<p><strong>ಬೀದರ್:</strong> ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ನಿರ್ಮಾಣ ಭೂಮಿ ಪೂಜೆ ಕಾರ್ಯಕ್ರಮದ ಪ್ರಯುಕ್ತ ಬುಧವಾರ (ಆ.5) ಮಧ್ಯರಾತ್ರಿ 12 ಗಂಟೆವರೆಗೆ ಬೀದರ್ ನಗರ ಹಾಗೂ ಬಸವಕಲ್ಯಾಣ ನಗರ ವ್ಯಾಪ್ತಿಯಲ್ಲಿ ಎಲ್ಲ ವಿಧದ ಮದ್ಯದ ಮಾರಾಟ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಆದೇಶ ಹೊರಡಿಸಿದ್ದಾರೆ.</p>.<p>ಅಯೋಧ್ಯೆ ರಾಮಮಂದಿರ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ. ಹಿಂದೂಪರ ಸಂಘಟನೆಯವರು ಮಂದಿರ, ಇತರ ಸ್ಥಳ ಹಾಗೂ ಮನೆಗಳಲ್ಲಿ ಸಂಭ್ರಮ ಆಚರಿಸಲಿದ್ದಾರೆ ಎಂದು ತಿಳಿದು ಬಂದಿದೆ. ಈ ಪ್ರಯುಕ್ತ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಮದ್ಯದಂಗಡಿಗಳನ್ನು ಮುಚ್ಚಿಡಲು ಆದೇಶಿಸಿದ್ದಾರೆ.</p>.<p><strong>ರಾತ್ರಿ 9 ರವರೆಗೆ ಮಾತ್ರ ಅವಕಾಶ:</strong> ಜಿಲ್ಲೆಯಲ್ಲಿ ಕಂಟೇನ್ಮೆಂಟ್ ಝೋನ್ಗಳನ್ನು ಹೊರತುಪಡಿಸಿ ಎಲ್ಲ ವಿಧದ ಮದ್ಯದ ಅಂಗಡಿಗಳ ಅವಧಿಯನ್ನು ಆಗಸ್ಟ್ 31 ರ ವರೆಗೆ ಬೆಳಿಗ್ಗೆ 9 ರಿಂದ ರಾತ್ರಿ 9 ರವರೆಗೆ ಮಾತ್ರ ನಿಗದಿಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ನಿರ್ಮಾಣ ಭೂಮಿ ಪೂಜೆ ಕಾರ್ಯಕ್ರಮದ ಪ್ರಯುಕ್ತ ಬುಧವಾರ (ಆ.5) ಮಧ್ಯರಾತ್ರಿ 12 ಗಂಟೆವರೆಗೆ ಬೀದರ್ ನಗರ ಹಾಗೂ ಬಸವಕಲ್ಯಾಣ ನಗರ ವ್ಯಾಪ್ತಿಯಲ್ಲಿ ಎಲ್ಲ ವಿಧದ ಮದ್ಯದ ಮಾರಾಟ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಆದೇಶ ಹೊರಡಿಸಿದ್ದಾರೆ.</p>.<p>ಅಯೋಧ್ಯೆ ರಾಮಮಂದಿರ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ. ಹಿಂದೂಪರ ಸಂಘಟನೆಯವರು ಮಂದಿರ, ಇತರ ಸ್ಥಳ ಹಾಗೂ ಮನೆಗಳಲ್ಲಿ ಸಂಭ್ರಮ ಆಚರಿಸಲಿದ್ದಾರೆ ಎಂದು ತಿಳಿದು ಬಂದಿದೆ. ಈ ಪ್ರಯುಕ್ತ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಮದ್ಯದಂಗಡಿಗಳನ್ನು ಮುಚ್ಚಿಡಲು ಆದೇಶಿಸಿದ್ದಾರೆ.</p>.<p><strong>ರಾತ್ರಿ 9 ರವರೆಗೆ ಮಾತ್ರ ಅವಕಾಶ:</strong> ಜಿಲ್ಲೆಯಲ್ಲಿ ಕಂಟೇನ್ಮೆಂಟ್ ಝೋನ್ಗಳನ್ನು ಹೊರತುಪಡಿಸಿ ಎಲ್ಲ ವಿಧದ ಮದ್ಯದ ಅಂಗಡಿಗಳ ಅವಧಿಯನ್ನು ಆಗಸ್ಟ್ 31 ರ ವರೆಗೆ ಬೆಳಿಗ್ಗೆ 9 ರಿಂದ ರಾತ್ರಿ 9 ರವರೆಗೆ ಮಾತ್ರ ನಿಗದಿಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>