<p><strong>ಭಾಲ್ಕಿ</strong>: ಭೂ ಮಾಪಕರ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ತಕ್ಷಣ ಈಡೇರಿಸಬೇಕು ಎಂದು ಜಿಲ್ಲಾ ಯುವಕ್ರಾಂತಿ ಸಂಘಟನೆ ಅಧ್ಯಕ್ಷ ಸಂಗಮೇಶ ಭೂರೆ ಒತ್ತಾಯಿಸಿದ್ದಾರೆ.</p>.<p>ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿರುವ ಅವರು, ‘ವಿವಿಧ ಬೇಡಿಕೆ ಈಡೇರಿಕೆಗೆ ಕಳೆದ ಹಲವು ತಿಂಗಳಿನಿಂದ ರಾಜ್ಯದಾದ್ಯಂತ ಮುಷ್ಕರ ನಡೆಸುತ್ತಿದ್ದಾರೆ. ಆದರೆ, ಸರ್ಕಾರ ತಟಸ್ಥವಾಗಿ ಉಳಿದಿರುವುದು ತೀವ್ರ ಬೇಸರ ತರಿಸಿದೆ’ ಎಂದಿದ್ದಾರೆ.</p>.<p>ಮುಷ್ಕರದಿಂದ ಗ್ರಾಮೀಣ ಭಾಗದಲ್ಲಿ ಭೂ ಮಾಪನ ಕಾರ್ಯ, ಪಹಣಿ ತಿದ್ದುಪಡಿ ಸೇರಿ ವಿವಿಧ ಕೆಲಸಗಳು ಸಂಪೂರ್ಣವಾಗಿ ನಿಂತು ಹೋಗಿವೆ. ಕೂಡಲೇ ಭೂಮಾಪಕರ ಬೇಡಿಕೆಗೆ ಸ್ಪಂದಿಸಿ, ಕಾರ್ಯಗಳು ಸುಗಮವಾಗಿ ನಡೆಯುವಂತೆ ಮಾಡಬೇಕು’ ಎಂದು ಒತ್ತಾಯಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-33-32308337</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಾಲ್ಕಿ</strong>: ಭೂ ಮಾಪಕರ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ತಕ್ಷಣ ಈಡೇರಿಸಬೇಕು ಎಂದು ಜಿಲ್ಲಾ ಯುವಕ್ರಾಂತಿ ಸಂಘಟನೆ ಅಧ್ಯಕ್ಷ ಸಂಗಮೇಶ ಭೂರೆ ಒತ್ತಾಯಿಸಿದ್ದಾರೆ.</p>.<p>ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿರುವ ಅವರು, ‘ವಿವಿಧ ಬೇಡಿಕೆ ಈಡೇರಿಕೆಗೆ ಕಳೆದ ಹಲವು ತಿಂಗಳಿನಿಂದ ರಾಜ್ಯದಾದ್ಯಂತ ಮುಷ್ಕರ ನಡೆಸುತ್ತಿದ್ದಾರೆ. ಆದರೆ, ಸರ್ಕಾರ ತಟಸ್ಥವಾಗಿ ಉಳಿದಿರುವುದು ತೀವ್ರ ಬೇಸರ ತರಿಸಿದೆ’ ಎಂದಿದ್ದಾರೆ.</p>.<p>ಮುಷ್ಕರದಿಂದ ಗ್ರಾಮೀಣ ಭಾಗದಲ್ಲಿ ಭೂ ಮಾಪನ ಕಾರ್ಯ, ಪಹಣಿ ತಿದ್ದುಪಡಿ ಸೇರಿ ವಿವಿಧ ಕೆಲಸಗಳು ಸಂಪೂರ್ಣವಾಗಿ ನಿಂತು ಹೋಗಿವೆ. ಕೂಡಲೇ ಭೂಮಾಪಕರ ಬೇಡಿಕೆಗೆ ಸ್ಪಂದಿಸಿ, ಕಾರ್ಯಗಳು ಸುಗಮವಾಗಿ ನಡೆಯುವಂತೆ ಮಾಡಬೇಕು’ ಎಂದು ಒತ್ತಾಯಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-33-32308337</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>