<p><strong>ಭಾಲ್ಕಿ:</strong> ಪಟ್ಟಣದ ಉಪನ್ಯಾಸಕರ ಬಡಾವಣೆಯಲ್ಲಿರುವ ಗುರು ಕಾಲೊನಿಗೆ ಮೂಲಸೌಕರ್ಯ ಒದಗಿಸಲು ಪ್ರಮುಖರಾದ ಆಕಾಶ ಕಲ್ಯಾಣೆ ಆಗ್ರಹಿಸಿದ್ದಾರೆ.</p>.<p>ಈ ಸಂಬಂಧ ಪುರಸಭೆ ಮುಖ್ಯಾಧಿಕಾರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.</p>.<p>ಗುರು ಕಾಲೊನಿಯಲ್ಲಿ ವಿದ್ಯುತ್ ಕಂಬ ಅಳವಡಿಸಿ ಬೆಳಕಿನ ವ್ಯವಸ್ಥೆ ಮಾಡಬೇಕು. ಈ ಓಣಿಗಳಲ್ಲಿ ಬೀದಿ ವಿದ್ಯುತ್ ದೀಪ ಇಲ್ಲದ ಕಾರಣ ರಾತ್ರಿ ಸಾರ್ವಜನಿಕರು ತಿರುಗಾಡಲು ಭಯಭೀತರಾಗಿದ್ದಾರೆ. ಹಾವು, ಚೇಳುಗಳ ಹಾವಳಿ ಹೆಚ್ಚಾಗಿದೆ. ಅಲ್ಲದೆ ಕಳ್ಳಕಾಕರ ಭೀತಿ ಹೆಚ್ಚಾಗಿರುವುದರಿಂದ ಸಾರ್ವಜನಿಕರು ಆತಂಕದಲ್ಲಿ ಕಾಲ ಕಳೆಯುವಂತಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.</p>.<p>ಕೆಲವು ಕಡೆ ಒಳಚರಂಡಿ ನಿರ್ಮಿಸಿದ್ದಾರೆ. ಚರಂಡಿ ಪಕ್ಕದಲ್ಲಿ ಸುಮಾರು 5-6 ಅಡಿ ಆಳವಾದ ತಗ್ಗಿರುವುರಿಂದ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ಈ ಕುರಿತು ಪುರಸಭೆ ಮುಖ್ಯಾಧಿಕಾರಿಗೆ ಹಲವು ಬಾರಿ ಮನವಿ ಮಾಡಿದರೂ ಸ್ಪಂದಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಈಗಲಾದರೂ ಸಂಬಂಧಪಟ್ಟವರು ಇತ್ತ ಕಡೆ ಮುಖ ಮಾಡಿ ಅಗತ್ಯ ಸೌಲಭ್ಯ ಒದಗಿಸಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-33-1317534826</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಾಲ್ಕಿ:</strong> ಪಟ್ಟಣದ ಉಪನ್ಯಾಸಕರ ಬಡಾವಣೆಯಲ್ಲಿರುವ ಗುರು ಕಾಲೊನಿಗೆ ಮೂಲಸೌಕರ್ಯ ಒದಗಿಸಲು ಪ್ರಮುಖರಾದ ಆಕಾಶ ಕಲ್ಯಾಣೆ ಆಗ್ರಹಿಸಿದ್ದಾರೆ.</p>.<p>ಈ ಸಂಬಂಧ ಪುರಸಭೆ ಮುಖ್ಯಾಧಿಕಾರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.</p>.<p>ಗುರು ಕಾಲೊನಿಯಲ್ಲಿ ವಿದ್ಯುತ್ ಕಂಬ ಅಳವಡಿಸಿ ಬೆಳಕಿನ ವ್ಯವಸ್ಥೆ ಮಾಡಬೇಕು. ಈ ಓಣಿಗಳಲ್ಲಿ ಬೀದಿ ವಿದ್ಯುತ್ ದೀಪ ಇಲ್ಲದ ಕಾರಣ ರಾತ್ರಿ ಸಾರ್ವಜನಿಕರು ತಿರುಗಾಡಲು ಭಯಭೀತರಾಗಿದ್ದಾರೆ. ಹಾವು, ಚೇಳುಗಳ ಹಾವಳಿ ಹೆಚ್ಚಾಗಿದೆ. ಅಲ್ಲದೆ ಕಳ್ಳಕಾಕರ ಭೀತಿ ಹೆಚ್ಚಾಗಿರುವುದರಿಂದ ಸಾರ್ವಜನಿಕರು ಆತಂಕದಲ್ಲಿ ಕಾಲ ಕಳೆಯುವಂತಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.</p>.<p>ಕೆಲವು ಕಡೆ ಒಳಚರಂಡಿ ನಿರ್ಮಿಸಿದ್ದಾರೆ. ಚರಂಡಿ ಪಕ್ಕದಲ್ಲಿ ಸುಮಾರು 5-6 ಅಡಿ ಆಳವಾದ ತಗ್ಗಿರುವುರಿಂದ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ಈ ಕುರಿತು ಪುರಸಭೆ ಮುಖ್ಯಾಧಿಕಾರಿಗೆ ಹಲವು ಬಾರಿ ಮನವಿ ಮಾಡಿದರೂ ಸ್ಪಂದಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಈಗಲಾದರೂ ಸಂಬಂಧಪಟ್ಟವರು ಇತ್ತ ಕಡೆ ಮುಖ ಮಾಡಿ ಅಗತ್ಯ ಸೌಲಭ್ಯ ಒದಗಿಸಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-33-1317534826</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>