<p><strong>ಬೀದರ್:</strong> ಸ್ವಾಮಿ ವಿವೇಕಾನಂದರ ಜಯಂತಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ನಗರದ ಅರುಣೋದಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಸೋಮವಾರ ಆಯೋಜಿಸಿದ್ದ ಆಹಾರ ಕೂಟದಲ್ಲಿ ವಿವಿಧ ಬಗೆಯ 54 ತಿಂಡಿ, ತಿನಿಸುಗಳು ಎಲ್ಲರ ಬಾಯಲ್ಲಿ ನೀರೂರಿಸಿದವು. </p>.<p>ಲಡ್ಡು, ಪುಟಾಣಿ ಉಂಡಿ, ಶೇಂಗಾ ಉಂಡಿ, ರವೆ ಉಂಡಿ, ಕಾಯಿ ಹೋಳಿಗೆ, ಸಜ್ಜೆ ರೊಟ್ಟಿ, ಬಿಳಿ ಜೋಳದ ರೊಟ್ಟಿ, ಧಪಾಟಿ, ಕುಟ್ಟಿದ ಗೋಧಿ ಹುಗ್ಗಿ, ಕಾಳುಗಳು, ಹಣ್ಣುಗಳು ಗಮನ ಸೆಳೆದವು.</p>.<p>ವಿದ್ಯಾರ್ಥಿಗಳೇ ಬಗೆ ಬಗೆಯ ತಿಂಡಿ, ತಿನಿಸುಗಳನ್ನು ಮನೆಯಿಂದ ಮಾಡಿಸಿಕೊಂಡು ಬಂದದ್ದು ವಿಶೇಷವಾಗಿತ್ತು. ವಿದ್ಯಾರ್ಥಿಗಳು ವಚನ ನೃತ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟು ಸಭಿಕರನ್ನು ರಂಜಿಸಿದರು.</p>.<p>ಋಷಿಕೇಶ ಶಿಕ್ಷಣ ಸಂಸ್ಥೆಯ ಅಧ್ಯಕ್ಷರೂ ಆದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ರಾಯಚೂರು ವಲಯದ ಸಂಚಾಲಕ ಕುಶಾಲರಾವ್ ಪಾಟೀಲ್ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಸ್ಪಷ್ಟ ಗುರಿ ಇಟ್ಟುಕೊಳ್ಳಬೇಕು. ಪರಿಶ್ರಮ ವಹಿಸಿ ಅದನ್ನು ಸಾಕಾರ ಮಾಡಿಕೊಳ್ಳಬೇಕು ಎಂದು ಸಲಹೆ ಮಾಡಿದರು. </p>.<p>ಉಜ್ವಲ ಭವಿಷ್ಯಕ್ಕಾಗಿ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಹಂತದಿಂದಲೇ ಗುಣಮಟ್ಟದ ಶಿಕ್ಷಣ ನೀಡುವ ಕೆಲಸ ಆಗಬೇಕು ಎಂದು ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಜೈ ಗೋಪಾಲ್ ಭತ್ಮೆ ಅಭಿಪ್ರಾಯಪಟ್ಟರು. </p>.<p>ಹಿರಿಯ ಪತ್ರಕರ್ತ ಸದಾನಂದ ಜೋಶಿ, ಕಲ್ಯಾಣ ಕರ್ನಾಟಕ ಅನುದಾನ ರಹಿತ ಖಾಸಗಿ ಶಾಲೆ ಆಡಳಿತ ಮಂಡಳಿ ಸಂಘದ ಜಿಲ್ಲಾ ಅಧ್ಯಕ್ಷ ರಾಜೇಂದ್ರ ಮಣಗೇರೆ, ಪಟ್ಟಣ ಯೋಜನೆ ಸದಸ್ಯೆ ಶ್ರತಿ ಅರ್ಥಂ , ಗಜೇಂದ್ರ ಎಸ್. ಕೆ., ಶಾಲೆಯ ಆಡಳಿತಾಧಿಕಾರಿ ಸಂತೋಷ ಕುಮಾರ ಮಂಗಳೂರೆ ಇದ್ದರು. ಸಂಗಮೇಶ ಗಂದಗೆ ಸ್ವಾಗತಿಸಿದರು. ಅಲ್ಕಾವತಿ ಹೊಸದೊಡ್ಡೆ ನಿರೂಪಿಸಿದರು. ನೀಲಮ್ಮ ಗಜಲೆ ವಂದಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಸ್ವಾಮಿ ವಿವೇಕಾನಂದರ ಜಯಂತಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ನಗರದ ಅರುಣೋದಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಸೋಮವಾರ ಆಯೋಜಿಸಿದ್ದ ಆಹಾರ ಕೂಟದಲ್ಲಿ ವಿವಿಧ ಬಗೆಯ 54 ತಿಂಡಿ, ತಿನಿಸುಗಳು ಎಲ್ಲರ ಬಾಯಲ್ಲಿ ನೀರೂರಿಸಿದವು. </p>.<p>ಲಡ್ಡು, ಪುಟಾಣಿ ಉಂಡಿ, ಶೇಂಗಾ ಉಂಡಿ, ರವೆ ಉಂಡಿ, ಕಾಯಿ ಹೋಳಿಗೆ, ಸಜ್ಜೆ ರೊಟ್ಟಿ, ಬಿಳಿ ಜೋಳದ ರೊಟ್ಟಿ, ಧಪಾಟಿ, ಕುಟ್ಟಿದ ಗೋಧಿ ಹುಗ್ಗಿ, ಕಾಳುಗಳು, ಹಣ್ಣುಗಳು ಗಮನ ಸೆಳೆದವು.</p>.<p>ವಿದ್ಯಾರ್ಥಿಗಳೇ ಬಗೆ ಬಗೆಯ ತಿಂಡಿ, ತಿನಿಸುಗಳನ್ನು ಮನೆಯಿಂದ ಮಾಡಿಸಿಕೊಂಡು ಬಂದದ್ದು ವಿಶೇಷವಾಗಿತ್ತು. ವಿದ್ಯಾರ್ಥಿಗಳು ವಚನ ನೃತ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟು ಸಭಿಕರನ್ನು ರಂಜಿಸಿದರು.</p>.<p>ಋಷಿಕೇಶ ಶಿಕ್ಷಣ ಸಂಸ್ಥೆಯ ಅಧ್ಯಕ್ಷರೂ ಆದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ರಾಯಚೂರು ವಲಯದ ಸಂಚಾಲಕ ಕುಶಾಲರಾವ್ ಪಾಟೀಲ್ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಸ್ಪಷ್ಟ ಗುರಿ ಇಟ್ಟುಕೊಳ್ಳಬೇಕು. ಪರಿಶ್ರಮ ವಹಿಸಿ ಅದನ್ನು ಸಾಕಾರ ಮಾಡಿಕೊಳ್ಳಬೇಕು ಎಂದು ಸಲಹೆ ಮಾಡಿದರು. </p>.<p>ಉಜ್ವಲ ಭವಿಷ್ಯಕ್ಕಾಗಿ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಹಂತದಿಂದಲೇ ಗುಣಮಟ್ಟದ ಶಿಕ್ಷಣ ನೀಡುವ ಕೆಲಸ ಆಗಬೇಕು ಎಂದು ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಜೈ ಗೋಪಾಲ್ ಭತ್ಮೆ ಅಭಿಪ್ರಾಯಪಟ್ಟರು. </p>.<p>ಹಿರಿಯ ಪತ್ರಕರ್ತ ಸದಾನಂದ ಜೋಶಿ, ಕಲ್ಯಾಣ ಕರ್ನಾಟಕ ಅನುದಾನ ರಹಿತ ಖಾಸಗಿ ಶಾಲೆ ಆಡಳಿತ ಮಂಡಳಿ ಸಂಘದ ಜಿಲ್ಲಾ ಅಧ್ಯಕ್ಷ ರಾಜೇಂದ್ರ ಮಣಗೇರೆ, ಪಟ್ಟಣ ಯೋಜನೆ ಸದಸ್ಯೆ ಶ್ರತಿ ಅರ್ಥಂ , ಗಜೇಂದ್ರ ಎಸ್. ಕೆ., ಶಾಲೆಯ ಆಡಳಿತಾಧಿಕಾರಿ ಸಂತೋಷ ಕುಮಾರ ಮಂಗಳೂರೆ ಇದ್ದರು. ಸಂಗಮೇಶ ಗಂದಗೆ ಸ್ವಾಗತಿಸಿದರು. ಅಲ್ಕಾವತಿ ಹೊಸದೊಡ್ಡೆ ನಿರೂಪಿಸಿದರು. ನೀಲಮ್ಮ ಗಜಲೆ ವಂದಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>