<p><strong>ಭಾಲ್ಕಿ</strong>: ತಾಲ್ಲೂಕಿನ ಸಿದ್ದೇಶ್ವರ ಗ್ರಾಮದಿಂದ ತಳವಾಡ (ಕೆ) ಸಂಪರ್ಕಿಸುವ ಒಳ ರಸ್ತೆ ಮಣ್ಣಿನಿಂದ ಕೂಡಿರುವ ಕಚ್ಚಾ ರಸ್ತೆಯಾಗಿದ್ದು ರೈತರು, ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.</p><p>ಮಣ್ಣಿನಿಂದ ಕೂಡಿರುವ ಸುಮಾರು ಎರಡೂವರೆ ಕಿಲೋ ಮೀಟರ್ ರಸ್ತೆಯ ಅಕ್ಕಪಕ್ಕ ಜಾಲಿಗಿಡಗಳು ಬೆಳೆದಿದ್ದು ದ್ವಿಚಕ್ರ ವಾಹನ ಚಾಲನೆಗೂ ತೀವ್ರ ಸಮಸ್ಯೆಯಾಗುತ್ತಿದೆ. ಕೆಲ ಕಡೆಗಳಲ್ಲಿ ರಸ್ತೆ ಅಕ್ಕಪಕ್ಕದ ಮಣ್ಣು ಕುಸಿದಿದ್ದು, ಕಂದಕ ನಿರ್ಮಾಣಗೊಂಡಿವೆ. ಇದರಿಂದ ವಾಹನಗಳ ಓಡಾಟ ಕಷ್ಟ ಸಾಧ್ಯ ಎಂಬತ್ತಾಗಿದೆ. ಮಳೆಗಾಲದಲ್ಲಂತೂ ಈ ಮಾರ್ಗದಿಂದ ನಡೆದುಕೊಂಡು ಹೋಗುವುದು ಸಹ ದುಸ್ತರದ ಮಾತಾಗಿದೆ ಎನ್ನುವುದು ಸಾರ್ವಜನಿಕರ ಅಳಲು. </p><p>‘ನಮ್ಮ ಗ್ರಾಮದಿಂದ ಮುಖ್ಯರಸ್ತೆಯ ಮಾರ್ಗವಾಗಿ ತಾಲ್ಲೂಕು ಕೇಂದ್ರವಾದ ಭಾಲ್ಕಿ ಪಟ್ಟಣಕ್ಕೆ ತೆರಳಲು 11 ಕಿ. ಮೀ. ಕ್ರಮಿಸಬೇಕು. ಆದರೆ ಒಳಮಾರ್ಗವಾಗಿ ತಳವಾಡ (ಕೆ) ಗ್ರಾಮದ ಮೂಲಕ ಸಂಚರಿಸಿದರೆ ಕೇವಲ 8 ಕಿ.ಮೀ ಆಗುತ್ತದೆ. ಇದರಿಂದ ನಾನಾ ಕೆಲಸಗಳ ನಿಮಿತ್ತ ಪ್ರತಿದಿನ ತಾಲ್ಲೂಕು ಕೇಂದ್ರಕ್ಕೆ ತೆರಳುವ ಸಾರ್ವಜನಿಕರಿಗೆ, ರೈತರಿಗೆ, ವಿದ್ಯಾರ್ಥಿಗಳಿಗೆ ಸಮಯ ಹಾಗೂ ಇಂಧನದ ಉಳಿತಾಯ ಆಗುತ್ತದೆ’ ಎಂದು ರೈತರಾದ ಶಾಮರಾವ್ ಪರಮಾ, ಪರಮೇಶ್ವರ ಗೌರ ತಿಳಿಸಿದರು.</p><p>ಕಚ್ಚಾರಸ್ತೆ ಹಿನ್ನೆಲೆಯಲ್ಲಿ ಈ ಮಾರ್ಗದ ರಸ್ತೆಯ ಅಕ್ಕ ಪಕ್ಕದಲ್ಲಿರುವ ಸಿದ್ದೇಶ್ವರ ಮತ್ತು ತಳವಾಡ (ಕೆ) ಗ್ರಾಮದ ಅನ್ನದಾತರಿಗೆ ತಮ್ಮ ಹೊಲಗಳಲ್ಲಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ತುಂಬಾ ಅನಾನುಕೂಲವಾಗುತ್ತಿದೆ. ಮಳೆಗಾಲದಲ್ಲಂತೂ ಈ ಮಾರ್ಗದಿಂದ ನಡೆದುಕೊಂಡು ಹೊಲಗಳಿಗೆ ತೆರಳುವುದು ತುಂಬಾ ಕಷ್ಟವಾಗುತ್ತಿದೆ. ಇನ್ನು ರಾಶಿಯ ಸಮಯದಲ್ಲಿ ಹೊಲಗಳಲ್ಲಿ ಬೆಳೆದ ಬೆಳೆಗಳನ್ನು ಮನೆಗಳಿಗೆ ತೆಗೆದುಕೊಂಡು ಒಯ್ಯಲು ಸಹ ತುಂಬಾ ಹರಸಹಾಸ ಪಡುವಂತಾಗಿದೆ. ಕೂಡಲೇ ಸಂಬಂಧಪಟ್ಟಂತಹ ಅಧಿಕಾರಿಗಳು, ಜನಪ್ರತಿನಿಧಿಗಳು ಈ ರಸ್ತೆಯನ್ನು ಡಾಂಬರೀಕರಣಗೊಳಿಸಿ ಅನ್ನದಾತರಿಗೆ, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು ಎಂಬುದು ಗ್ರಾಮಸ್ಥರ ಒತ್ತಾಯವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಾಲ್ಕಿ</strong>: ತಾಲ್ಲೂಕಿನ ಸಿದ್ದೇಶ್ವರ ಗ್ರಾಮದಿಂದ ತಳವಾಡ (ಕೆ) ಸಂಪರ್ಕಿಸುವ ಒಳ ರಸ್ತೆ ಮಣ್ಣಿನಿಂದ ಕೂಡಿರುವ ಕಚ್ಚಾ ರಸ್ತೆಯಾಗಿದ್ದು ರೈತರು, ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.