<p>ಬೀದರ್: ನಗರಸಭೆಯಿಂದ ನಗರದಲ್ಲಿ ಗುರುವಾರ ಪಾದಚಾರಿ ಮಾರ್ಗ, ರಸ್ತೆ ಮಾರ್ಗದ ಒತ್ತುವರಿ ತೆರವು ಕಾರ್ಯಾಚರಣೆ ನಡೆಯಿತು.</p><p>ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತ, ಗುಂಪಾ ರಿಂಗ್ರೋಡ್, ಬಿ.ವಿ. ಭೂಮರಡ್ಡಿ ಕಾಲೇಜು ರಸ್ತೆಯಲ್ಲಿ ನಗರಸಭೆ ಪೌರಾಯುಕ್ತ ಶಿವರಾಜ ರಾಠೋಡ್ ನೇತೃತ್ವದಲ್ಲಿ ಜೆಸಿಬಿ ಮೂಲಕ ಅಕ್ರಮ ನಿರ್ಮಾಣಗಳನ್ನು ತೆರವುಗೊಳಿಸಲಾಯಿತು.</p><p>ಪಾದಚಾರಿ ಮಾರ್ಗ, ರಸ್ತೆಯನ್ನು ಒತ್ತುವರಿ ಮಾಡಿಕೊಂಡು ಶೆಡ್ ಹಾಕಿ ಟೀ ಸ್ಟಾಲ್, ಹೋಟೆಲ್, ಮಳಿಗೆಗಳನ್ನು ನಡೆಸಲಾಗುತ್ತಿತ್ತು. ಇದರಿಂದಾಗಿ ಪಾದಚಾರಿಗಳಿಗೆ ಸಮಸ್ಯೆ ಉಂಟಾಗುತ್ತಿತ್ತು. ಈ ಕುರಿತು ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ನಗರಸಭೆ ಅತಿಕ್ರಮಣ ತೆರವು ಕಾರ್ಯಾಚರಣೆ ನಡೆಸಿತು.</p><p>ನಗರದಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿಯಿಂದ ಜನಸಾಮಾನ್ಯರಿಗೆ ಆಗುತ್ತಿರುವ ಸಮಸ್ಯೆಗಳ ಕುರಿತು ‘ಪ್ರಜಾವಾಣಿ’ ಕೂಡ ಬೆಳಕು ಚೆಲ್ಲಿತ್ತು.</p><p>‘ರಸ್ತೆ ಹಾಗೂ ಪಾದಚಾರಿ ಮಾರ್ಗವನ್ನು ಒತ್ತುವರಿ ಮಾಡಿಕೊಂಡು ಕಟ್ಟಡ, ಶೆಡ್ ನಿರ್ಮಿಸಿದರೆ ಅದನ್ನು 24 ಗಂಟೆಗಳಲ್ಲಿ ತೆರವುಗೊಳಿಸಬೇಕು. ಇಲ್ಲವಾದಲ್ಲಿ ನಗರಸಭೆಯಿಂದ ಕ್ರಮ ಜರುಗಿಸಲಾಗುವುದು’ ಎಂದು ಪೌರಾಯುಕ್ತ ಶಿವರಾಜ ರಾಠೋಡ್ ಎಚ್ಚರಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ನಗರಸಭೆಯಿಂದ ನಗರದಲ್ಲಿ ಗುರುವಾರ ಪಾದಚಾರಿ ಮಾರ್ಗ, ರಸ್ತೆ ಮಾರ್ಗದ ಒತ್ತುವರಿ ತೆರವು ಕಾರ್ಯಾಚರಣೆ ನಡೆಯಿತು.</p><p>ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತ, ಗುಂಪಾ ರಿಂಗ್ರೋಡ್, ಬಿ.ವಿ. ಭೂಮರಡ್ಡಿ ಕಾಲೇಜು ರಸ್ತೆಯಲ್ಲಿ ನಗರಸಭೆ ಪೌರಾಯುಕ್ತ ಶಿವರಾಜ ರಾಠೋಡ್ ನೇತೃತ್ವದಲ್ಲಿ ಜೆಸಿಬಿ ಮೂಲಕ ಅಕ್ರಮ ನಿರ್ಮಾಣಗಳನ್ನು ತೆರವುಗೊಳಿಸಲಾಯಿತು.</p><p>ಪಾದಚಾರಿ ಮಾರ್ಗ, ರಸ್ತೆಯನ್ನು ಒತ್ತುವರಿ ಮಾಡಿಕೊಂಡು ಶೆಡ್ ಹಾಕಿ ಟೀ ಸ್ಟಾಲ್, ಹೋಟೆಲ್, ಮಳಿಗೆಗಳನ್ನು ನಡೆಸಲಾಗುತ್ತಿತ್ತು. ಇದರಿಂದಾಗಿ ಪಾದಚಾರಿಗಳಿಗೆ ಸಮಸ್ಯೆ ಉಂಟಾಗುತ್ತಿತ್ತು. ಈ ಕುರಿತು ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ನಗರಸಭೆ ಅತಿಕ್ರಮಣ ತೆರವು ಕಾರ್ಯಾಚರಣೆ ನಡೆಸಿತು.</p><p>ನಗರದಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿಯಿಂದ ಜನಸಾಮಾನ್ಯರಿಗೆ ಆಗುತ್ತಿರುವ ಸಮಸ್ಯೆಗಳ ಕುರಿತು ‘ಪ್ರಜಾವಾಣಿ’ ಕೂಡ ಬೆಳಕು ಚೆಲ್ಲಿತ್ತು.</p><p>‘ರಸ್ತೆ ಹಾಗೂ ಪಾದಚಾರಿ ಮಾರ್ಗವನ್ನು ಒತ್ತುವರಿ ಮಾಡಿಕೊಂಡು ಕಟ್ಟಡ, ಶೆಡ್ ನಿರ್ಮಿಸಿದರೆ ಅದನ್ನು 24 ಗಂಟೆಗಳಲ್ಲಿ ತೆರವುಗೊಳಿಸಬೇಕು. ಇಲ್ಲವಾದಲ್ಲಿ ನಗರಸಭೆಯಿಂದ ಕ್ರಮ ಜರುಗಿಸಲಾಗುವುದು’ ಎಂದು ಪೌರಾಯುಕ್ತ ಶಿವರಾಜ ರಾಠೋಡ್ ಎಚ್ಚರಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>