<p>ಹುಲಸೂರ: ಸಮೀಪದ ಭಾಲ್ಕಿ ತಾಲ್ಲೂಕಿನ ವಾಂಝರಖೇಡ್, ಹಲಸಿತುಗಾಂವ್ ಗ್ರಾಮಗಳ ಮಂಜರಾ ನದಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಮರಳು ತೆಗೆಯಲಾಗುತ್ತಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಪರಿಶೀಲನೆ ವೇಳೆ ಅಕ್ರಮ ಮರಳು ಗಣಿಗಾರಿಕೆಗೆ ಬಳಸಲಾಗುತ್ತಿದ್ದ ಸುಮಾರು 10 ಕಬ್ಬಿಣದ ತೆಪ್ಪಗಳು ಹಾಗೂ ಒಂದು ಕಬ್ಬಿಣದ ದೋಣಿ ಪತ್ತೆಯಾಯಿತು. ತಕ್ಷಣ ಕ್ರಮ ಕೈಗೊಂಡ ಅಧಿಕಾರಿಗಳು ಗ್ಯಾಸ್ ಕಟರ್ ಸಿಬ್ಬಂದಿಯನ್ನು ಸ್ಥಳಕ್ಕೆ ಕರೆಸಿ ಕಾರ್ಯಾಚರಣೆ ಆರಂಭಿಸಿದರು.</p>.<p>ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳಾದ ವಿಶ್ವನಾಥ್, ಧನರಾಜ್ (ಭೂವಿಜ್ಞಾನಿ), ಮೆಹಕರ ಪೊಲೀಸ್ ಠಾಣೆಯ ಪಿಎಸ್ಐ ಸುದರ್ಶನರೆಡ್ಡಿ ಹಾಗೂ ಎಎಸ್ಐ ಶರಣಪ್ಪ ಹಾಗೂ ಇತರ ಸಿಬ್ಬಂದಿಯ ಸಮ್ಮುಖದಲ್ಲಿ ಕಾರ್ಯಾಚರಣೆ ನಡೆಯಿತು.</p>.<p>ಅಕ್ರಮ ಮರಳು ಗಣಿಗಾರಿಕೆಗೆ ಬಳಸಲಾಗುತ್ತಿದ್ದ ತೆಪ್ಪಗಳಿಗೆ ಗ್ಯಾಸ್ ಕಟರ್ ಮೂಲಕ ರಂಧ್ರಗಳನ್ನು ಮಾಡಿ ನಿಷ್ಕ್ರಿಯಗೊಳಿಸಲಾಯಿತು. ಇದರಿಂದ ಮಂಜರಾ ನದಿ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅನಧಿಕೃತ ಮರಳು ಗಣಿಗಾರಿಕೆಗೆ ತಾತ್ಕಾಲಿಕವಾಗಿ ತಡೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ವಾಂಝರಖೇಡ್ ಹಾಗೂ ಹಲಸಿತುಗಾಂವ್ ಗ್ರಾಮಗಳ ವ್ಯಾಪ್ತಿಯಲ್ಲಿ ಮುಂದಿನ ದಿನಗಳಲ್ಲಿ ಇಂತಹ ಅಕ್ರಮ ಚಟುವಟಿಕೆಗಳು ಮರುಕಳಿಸದಂತೆ ಸಂಬಂಧಿತ ಇಲಾಖೆಗಳು ಕಟ್ಟುನಿಟ್ಟಿನ ನಿಗಾವಹಿಸಲಿವೆ ಎಂದು ತಿಳಿಸಿದರು.</p>.<p>ವಾಂಝರಖೇಡ್ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಗಲಾ ನವನಾಥ ಬೋಲಸುರೆ ‘ಪ್ರಜಾವಾಣಿ’ಗೆ ಮಾತನಾಡಿ, ‘ಅಕ್ರಮ ಮರಳು ಸಾಗಣೆಗೆ ಕೆಲ ಅಧಿಕಾರಿಗಳ ಸಾಥ್ ದೊರೆಯುತ್ತಿರುವ ಕಾರಣ ಈ ಚಟುವಟಿಕೆ ರಾಜಾರೋಷವಾಗಿ ನಡೆಯುತ್ತಿದೆ. ಪ್ರತಿ ಬಾರಿ ನಾಲ್ಕೈದು ದೋಣಿಗಳನ್ನು ವಶಕ್ಕೆ ಪಡೆದು ಕ್ರಮ ಕೈಗೊಂಡರೂ ಕೆಲವೇ ದಿನಗಳಲ್ಲಿ ಮತ್ತೆ ಅಕ್ರಮ ಚಟುವಟಿಕೆ ಆರಂಭವಾಗುತ್ತಿದೆ. ಹೀಗಾಗಿ ಈ ಪ್ರಕರಣವನ್ನು ಸಂಬಂಧಿತ ಇಲಾಖೆಗಳು ಸೂಕ್ಷ್ಮವಾಗಿ ಹಾಗೂ ಗಂಭೀರವಾಗಿ ಪರಿಗಣಿಸಿ ಶಾಶ್ವತ ತಡೆಗೆ ಕ್ರಮ ಕೈಗೊಳ್ಳಬೇಕು. ಯಾವುದೇ ಅಧಿಕಾರಿಗಳು ಅಕ್ರಮ ಚಟುವಟಿಕೆಗಳಿಗೆ ಬೆಂಬಲ ನೀಡಬಾರದು’ ಎಂದು ಆಗ್ರಹಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260504-33-287637716</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಲಸೂರ: