<p><strong>ಭಾಲ್ಕಿ:</strong> ತಾಲ್ಲೂಕಿನ ಹಾಲಹಳ್ಳಿ (ಕೆ) ಗ್ರಾಮದ ಬೀದರ್ ವಿಶ್ವವಿದ್ಯಾಲಯದ ಜ್ಞಾನ ಕಾರಂಜಿಯಲ್ಲಿ ಬೀದರ್ ವಿಶ್ವವಿದ್ಯಾಲಯದ ಅತಿಥಿ ಉಪನ್ಯಾಸಕರ ಸಂಘದ ಪದಾಧಿಕಾರಿಗಳು ಗುರುವಾರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಪ್ರಮುಖರು, ಆಧುನಿಕ ದುಬಾರಿ ದಿನಗಳಲ್ಲಿ ಕಡಿಮೆ ಸಂಬಳದಲ್ಲಿ ಜೀವನ ಸಾಗಿಸುವುದು ದುಸ್ತರವಾಗಿದೆ. ವರ್ಷದಲ್ಲಿ ಕೇವಲ 8 ತಿಂಗಳ ಮಾತ್ರ ವೇತನ ದೊರೆಯುತ್ತಿದೆ. ಉಳಿದ ದಿನಗಳನ್ನು ಸಾಗಿಸುವುದು ತೊಂದರೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ವಿಶ್ವವಿದ್ಯಾಲಯ ನಿಮಯದಂತೆ ಪ್ರತಿ ತಿಂಗಳು ₹50 ಸಾವಿರದಂತೆ ವರ್ಷದಲ್ಲಿ 11 ತಿಂಗಳಾದರೂ ವೇತನ ನೀಡಬೇಕು. ಈ ಮೂಲಕ ಆತಂಕದಲ್ಲಿರುವ ಅತಿಥಿ ಉಪನ್ಯಾಸಕರ ಜೀವನೋಪಾಯಕ್ಕೆ ಸೇವಾ ಭದ್ರತೆ ನೀಡಬೇಕು ಎಂದು ಒತ್ತಾಯಿಸಿದರು.</p>.<p>ಮುಂದಿನ ಶೈಕ್ಷಣಿಕ ಅವಧಿಗೆ ಅಥಿತಿ ಉಪನ್ಯಾಸಕರ ನೇಮಕದ ಸಂದರ್ಭದಲ್ಲಿ ಸಂದರ್ಶನ ನಡೆಸದೆ ಸದ್ಯ ಇರುವ ಉಪನ್ಯಾಸಕರನ್ನು ಮುಂದುವರೆಸಬೇಕು ಎಂದು ಆಗ್ರಹಿಸಿದರು. ಸಂಘದ ಅಧ್ಯಕ್ಷ ಶಾಂತಕುಮಾರ ಎಸ್. ಚಿದ್ರಿ, ಪ್ರಮುಖರಾದ ಅಂಬರೀಶ, ತುಕಾರಾಮ ಆರ್. ಮೇತ್ರೆ, ಅರುಣಕುಮಾರ ಕೆ. ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಾಲ್ಕಿ:</strong> ತಾಲ್ಲೂಕಿನ ಹಾಲಹಳ್ಳಿ (ಕೆ) ಗ್ರಾಮದ ಬೀದರ್ ವಿಶ್ವವಿದ್ಯಾಲಯದ ಜ್ಞಾನ ಕಾರಂಜಿಯಲ್ಲಿ ಬೀದರ್ ವಿಶ್ವವಿದ್ಯಾಲಯದ ಅತಿಥಿ ಉಪನ್ಯಾಸಕರ ಸಂಘದ ಪದಾಧಿಕಾರಿಗಳು ಗುರುವಾರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಪ್ರಮುಖರು, ಆಧುನಿಕ ದುಬಾರಿ ದಿನಗಳಲ್ಲಿ ಕಡಿಮೆ ಸಂಬಳದಲ್ಲಿ ಜೀವನ ಸಾಗಿಸುವುದು ದುಸ್ತರವಾಗಿದೆ. ವರ್ಷದಲ್ಲಿ ಕೇವಲ 8 ತಿಂಗಳ ಮಾತ್ರ ವೇತನ ದೊರೆಯುತ್ತಿದೆ. ಉಳಿದ ದಿನಗಳನ್ನು ಸಾಗಿಸುವುದು ತೊಂದರೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ವಿಶ್ವವಿದ್ಯಾಲಯ ನಿಮಯದಂತೆ ಪ್ರತಿ ತಿಂಗಳು ₹50 ಸಾವಿರದಂತೆ ವರ್ಷದಲ್ಲಿ 11 ತಿಂಗಳಾದರೂ ವೇತನ ನೀಡಬೇಕು. ಈ ಮೂಲಕ ಆತಂಕದಲ್ಲಿರುವ ಅತಿಥಿ ಉಪನ್ಯಾಸಕರ ಜೀವನೋಪಾಯಕ್ಕೆ ಸೇವಾ ಭದ್ರತೆ ನೀಡಬೇಕು ಎಂದು ಒತ್ತಾಯಿಸಿದರು.</p>.<p>ಮುಂದಿನ ಶೈಕ್ಷಣಿಕ ಅವಧಿಗೆ ಅಥಿತಿ ಉಪನ್ಯಾಸಕರ ನೇಮಕದ ಸಂದರ್ಭದಲ್ಲಿ ಸಂದರ್ಶನ ನಡೆಸದೆ ಸದ್ಯ ಇರುವ ಉಪನ್ಯಾಸಕರನ್ನು ಮುಂದುವರೆಸಬೇಕು ಎಂದು ಆಗ್ರಹಿಸಿದರು. ಸಂಘದ ಅಧ್ಯಕ್ಷ ಶಾಂತಕುಮಾರ ಎಸ್. ಚಿದ್ರಿ, ಪ್ರಮುಖರಾದ ಅಂಬರೀಶ, ತುಕಾರಾಮ ಆರ್. ಮೇತ್ರೆ, ಅರುಣಕುಮಾರ ಕೆ. ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>