ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌, ಬಸವಕಲ್ಯಾಣದಲ್ಲಿ ನಾಳೆ ಮದ್ಯ ಮಾರಾಟ ನಿಷೇಧ

Last Updated 4 ಆಗಸ್ಟ್ 2020, 15:59 IST
ಅಕ್ಷರ ಗಾತ್ರ

ಬೀದರ್: ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ನಿರ್ಮಾಣ ಭೂಮಿ ಪೂಜೆ ಕಾರ್ಯಕ್ರಮದ ಪ್ರಯುಕ್ತ ಬುಧವಾರ (ಆ.5) ಮಧ್ಯರಾತ್ರಿ 12 ಗಂಟೆವರೆಗೆ ಬೀದರ್ ನಗರ ಹಾಗೂ ಬಸವಕಲ್ಯಾಣ ನಗರ ವ್ಯಾಪ್ತಿಯಲ್ಲಿ ಎಲ್ಲ ವಿಧದ ಮದ್ಯದ ಮಾರಾಟ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಆದೇಶ ಹೊರಡಿಸಿದ್ದಾರೆ.

ಅಯೋಧ್ಯೆ ರಾಮಮಂದಿರ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ. ಹಿಂದೂಪರ ಸಂಘಟನೆಯವರು ಮಂದಿರ, ಇತರ ಸ್ಥಳ ಹಾಗೂ ಮನೆಗಳಲ್ಲಿ ಸಂಭ್ರಮ ಆಚರಿಸಲಿದ್ದಾರೆ ಎಂದು ತಿಳಿದು ಬಂದಿದೆ. ಈ ಪ್ರಯುಕ್ತ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಮದ್ಯದಂಗಡಿಗಳನ್ನು ಮುಚ್ಚಿಡಲು ಆದೇಶಿಸಿದ್ದಾರೆ.

ರಾತ್ರಿ 9 ರವರೆಗೆ ಮಾತ್ರ ಅವಕಾಶ: ಜಿಲ್ಲೆಯಲ್ಲಿ ಕಂಟೇನ್ಮೆಂಟ್ ಝೋನ್‍ಗಳನ್ನು ಹೊರತುಪಡಿಸಿ ಎಲ್ಲ ವಿಧದ ಮದ್ಯದ ಅಂಗಡಿಗಳ ಅವಧಿಯನ್ನು ಆಗಸ್ಟ್ 31 ರ ವರೆಗೆ ಬೆಳಿಗ್ಗೆ 9 ರಿಂದ ರಾತ್ರಿ 9 ರವರೆಗೆ ಮಾತ್ರ ನಿಗದಿಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT