<p><strong>ಬೀದರ್: </strong>ಬಜೆಟ್ನಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ದಿ ನಿಗಮಕ್ಕೆ ₹500 ಕೋಟಿ ಹಣ ಮೀಸಲಿಡುವಂತೆ ಆಗ್ರಹಿಸಿ ಅಂಬಿಗರ ಚೌಡಯ್ಯ ಯುವಸೇನೆ ಸಂಸ್ಥಾಪಕ ಅಧ್ಯಕ್ಷ ಸುನೀಲ ಭಾವಿಕಟ್ಟಿ ನೇತೃತ್ವದಲ್ಲಿ ಪೌರಾಡಳಿತ ಹಾಗೂ ಹಜ್ ಸಚಿವ ರಹೀಂಖಾನ್ ಅವರಿಗೆ ಸಲ್ಲಿಸಿದರು.</p>.<p>‘ರಾಜ್ಯದಲ್ಲಿ 50ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ಕೋಳಿ, ಕಬ್ಬಲಿಗ, ಅಂಬಿಗ, ಬೆಸ್ತ, ಬಾರಿಕ್ ಸೇರಿದಂತೆ ಇನ್ನಿತರ ಹೆಸರುಗಳಿಂದ ಕರೆಯಲ್ಪಡುವ ಸಮುದಾಯದ ಅಂಬಿಗರ ಚೌಡಯ್ಯ ಅಭಿವೃದ್ದಿ ನಿಗಮಕ್ಕೆ ₹500 ಕೋಟಿ ಮೀಸಲಿಡಬೇಕು’ ಎಂದು ಒತ್ತಾಯಿಸಿದರು.</p>.<p>ನಮ್ಮ ಸಮುದಾಯ ಅತಿ ಹಿಂದುಳಿದಿದ್ದು, ಆರ್ಥಿಕ, ಶೈಕ್ಷಣಿಕ, ರಾಜಕೀಯವಾಗಿ ವಂಚಿತವಾಗಿದೆ. ಅನೇಕ ವರ್ಷಗಳಿಂದ ನಮ್ಮ ಸಮುದಾಯವನ್ನು ಸರ್ಕಾರಗಳು ಕಡೆಗಣಿಸುತ್ತ ಬಂದಿದೆ. ಈಗಾದರೂ ನಮ್ಮ ನಿಗಮಕ್ಕೆ ಹಣ ಮೀಸಲಿಡಬೇಕು ಎಂದು ಆಗ್ರಹಿಸಿದರು.</p>.<p>ಸೇನೆ ಪ್ರಧಾನ ಕಾರ್ಯದರ್ಶಿ ಚಂದ್ರಕಾಂತ ಹಳ್ಳಿಖೇಡಕರ್, ಬಿ.ರಾಮಣ್ಣಾ, ಶರಣಪ್ಪಾ ಖಾಸೆಂಪೂರ್ ಸೇರಿದಂತೆ ಇತರರು ಇದ್ದರು.<br /><br /><strong>ಬೇಡಿಕೆಗಳು: </strong>ರಾಜ್ಯದ ಪ್ರತಿಯೊಂದು ಜಿಲ್ಲಾ ಕೇಂದ್ರದಲ್ಲಿ ನಿಜ ಶರಣ ಅಂಬಿಗರ ಚೌಡಯ್ಯನವರ ಹೆಸರಿನಲ್ಲಿ ಸಮುದಾಯ ಭವನ ನಿರ್ಮಾಣಕ್ಕೆನ 1 ಎಕರೆ ಭೂಮಿ ಹಾಗೂ ಕಟ್ಟಡಕ್ಕೆ ಹಣ ಘೋಷಿಸಬೇಕು.</p>.<p>ರಾಜ್ಯದ ಕೆರೆಗಳು ಮತ್ತು ಜಲಾಶಯಗಳಲ್ಲಿ ಮೀನುಗಾರಿಕೆ ನಡೆಸಲು ನಿಗಮಕ್ಕೆ ಅವಕಾಶ ಮತ್ತು ಅನುಮತಿ ನೀಡಬೇಕು.</p>.<p>ವಿಧಾನಸೌಧದ ಆವರಣದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಪ್ರತಿಮೆ ಸ್ಥಾಪನೆ ಮಾಡಬೇಕು.</p>.<p>ಪ್ರತಿಯೊಂದು ಜಿಲ್ಲಾಕೇಂದ್ರದಲ್ಲಿ ಚೌಡಯ್ಯನವರ ಪ್ರತಿಮೆ ಸ್ಥಾಪಿಸಲು ಸ್ಥಳಾವಕಾಶ ಕೊಡಬೇಕು.</p>.<p>ಬೀದರ್ ಜಿಲ್ಲೆಯ ಬಸವಕಲ್ಯಾಣದ ತ್ರಿಪುರಾಂತ ಕೆರೆಯಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಮೂರ್ತಿ ಪ್ರತಿಷ್ಠಾಪಿಸಬೇಕು.</p>.