<p>ಔರಾದ್: ತಾಲ್ಲೂಕಿನ ಕೌಠಾ (ಬಿ) ಗ್ರಾಮ ಪಂಚಾಯಿತಿಯಲ್ಲಿ ಬರುವ ಕೌಡಗಾಂವ್ ಹಾಗೂ ವಡಗಾಂವ್ (ಡಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಸೋರಳ್ಳಿ ಗ್ರಾಮದಲ್ಲಿ ಜನ ಕುಡಿಯುವ ನೀರಿಗಾಗಿ ಪರದಾಡುತ್ತಿದ್ದಾರೆ.</p>.<p>ಕೌಡಗಾಂವ್ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ನಲ್ಲಿ ನೀರು ಬಾರದೆ ಜನ ಸುಡು ಬಿಸಿಲಲ್ಲಿ ತೋಟದ ಬಾವಿಗಳಿಗೆ ಅಲೆಯಬೇಕಾಗಿದೆ. ಬಲ್ಲೂರ್ ಬಳಿಯ ಕೊಳವೆ ಬಾವಿಯಿಂದ ಕೌಡಗಾಂವ್ಗೆ ನೀರು ಪೂರೈಸುವ ಪೈಪ್ಲೈನ್ ಒಡೆದು ಹೋಗಿದೆ. ಹೀಗಾಗಿ ನೀರು ಬರುತ್ತಿಲ್ಲ. ಈ ಕುರಿತು ಮೇಲಾಧಿಕಾರಿಗಳ ಗಮನಕ್ಕೆ ತಂದರೂ ಕುಡಿಯವ ನೀರಿನ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ ಎಂದು ಭೀಮ ಆರ್ಮಿ ತಾಲ್ಲೂಕು ಅಧ್ಯಕ್ಷ ಗೌತಮ ಮೇತ್ರೆ ತಿಳಿಸಿದ್ದಾರೆ.</p>.<p>ಸೋರಳ್ಳಿ ಗ್ರಾಮದಲ್ಲೂ ಜನ ನೀರಿಗಾಗಿ ಅಹೋರಾತ್ರಿ ಪರದಾಡಬೇಕಿದೆ. ಸರ್ಕಾರ ಹಣ ಖರ್ಚು ಮಾಡಿ ಎರಡು ತೆರೆದ ಬಾವಿ ಕೊರೆದಿದೆ. ಆದರೆ ಅಲ್ಲಿಯ ನೀರು ಜನರಿಗೆ ಕೊಡುತ್ತಿಲ್ಲ. ಕೊಳವೆ ಬಾವಿ ಇದ್ದರೂ ದುರಸ್ತಿ ಮಾಡುತ್ತಿಲ್ಲ ಎಂದು ಘಾಳೆಪ್ಪ ಸೋರಳ್ಳಿ ದೂರಿದ್ದಾರೆ.</p>.<p>ಸೋರಳ್ಳಿ ಗ್ರಾಮದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇದೆ. ಈ ಎಲ್ಲ ಜನರಿಗೆ ನೀರು ಸಿಗದೆ ತೊಂದರೆಯಲ್ಲಿದ್ದಾರೆ. ಆದರೇ ಅಧಿಕಾರಿಗಳು ಕಾಳಜಿ ತೋರುತ್ತಿಲ್ಲ’ ಎಂದು ಆರೋಪಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260427-33-1147915272</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಔರಾದ್: ತಾಲ್ಲೂಕಿನ ಕೌಠಾ (ಬಿ) ಗ್ರಾಮ ಪಂಚಾಯಿತಿಯಲ್ಲಿ ಬರುವ ಕೌಡಗಾಂವ್ ಹಾಗೂ ವಡಗಾಂವ್ (ಡಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಸೋರಳ್ಳಿ ಗ್ರಾಮದಲ್ಲಿ ಜನ ಕುಡಿಯುವ ನೀರಿಗಾಗಿ ಪರದಾಡುತ್ತಿದ್ದಾರೆ.</p>.<p>ಕೌಡಗಾಂವ್ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ನಲ್ಲಿ ನೀರು ಬಾರದೆ ಜನ ಸುಡು ಬಿಸಿಲಲ್ಲಿ ತೋಟದ ಬಾವಿಗಳಿಗೆ ಅಲೆಯಬೇಕಾಗಿದೆ. ಬಲ್ಲೂರ್ ಬಳಿಯ ಕೊಳವೆ ಬಾವಿಯಿಂದ ಕೌಡಗಾಂವ್ಗೆ ನೀರು ಪೂರೈಸುವ ಪೈಪ್ಲೈನ್ ಒಡೆದು ಹೋಗಿದೆ. ಹೀಗಾಗಿ ನೀರು ಬರುತ್ತಿಲ್ಲ. ಈ ಕುರಿತು ಮೇಲಾಧಿಕಾರಿಗಳ ಗಮನಕ್ಕೆ ತಂದರೂ ಕುಡಿಯವ ನೀರಿನ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ ಎಂದು ಭೀಮ ಆರ್ಮಿ ತಾಲ್ಲೂಕು ಅಧ್ಯಕ್ಷ ಗೌತಮ ಮೇತ್ರೆ ತಿಳಿಸಿದ್ದಾರೆ.</p>.<p>ಸೋರಳ್ಳಿ ಗ್ರಾಮದಲ್ಲೂ ಜನ ನೀರಿಗಾಗಿ ಅಹೋರಾತ್ರಿ ಪರದಾಡಬೇಕಿದೆ. ಸರ್ಕಾರ ಹಣ ಖರ್ಚು ಮಾಡಿ ಎರಡು ತೆರೆದ ಬಾವಿ ಕೊರೆದಿದೆ. ಆದರೆ ಅಲ್ಲಿಯ ನೀರು ಜನರಿಗೆ ಕೊಡುತ್ತಿಲ್ಲ. ಕೊಳವೆ ಬಾವಿ ಇದ್ದರೂ ದುರಸ್ತಿ ಮಾಡುತ್ತಿಲ್ಲ ಎಂದು ಘಾಳೆಪ್ಪ ಸೋರಳ್ಳಿ ದೂರಿದ್ದಾರೆ.</p>.<p>ಸೋರಳ್ಳಿ ಗ್ರಾಮದಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇದೆ. ಈ ಎಲ್ಲ ಜನರಿಗೆ ನೀರು ಸಿಗದೆ ತೊಂದರೆಯಲ್ಲಿದ್ದಾರೆ. ಆದರೇ ಅಧಿಕಾರಿಗಳು ಕಾಳಜಿ ತೋರುತ್ತಿಲ್ಲ’ ಎಂದು ಆರೋಪಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260427-33-1147915272</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>