<p>ಭಾಲ್ಕಿ: ‘ಧರ್ಮದ ಪಾಲನೆಯಿಂದ ಸಮಾಜದಲ್ಲಿ ಶಾಂತಿ, ಸಹೋದರತೆ, ನೆಮ್ಮದಿ ನೆಲೆಸುತ್ತದೆ’ ಎಂದು ಬಿಜೆಪಿ ಮುಖಂಡರೂ ಆದ ಮಾಜಿ ಶಾಸಕ ಪ್ರಕಾಶ ಖಂಡ್ರೆ ಹೇಳಿದರು.</p>.<p>ತಾಲ್ಲೂಕಿನ ಡೋಣಗಾಪುರ ಗ್ರಾಮದ ಡೋಣೇಶ್ವರ ದೇವಸ್ಥಾನದಲ್ಲಿ ನಡೆದ ಡೋಣೇಶ್ವರರ ಮಹಾಪೂಜಾ ಮಹೋತ್ಸವ ಮತ್ತು ವಿಶ್ವಶಾಂತಿಗಾಗಿ 44ನೇ ಜಪಯಜ್ಞ ಹಾಗೂ ಪ್ರಯೋಗಾತ್ಮಕ ಧರ್ಮಶಿಕ್ಷಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>‘ಧರ್ಮದ ನಡೆ ಯಾವಾಗಲೂ ಪ್ರಗತಿಯ ಕಡೆ ಸಾಗುತ್ತದೆ. ಈ ದಿಸೆಯಲ್ಲಿ ಡೋಣಗಾಪುರದ ರಾಜೇಶ್ವರ ಶಿವಾಚಾರ್ಯರು ಹಮ್ಮಿಕೊಳ್ಳುವ ಧರ್ಮಾಧರಿತ ಕಾರ್ಯಗಳು ಪೂರಕವಾಗಿವೆ’ ಎಂದು ತಿಳಿಸಿದರು.</p>.<p>‘ಯುವಶಕ್ತಿ ಹಣ ಮತ್ತು ಪ್ರೇಮದ ಮೋಹಕ್ಕಾಗಿ ದಾರಿ ತಪ್ಪುತ್ತಿದೆ. ಸಮಾಜವನ್ನು ಸರಿ ದಾರಿಗೆ ತರುವಲ್ಲಿ ಮಠಾಧೀಶರ ಪಾತ್ರ ಶ್ರೇಷ್ಠವಾಗಿದೆ’ ಎಂದು ಮಾರ್ಮಿಕವಾಗಿ ಹೇಳಿದರು.</p>.<p>ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಹೇಮಾವತಿ ಪಾಟೀಲ ಧರ್ಮದ ಆಚರಣೆ ಕುರಿತು ಮಾತನಾಡಿದರು.</p>.<p>ರಾಜೇಶ್ವರ ಶಿವಾಚಾರ್ಯರು, ಹಾವಗಿಲಿಂಗೇಶ್ವರ ಶಿವಾಚಾರ್ಯರು ಮಾತನಾಡಿದರು. ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ, ಪ್ರಮುಖರಾದ ಸುಭಾಷರಾವ್ ಬಿರಾದಾರ, ಬಾಬುರಾವ್ ಧೂಪೆ, ರಾಜಶೇಖರ ಚಿದ್ರಿ, ಶಾಂತವೀರ ಪಾಟೀಲ ಸೇರಿದಂತೆ ಅನೇಕರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260402-33-1221405801</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಭಾಲ್ಕಿ: ‘ಧರ್ಮದ ಪಾಲನೆಯಿಂದ ಸಮಾಜದಲ್ಲಿ ಶಾಂತಿ, ಸಹೋದರತೆ, ನೆಮ್ಮದಿ ನೆಲೆಸುತ್ತದೆ’ ಎಂದು ಬಿಜೆಪಿ ಮುಖಂಡರೂ ಆದ ಮಾಜಿ ಶಾಸಕ ಪ್ರಕಾಶ ಖಂಡ್ರೆ ಹೇಳಿದರು.</p>.<p>ತಾಲ್ಲೂಕಿನ ಡೋಣಗಾಪುರ ಗ್ರಾಮದ ಡೋಣೇಶ್ವರ ದೇವಸ್ಥಾನದಲ್ಲಿ ನಡೆದ ಡೋಣೇಶ್ವರರ ಮಹಾಪೂಜಾ ಮಹೋತ್ಸವ ಮತ್ತು ವಿಶ್ವಶಾಂತಿಗಾಗಿ 44ನೇ ಜಪಯಜ್ಞ ಹಾಗೂ ಪ್ರಯೋಗಾತ್ಮಕ ಧರ್ಮಶಿಕ್ಷಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>‘ಧರ್ಮದ ನಡೆ ಯಾವಾಗಲೂ ಪ್ರಗತಿಯ ಕಡೆ ಸಾಗುತ್ತದೆ. ಈ ದಿಸೆಯಲ್ಲಿ ಡೋಣಗಾಪುರದ ರಾಜೇಶ್ವರ ಶಿವಾಚಾರ್ಯರು ಹಮ್ಮಿಕೊಳ್ಳುವ ಧರ್ಮಾಧರಿತ ಕಾರ್ಯಗಳು ಪೂರಕವಾಗಿವೆ’ ಎಂದು ತಿಳಿಸಿದರು.</p>.<p>‘ಯುವಶಕ್ತಿ ಹಣ ಮತ್ತು ಪ್ರೇಮದ ಮೋಹಕ್ಕಾಗಿ ದಾರಿ ತಪ್ಪುತ್ತಿದೆ. ಸಮಾಜವನ್ನು ಸರಿ ದಾರಿಗೆ ತರುವಲ್ಲಿ ಮಠಾಧೀಶರ ಪಾತ್ರ ಶ್ರೇಷ್ಠವಾಗಿದೆ’ ಎಂದು ಮಾರ್ಮಿಕವಾಗಿ ಹೇಳಿದರು.</p>.<p>ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಹೇಮಾವತಿ ಪಾಟೀಲ ಧರ್ಮದ ಆಚರಣೆ ಕುರಿತು ಮಾತನಾಡಿದರು.</p>.<p>ರಾಜೇಶ್ವರ ಶಿವಾಚಾರ್ಯರು, ಹಾವಗಿಲಿಂಗೇಶ್ವರ ಶಿವಾಚಾರ್ಯರು ಮಾತನಾಡಿದರು. ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ, ಪ್ರಮುಖರಾದ ಸುಭಾಷರಾವ್ ಬಿರಾದಾರ, ಬಾಬುರಾವ್ ಧೂಪೆ, ರಾಜಶೇಖರ ಚಿದ್ರಿ, ಶಾಂತವೀರ ಪಾಟೀಲ ಸೇರಿದಂತೆ ಅನೇಕರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260402-33-1221405801</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>