<p>ಹಾವೇರಿ ಜಿಲ್ಲೆಯ ನರಸಿಪೂರದಲ್ಲಿರುವ ನಿಜಶರಣ ಅಂಬಿಗರ ಚೌಡಯ್ಯನವರ ಐಕ್ಯಸ್ಥಳವನ್ನು ಕೂಡಲಸಂಗಮ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲು ₹50 ಕೋಟಿ ಘೋಷಿಸಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ಬಜೆಟ್ನಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ದಿ ನಿಗಮಕ್ಕೆ ₹500 ಕೋಟಿ ಹಣ ಮೀಸಲಿಡುವಂತೆ ಆಗ್ರಹಿಸಿ ಅಂಬಿಗರ ಚೌಡಯ್ಯ ಯುವಸೇನೆ ಸಂಸ್ಥಾಪಕ ಅಧ್ಯಕ್ಷ ಸುನೀಲ ಭಾವಿಕಟ್ಟಿ ನೇತೃತ್ವದಲ್ಲಿ ಪೌರಾಡಳಿತ ಹಾಗೂ ಹಜ್ ಸಚಿವ ರಹೀಂಖಾನ್ ಅವರಿಗೆ ಸಲ್ಲಿಸಿದರು.</p>.<p>‘ರಾಜ್ಯದಲ್ಲಿ 50ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ಕೋಳಿ, ಕಬ್ಬಲಿಗ, ಅಂಬಿಗ, ಬೆಸ್ತ, ಬಾರಿಕ್ ಸೇರಿದಂತೆ ಇನ್ನಿತರ ಹೆಸರುಗಳಿಂದ ಕರೆಯಲ್ಪಡುವ ಸಮುದಾಯದ ಅಂಬಿಗರ ಚೌಡಯ್ಯ ಅಭಿವೃದ್ದಿ ನಿಗಮಕ್ಕೆ ₹500 ಕೋಟಿ ಮೀಸಲಿಡಬೇಕು’ ಎಂದು ಒತ್ತಾಯಿಸಿದರು.</p>.<p>ನಮ್ಮ ಸಮುದಾಯ ಅತಿ ಹಿಂದುಳಿದಿದ್ದು, ಆರ್ಥಿಕ, ಶೈಕ್ಷಣಿಕ, ರಾಜಕೀಯವಾಗಿ ವಂಚಿತವಾಗಿದೆ. ಅನೇಕ ವರ್ಷಗಳಿಂದ ನಮ್ಮ ಸಮುದಾಯವನ್ನು ಸರ್ಕಾರಗಳು ಕಡೆಗಣಿಸುತ್ತ ಬಂದಿದೆ. ಈಗಾದರೂ ನಮ್ಮ ನಿಗಮಕ್ಕೆ ಹಣ ಮೀಸಲಿಡಬೇಕು ಎಂದು ಆಗ್ರಹಿಸಿದರು.</p>.<p>ಸೇನೆ ಪ್ರಧಾನ ಕಾರ್ಯದರ್ಶಿ ಚಂದ್ರಕಾಂತ ಹಳ್ಳಿಖೇಡಕರ್, ಬಿ.ರಾಮಣ್ಣಾ, ಶರಣಪ್ಪಾ ಖಾಸೆಂಪೂರ್ ಸೇರಿದಂತೆ ಇತರರು ಇದ್ದರು.<br /><br /><strong>ಬೇಡಿಕೆಗಳು: </strong>ರಾಜ್ಯದ ಪ್ರತಿಯೊಂದು ಜಿಲ್ಲಾ ಕೇಂದ್ರದಲ್ಲಿ ನಿಜ ಶರಣ ಅಂಬಿಗರ ಚೌಡಯ್ಯನವರ ಹೆಸರಿನಲ್ಲಿ ಸಮುದಾಯ ಭವನ ನಿರ್ಮಾಣಕ್ಕೆನ 1 ಎಕರೆ ಭೂಮಿ ಹಾಗೂ ಕಟ್ಟಡಕ್ಕೆ ಹಣ ಘೋಷಿಸಬೇಕು.</p>.<p>ರಾಜ್ಯದ ಕೆರೆಗಳು ಮತ್ತು ಜಲಾಶಯಗಳಲ್ಲಿ ಮೀನುಗಾರಿಕೆ ನಡೆಸಲು ನಿಗಮಕ್ಕೆ ಅವಕಾಶ ಮತ್ತು ಅನುಮತಿ ನೀಡಬೇಕು.</p>.<p>ವಿಧಾನಸೌಧದ ಆವರಣದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಪ್ರತಿಮೆ ಸ್ಥಾಪನೆ ಮಾಡಬೇಕು.</p>.<p>ಪ್ರತಿಯೊಂದು ಜಿಲ್ಲಾಕೇಂದ್ರದಲ್ಲಿ ಚೌಡಯ್ಯನವರ ಪ್ರತಿಮೆ ಸ್ಥಾಪಿಸಲು ಸ್ಥಳಾವಕಾಶ ಕೊಡಬೇಕು.</p>.<p>ಬೀದರ್ ಜಿಲ್ಲೆಯ ಬಸವಕಲ್ಯಾಣದ ತ್ರಿಪುರಾಂತ ಕೆರೆಯಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಮೂರ್ತಿ ಪ್ರತಿಷ್ಠಾಪಿಸಬೇಕು.</p>.<p>ಹಾವೇರಿ ಜಿಲ್ಲೆಯ ನರಸಿಪೂರದಲ್ಲಿರುವ ನಿಜಶರಣ ಅಂಬಿಗರ ಚೌಡಯ್ಯನವರ ಐಕ್ಯಸ್ಥಳವನ್ನು ಕೂಡಲಸಂಗಮ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲು ₹50 ಕೋಟಿ ಘೋಷಿಸಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>