<p>ಹುಲಸೂರ: ವಿದ್ಯುತ್ ತಂತಿಗಳ ಶಾರ್ಟ್ ಸರ್ಕಿಟ್ನಿಂದ ಜಾನುವಾರುಗಳಿಗೆ ಖರೀದಿಸಿದ್ದ ಮೇವು ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ಭಾಲ್ಕಿ ತಾಲ್ಲೂಕಿನ ಕೊಂಗಳಿ ಗ್ರಾಮದಲ್ಲಿ ನಡೆದಿದೆ.</p>.<p>ಗ್ರಾಮದ ರೈತ ಬಾಲಾಜಿ ಮುರುಳಿದರ ಡಾವರಗಾವೇ ಅವರು ಜಾನುವಾರುಗಳಿಗಾಗಿ ಒಟ್ಟು ₹12 ಸಾವಿರ ನೀಡಿ ಬೇರೆ ಗ್ರಾಮದಲ್ಲಿ ಮೇವು ಖರೀದಿಸಿದ್ದರು. ಮೇವು ಮನೆಗೆ ಸಾಗಿಸುತ್ತಿದ್ದ ವೇಳೆ ಮೇಲಿಂದ ಹಾದುಹೋಗಿದ್ದ ವಿದ್ಯುತ್ ತಂತಿಗಳಲ್ಲಿ ಉಂಟಾದ ಶಾರ್ಟ್ ಸರ್ಕಿಟ್ನಿಂದ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಕ್ಷಣಾರ್ಧದಲ್ಲೇ ಸಂಪೂರ್ಣ ಮೇವು ಸುಟ್ಟು ಕರಕಲಾಗಿದೆ.</p>.<p>ಸುದ್ದಿ ತಿಳಿದು ಸ್ಥಳಕ್ಕೆ ಭಾಲ್ಕಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಕೈಗೊಂಡರು. ಅಷ್ಟರಲ್ಲೇ ಮೇವು ಸಂಪೂರ್ಣ ಸುಟ್ಟು ಹೋಗಿತ್ತು ಎಂದು ತಿಳಿದುಬಂದಿದೆ.</p>.<p>‘ದನಗಳಿಗೆ ಕಷ್ಟಪಟ್ಟು ಹಣ ಸೇರಿಸಿ ಮೇವು ತಂದಿದ್ದೆ. ಒಂದು ಕ್ಷಣದಲ್ಲಿ ಎಲ್ಲವೂ ಸುಟ್ಟುಹೋಯಿತು. ಈಗ ಜಾನುವಾರುಗಳ ಚಿಂತೆ ಕಾಡುತ್ತಿದೆ. ಸರ್ಕಾರ ಕೂಡಲೇ ನೆರವಿಗೆ ಬರಬೇಕು’ ಎಂದು ರೈತ ಬಾಲಾಜಿ ಅಳಲು ತೋಡಿಕೊಂಡರು.</p>.<p>ಘಟನೆ ಕುರಿತು ಗ್ರಾಮ ಲೆಕ್ಕಾಧಿಕಾರಿ ಬಾಬುರಾವ್ ಪ್ರತಿಕ್ರಿಯಿಸಿ, ‘ರೈತನಿಗೆ ಸಂಭವಿಸಿದ ನಷ್ಟದ ಪ್ರಾಥಮಿಕ ವರದಿಯನ್ನು ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ, ಪರಿಹಾರ ದೊರಕಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260425-33-929985005</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಲಸೂರ: ವಿದ್ಯುತ್ ತಂತಿಗಳ ಶಾರ್ಟ್ ಸರ್ಕಿಟ್ನಿಂದ ಜಾನುವಾರುಗಳಿಗೆ ಖರೀದಿಸಿದ್ದ ಮೇವು ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ಭಾಲ್ಕಿ ತಾಲ್ಲೂಕಿನ ಕೊಂಗಳಿ ಗ್ರಾಮದಲ್ಲಿ ನಡೆದಿದೆ.</p>.<p>ಗ್ರಾಮದ ರೈತ ಬಾಲಾಜಿ ಮುರುಳಿದರ ಡಾವರಗಾವೇ ಅವರು ಜಾನುವಾರುಗಳಿಗಾಗಿ ಒಟ್ಟು ₹12 ಸಾವಿರ ನೀಡಿ ಬೇರೆ ಗ್ರಾಮದಲ್ಲಿ ಮೇವು ಖರೀದಿಸಿದ್ದರು. ಮೇವು ಮನೆಗೆ ಸಾಗಿಸುತ್ತಿದ್ದ ವೇಳೆ ಮೇಲಿಂದ ಹಾದುಹೋಗಿದ್ದ ವಿದ್ಯುತ್ ತಂತಿಗಳಲ್ಲಿ ಉಂಟಾದ ಶಾರ್ಟ್ ಸರ್ಕಿಟ್ನಿಂದ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಕ್ಷಣಾರ್ಧದಲ್ಲೇ ಸಂಪೂರ್ಣ ಮೇವು ಸುಟ್ಟು ಕರಕಲಾಗಿದೆ.</p>.<p>ಸುದ್ದಿ ತಿಳಿದು ಸ್ಥಳಕ್ಕೆ ಭಾಲ್ಕಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಕೈಗೊಂಡರು. ಅಷ್ಟರಲ್ಲೇ ಮೇವು ಸಂಪೂರ್ಣ ಸುಟ್ಟು ಹೋಗಿತ್ತು ಎಂದು ತಿಳಿದುಬಂದಿದೆ.</p>.<p>‘ದನಗಳಿಗೆ ಕಷ್ಟಪಟ್ಟು ಹಣ ಸೇರಿಸಿ ಮೇವು ತಂದಿದ್ದೆ. ಒಂದು ಕ್ಷಣದಲ್ಲಿ ಎಲ್ಲವೂ ಸುಟ್ಟುಹೋಯಿತು. ಈಗ ಜಾನುವಾರುಗಳ ಚಿಂತೆ ಕಾಡುತ್ತಿದೆ. ಸರ್ಕಾರ ಕೂಡಲೇ ನೆರವಿಗೆ ಬರಬೇಕು’ ಎಂದು ರೈತ ಬಾಲಾಜಿ ಅಳಲು ತೋಡಿಕೊಂಡರು.</p>.<p>ಘಟನೆ ಕುರಿತು ಗ್ರಾಮ ಲೆಕ್ಕಾಧಿಕಾರಿ ಬಾಬುರಾವ್ ಪ್ರತಿಕ್ರಿಯಿಸಿ, ‘ರೈತನಿಗೆ ಸಂಭವಿಸಿದ ನಷ್ಟದ ಪ್ರಾಥಮಿಕ ವರದಿಯನ್ನು ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ, ಪರಿಹಾರ ದೊರಕಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260425-33-929985005</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>