<p><strong>ಭಾಲ್ಕಿ:</strong> ಪುರುಷರು ಮತ್ತು ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಸರಿ ಸಮಾನರಾಗಿ ನಡೆದಾಗ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಪ್ರಾಚಾರ್ಯ ಲಕ್ಷ್ಮಣ ಕಾಂಬಳೆ ಹೇಳಿದರು.</p>.<p>ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಹೆಣ್ಣು ಸಮಾಜದ ಕಣ್ಣು. ಹೆಣ್ಣೊಂದು ಕಲಿತರೆ ಶಾಲೆ ತೆರೆದಂತೆ ಎಂಬ ಹೇಳಿಕೆಗಳು ಹೆಣ್ಣಿನ ಮಹತ್ವದ ಕುರಿತು ಮಾಹಿತಿ ನೀಡುತ್ತವೆ’ ಎಂದರು.</p>.<p>ಡಾ. ಜೈಶ್ರೀ ಪಿ. ಮಾತನಾಡಿ, ‘ಮಹಿಳೆಯರು ಮನಸ್ಸು ಮಾಡಿದರೆ ಏನನ್ನಾದರೂ ಸಾಧಿಸಬಹುದು. ಮಹಿಳೆಯರು ತಮಗೆ ದೊರೆಯುತ್ತಿರುವ ಅವಕಾಶಗಳಿಗಾಗಿ ಅಂಬೇಡ್ಕರ್ ಅವರಿಗೆ ಸದಾ ಚಿರಋಣಿಯಾಗಿರಬೇಕು’ ಎಂದು ಹೇಳಿದರು.</p>.<p>ಮಹಿಳಾ ಅಭಿವೃದ್ಧಿ ಕೋಶದ ಸಂಯೋಜಕ ರಘುನಂದನ ಮಾತನಾಡಿದರು.</p>.<p>ಎಲ್ಲ ಮಹಿಳಾ ಸಿಬ್ಬಂದಿ ವರ್ಗದವರಿಗೆ, ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸಿರುವ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.</p>.<p>ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.</p>.<p>ಪ್ರಮುಖರಾದ ಬಸವರಾಜೇಶ್ವರಿ ನಾಗಮ್ಮ ಬಂಗರಗಿ, ವಿಜಯಲಕ್ಷ್ಮಿ, ಸ್ವಪ್ನ, ತುಪ್ಪದ ವೀರಣ್ಣ, ಹೇಮಾವತಿ ಪಾಟೀಲ, ರವಿ ಮೇಟಿ, ಸಹನಾ, ಸಿಂಧು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಾಲ್ಕಿ:</strong> ಪುರುಷರು ಮತ್ತು ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಸರಿ ಸಮಾನರಾಗಿ ನಡೆದಾಗ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಪ್ರಾಚಾರ್ಯ ಲಕ್ಷ್ಮಣ ಕಾಂಬಳೆ ಹೇಳಿದರು.</p>.<p>ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಹೆಣ್ಣು ಸಮಾಜದ ಕಣ್ಣು. ಹೆಣ್ಣೊಂದು ಕಲಿತರೆ ಶಾಲೆ ತೆರೆದಂತೆ ಎಂಬ ಹೇಳಿಕೆಗಳು ಹೆಣ್ಣಿನ ಮಹತ್ವದ ಕುರಿತು ಮಾಹಿತಿ ನೀಡುತ್ತವೆ’ ಎಂದರು.</p>.<p>ಡಾ. ಜೈಶ್ರೀ ಪಿ. ಮಾತನಾಡಿ, ‘ಮಹಿಳೆಯರು ಮನಸ್ಸು ಮಾಡಿದರೆ ಏನನ್ನಾದರೂ ಸಾಧಿಸಬಹುದು. ಮಹಿಳೆಯರು ತಮಗೆ ದೊರೆಯುತ್ತಿರುವ ಅವಕಾಶಗಳಿಗಾಗಿ ಅಂಬೇಡ್ಕರ್ ಅವರಿಗೆ ಸದಾ ಚಿರಋಣಿಯಾಗಿರಬೇಕು’ ಎಂದು ಹೇಳಿದರು.</p>.<p>ಮಹಿಳಾ ಅಭಿವೃದ್ಧಿ ಕೋಶದ ಸಂಯೋಜಕ ರಘುನಂದನ ಮಾತನಾಡಿದರು.</p>.<p>ಎಲ್ಲ ಮಹಿಳಾ ಸಿಬ್ಬಂದಿ ವರ್ಗದವರಿಗೆ, ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸಿರುವ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.</p>.<p>ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.</p>.<p>ಪ್ರಮುಖರಾದ ಬಸವರಾಜೇಶ್ವರಿ ನಾಗಮ್ಮ ಬಂಗರಗಿ, ವಿಜಯಲಕ್ಷ್ಮಿ, ಸ್ವಪ್ನ, ತುಪ್ಪದ ವೀರಣ್ಣ, ಹೇಮಾವತಿ ಪಾಟೀಲ, ರವಿ ಮೇಟಿ, ಸಹನಾ, ಸಿಂಧು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>