂಕು ಆಡಳಿತ ತಡೆಯಬೇಕು. ಸಕಾಲಕ್ಕೆ ಸಾರ್ವಜನಿಕರಿಗೆ ಗ್ಯಾಸ್ ಲಭಿಸುವಂತೆ ನೋಡಿಕೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-33-569217725</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಾಲ್ಕಿ</strong>: ಪಟ್ಟಣದ ಭಾರತ್ ಗ್ಯಾಸ್ ಏಜೆನ್ಸಿ ಮುಂಭಾಗದಲ್ಲಿ ಭಾನುವಾರ ಗ್ಯಾಸ್ ಸಿಲಿಂಡರ್ ಪಡೆಯಲು ಜನರು ಸರದಿ ಸಾಲಿನಲ್ಲಿ ಬಿರು ಬಿಸಿಲಿನಲ್ಲಿ ಪರದಾಡುತ್ತಿದ್ದ ದೃಶ್ಯ ಕಂಡು ಬಂತು.</p>.<p>ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧ ಹಳ್ಳಿಗಳ ಜನರು ಗ್ಯಾಸ್ ಏಜೆನ್ಸಿ ಬಳಿ ನಸುಕಿನ ಜಾವದಿಂದಲೇ ಖಾಲಿ ಸಿಲಿಂಡರ್ ನೊಂದಿಗೆ ಸರತಿ ಸಾಲಿನಲ್ಲಿ ನಿಂತಿದ್ದರು.</p>.<p>ಆನ್ಲೈನ್ ಮೂಲಕ ಗ್ಯಾಸ್ ಸಿಲಿಂಡರ್ ಬುಕ್ ಮಾಡಿದರೂ ಸಕಾಲಕ್ಕೆ ಸಿಲಿಂಡರ್ ಸಿಗುತ್ತಿಲ್ಲ. ಎಂದು ಗ್ರಾಹಕರು ದೂರಿದರು.</p>.<p>ಗ್ಯಾಸ್ ಏಜೆನ್ಸಿಯಲ್ಲಿ ಗ್ರಾಹಕರ ಸಂಖ್ಯೆ ಹೆಚ್ಚಿದೆ. ಹಾಗಾಗಿ, ಇನ್ನೊಂದು ಕೇಂದ್ರ ಆರಂಭಿಸಬೇಕು ಎಂದು ಒತ್ತಾಯಿಸಿದರು.</p>.<p>ಕಾಳಸಂತೆಯಲ್ಲಿ ಸಿಲಿಂಡರ್ ಮಾರಾಟ ಆಗುವುದನ್ನು ತಾಲ್ಲೂಕು ಆಡಳಿತ ತಡೆಯಬೇಕು. ಸಕಾಲಕ್ಕೆ ಸಾರ್ವಜನಿಕರಿಗೆ ಗ್ಯಾಸ್ ಲಭಿಸುವಂತೆ ನೋಡಿಕೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-33-569217725</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>