ಭಾಲ್ಕಿ (ಬೀದರ್): ಮಾಜಿ ಸಚಿವ ಭೀಮಣ್ಣ ಖಂಡ್ರೆಯವರ ಜನ್ಮ ಶತಮಾನೋತ್ಸವ ಕಾರ್ಯಕ್ರಮ ಆರಂಭವಾಗಿದೆ.
ಪಟ್ಟಣದ ಬಿಕೆಐಟಿ ಕಾಲೇಜಿನ ಆವರಣದಲ್ಲಿ ಬೃಹತ್ ವೇದಿಕೆಯಲ್ಲಿ ಕಾರ್ಯಕ್ರಮ ಆರಂಭವಾಗಿದೆ. ಭೀಮಣ್ಣ ಖಂಡ್ರೆಯವರು ಈಗಾಗಲೇ ವೇದಿಕೆಗೆ ಬಂದಿದ್ದು, ಕುಟುಂಬ ಸದಸ್ಯರು ಆರತಿ ಬೆಳಗುತ್ತಿದ್ದಾರೆ. ಸುತ್ತೂರು, ತುಮಕೂರು, ಸಿರಿಗೆರೆ ಸೇರಿದಂತೆ ರಾಜ್ಯದ ಹಲವು ಮಠಾಧೀಶರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ,
ಮಾಜಿ ಮುಖ್ಯಮಂತ್ರಿಗಳಾದ ಸುಶೀಲಕುಮಾರ ಶಿಂದೆ, ಜಗದೀಶ ಶೆಟ್ಟರ್, ಸಚಿವರಾದ ಈಶ್ವರ ಖಂಡ್ರೆ, ರಹೀಂಖಾನ್, ಅಖಿಲ ಭಾರತ ವೀರಶೈವ ಮಹಾಸಭೆ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಇನ್ನಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಬರಬೇಕಿದೆ. ವಿವಿಧ ಕಡೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಖಂಡ್ರೆ ಹಿತೈಶಿಗಳು ಆಗಮಿಸಿದ್ದಾರೆ.