</p><p>ಮಣ್ಣಿನಿಂದ ಕೂಡಿರುವ ಸುಮಾರು ಎರಡೂವರೆ ಕಿಲೋ ಮೀಟರ್ ರಸ್ತೆಯ ಅಕ್ಕಪಕ್ಕ ಜಾಲಿಗಿಡಗಳು ಬೆಳೆದಿದ್ದು ದ್ವಿಚಕ್ರ ವಾಹನ ಚಾಲನೆಗೂ ತೀವ್ರ ಸಮಸ್ಯೆಯಾಗುತ್ತಿದೆ. ಕೆಲ ಕಡೆಗಳಲ್ಲಿ ರಸ್ತೆ ಅಕ್ಕಪಕ್ಕದ ಮಣ್ಣು ಕುಸಿದಿದ್ದು, ಕಂದಕ ನಿರ್ಮಾಣಗೊಂಡಿವೆ. ಇದರಿಂದ ವಾಹನಗಳ ಓಡಾಟ ಕಷ್ಟ ಸಾಧ್ಯ ಎಂಬತ್ತಾಗಿದೆ. ಮಳೆಗಾಲದಲ್ಲಂತೂ ಈ ಮಾರ್ಗದಿಂದ ನಡೆದುಕೊಂಡು ಹೋಗುವುದು ಸಹ ದುಸ್ತರದ ಮಾತಾಗಿದೆ ಎನ್ನುವುದು ಸಾರ್ವಜನಿಕರ ಅಳಲು. </p><p>‘ನಮ್ಮ ಗ್ರಾಮದಿಂದ ಮುಖ್ಯರಸ್ತೆಯ ಮಾರ್ಗವಾಗಿ ತಾಲ್ಲೂಕು ಕೇಂದ್ರವಾದ ಭಾಲ್ಕಿ ಪಟ್ಟಣಕ್ಕೆ ತೆರಳಲು 11 ಕಿ. ಮೀ. ಕ್ರಮಿಸಬೇಕು. ಆದರೆ ಒಳಮಾರ್ಗವಾಗಿ ತಳವಾಡ (ಕೆ) ಗ್ರಾಮದ ಮೂಲಕ ಸಂಚರಿಸಿದರೆ ಕೇವಲ 8 ಕಿ.ಮೀ ಆಗುತ್ತದೆ. ಇದರಿಂದ ನಾನಾ ಕೆಲಸಗಳ ನಿಮಿತ್ತ ಪ್ರತಿದಿನ ತಾಲ್ಲೂಕು ಕೇಂದ್ರಕ್ಕೆ ತೆರಳುವ ಸಾರ್ವಜನಿಕರಿಗೆ, ರೈತರಿಗೆ, ವಿದ್ಯಾರ್ಥಿಗಳಿಗೆ ಸಮಯ ಹಾಗೂ ಇಂಧನದ ಉಳಿತಾಯ ಆಗುತ್ತದೆ’ ಎಂದು ರೈತರಾದ ಶಾಮರಾವ್ ಪರಮಾ, ಪರಮೇಶ್ವರ ಗೌರ ತಿಳಿಸಿದರು.</p><p>ಕಚ್ಚಾರಸ್ತೆ ಹಿನ್ನೆಲೆಯಲ್ಲಿ ಈ ಮಾರ್ಗದ ರಸ್ತೆಯ ಅಕ್ಕ ಪಕ್ಕದಲ್ಲಿರುವ ಸಿದ್ದೇಶ್ವರ ಮತ್ತು ತಳವಾಡ (ಕೆ) ಗ್ರಾಮದ ಅನ್ನದಾತರಿಗೆ ತಮ್ಮ ಹೊಲಗಳಲ್ಲಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ತುಂಬಾ ಅನಾನುಕೂಲವಾಗುತ್ತಿದೆ. ಮಳೆಗಾಲದಲ್ಲಂತೂ ಈ ಮಾರ್ಗದಿಂದ ನಡೆದುಕೊಂಡು ಹೊಲಗಳಿಗೆ ತೆರಳುವುದು ತುಂಬಾ ಕಷ್ಟವಾಗುತ್ತಿದೆ. ಇನ್ನು ರಾಶಿಯ ಸಮಯದಲ್ಲಿ ಹೊಲಗಳಲ್ಲಿ ಬೆಳೆದ ಬೆಳೆಗಳನ್ನು ಮನೆಗಳಿಗೆ ತೆಗೆದುಕೊಂಡು ಒಯ್ಯಲು ಸಹ ತುಂಬಾ ಹರಸಹಾಸ ಪಡುವಂತಾಗಿದೆ. ಕೂಡಲೇ ಸಂಬಂಧಪಟ್ಟಂತಹ ಅಧಿಕಾರಿಗಳು, ಜನಪ್ರತಿನಿಧಿಗಳು ಈ ರಸ್ತೆಯನ್ನು ಡಾಂಬರೀಕರಣಗೊಳಿಸಿ ಅನ್ನದಾತರಿಗೆ, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು ಎಂಬುದು ಗ್ರಾಮಸ್ಥರ ಒತ್ತಾಯವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>