ಸಮೀಪದ ಭಾಲ್ಕಿ ತಾಲ್ಲೂಕಿನ ವಾಂಝರಖೇಡ್, ಹಲಸಿತುಗಾಂವ್ ಗ್ರಾಮಗಳ ಮಂಜರಾ ನದಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಮರಳು ತೆಗೆಯಲಾಗುತ್ತಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಪರಿಶೀಲನೆ ವೇಳೆ ಅಕ್ರಮ ಮರಳು ಗಣಿಗಾರಿಕೆಗೆ ಬಳಸಲಾಗುತ್ತಿದ್ದ ಸುಮಾರು 10 ಕಬ್ಬಿಣದ ತೆಪ್ಪಗಳು ಹಾಗೂ ಒಂದು ಕಬ್ಬಿಣದ ದೋಣಿ ಪತ್ತೆಯಾಯಿತು. ತಕ್ಷಣ ಕ್ರಮ ಕೈಗೊಂಡ ಅಧಿಕಾರಿಗಳು ಗ್ಯಾಸ್ ಕಟರ್ ಸಿಬ್ಬಂದಿಯನ್ನು ಸ್ಥಳಕ್ಕೆ ಕರೆಸಿ ಕಾರ್ಯಾಚರಣೆ ಆರಂಭಿಸಿದರು.</p>.<p>ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳಾದ ವಿಶ್ವನಾಥ್, ಧನರಾಜ್ (ಭೂವಿಜ್ಞಾನಿ), ಮೆಹಕರ ಪೊಲೀಸ್ ಠಾಣೆಯ ಪಿಎಸ್ಐ ಸುದರ್ಶನರೆಡ್ಡಿ ಹಾಗೂ ಎಎಸ್ಐ ಶರಣಪ್ಪ ಹಾಗೂ ಇತರ ಸಿಬ್ಬಂದಿಯ ಸಮ್ಮುಖದಲ್ಲಿ ಕಾರ್ಯಾಚರಣೆ ನಡೆಯಿತು.</p>.<p>ಅಕ್ರಮ ಮರಳು ಗಣಿಗಾರಿಕೆಗೆ ಬಳಸಲಾಗುತ್ತಿದ್ದ ತೆಪ್ಪಗಳಿಗೆ ಗ್ಯಾಸ್ ಕಟರ್ ಮೂಲಕ ರಂಧ್ರಗಳನ್ನು ಮಾಡಿ ನಿಷ್ಕ್ರಿಯಗೊಳಿಸಲಾಯಿತು. ಇದರಿಂದ ಮಂಜರಾ ನದಿ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅನಧಿಕೃತ ಮರಳು ಗಣಿಗಾರಿಕೆಗೆ ತಾತ್ಕಾಲಿಕವಾಗಿ ತಡೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ವಾಂಝರಖೇಡ್ ಹಾಗೂ ಹಲಸಿತುಗಾಂವ್ ಗ್ರಾಮಗಳ ವ್ಯಾಪ್ತಿಯಲ್ಲಿ ಮುಂದಿನ ದಿನಗಳಲ್ಲಿ ಇಂತಹ ಅಕ್ರಮ ಚಟುವಟಿಕೆಗಳು ಮರುಕಳಿಸದಂತೆ ಸಂಬಂಧಿತ ಇಲಾಖೆಗಳು ಕಟ್ಟುನಿಟ್ಟಿನ ನಿಗಾವಹಿಸಲಿವೆ ಎಂದು ತಿಳಿಸಿದರು.</p>.<p>ವಾಂಝರಖೇಡ್ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಗಲಾ ನವನಾಥ ಬೋಲಸುರೆ ‘ಪ್ರಜಾವಾಣಿ’ಗೆ ಮಾತನಾಡಿ, ‘ಅಕ್ರಮ ಮರಳು ಸಾಗಣೆಗೆ ಕೆಲ ಅಧಿಕಾರಿಗಳ ಸಾಥ್ ದೊರೆಯುತ್ತಿರುವ ಕಾರಣ ಈ ಚಟುವಟಿಕೆ ರಾಜಾರೋಷವಾಗಿ ನಡೆಯುತ್ತಿದೆ. ಪ್ರತಿ ಬಾರಿ ನಾಲ್ಕೈದು ದೋಣಿಗಳನ್ನು ವಶಕ್ಕೆ ಪಡೆದು ಕ್ರಮ ಕೈಗೊಂಡರೂ ಕೆಲವೇ ದಿನಗಳಲ್ಲಿ ಮತ್ತೆ ಅಕ್ರಮ ಚಟುವಟಿಕೆ ಆರಂಭವಾಗುತ್ತಿದೆ. ಹೀಗಾಗಿ ಈ ಪ್ರಕರಣವನ್ನು ಸಂಬಂಧಿತ ಇಲಾಖೆಗಳು ಸೂಕ್ಷ್ಮವಾಗಿ ಹಾಗೂ ಗಂಭೀರವಾಗಿ ಪರಿಗಣಿಸಿ ಶಾಶ್ವತ ತಡೆಗೆ ಕ್ರಮ ಕೈಗೊಳ್ಳಬೇಕು. ಯಾವುದೇ ಅಧಿಕಾರಿಗಳು ಅಕ್ರಮ ಚಟುವಟಿಕೆಗಳಿಗೆ ಬೆಂಬಲ ನೀಡಬಾರದು’ ಎಂದು ಆಗ್ರಹಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260504-33-287637716</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>