ಕಾರ್ಯಕ್ರಮದಲ್ಲಿ ಸುತ್ತೂರು, ತರಳಬಾಳು, ಶ್ರೀಶೈಲ, ತುಮಕೂರು, ಭಾಲ್ಕಿ, ಹುಬ್ಬಳ್ಳಿ ಮೂರು ಸಾವಿರ ಮಠದ ಸ್ವಾಮೀಜಿ, ಶರಣಬಸವಪ್ಪ ಅಪ್ಪ ಸೇರಿದಂತೆ ಇತರೆ ಮಠಾಧೀಶರು ಭಾಗವಹಿಸುವರು. ಮಾಜಿ ಮುಖ್ಯಮಂತ್ರಿಗಳಾದ ಎಂ.ವೀರಪ್ಪ ಮೊಯ್ಲಿ, ಸುಶೀಲಕುಮಾರ ಶಿಂಧೆ, ಅಖಿಲ ಭಾರತ ವೀರಶೈವ ಮಹಾಸಭೆ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ, ಅಖಿಲ ಭಾರತೀಯ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಗೊ.ರು ಚನ್ನಬಸಪ್ಪ, ಮಹಾಸಭೆಯ ರಾಜ್ಯ ಅಧ್ಯಕ್ಷ ಎನ್.ತಿಪ್ಪಣ್ಣ, ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ ಸೇರಿದಂತೆ ರಾಜ್ಯದ ಹಲವು ಸಚಿವರು, ಶಾಸಕರು ಭಾಗವಹಿಸುವರು ಎಂದು ವಿವರಿಸಿದರು.